ಬೆಳಗಾವಿಯಲ್ಲಿ ಗ್ರಾಮೀಣ ಮರಾಠಿ ಶಾಲೆಗಳಿಗೆ ಭೇಟಿ ನೀಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಮರಾಠಿ ಶಾಲೆಗಳನ್ನ ಕಡೆಗಣಿಸಲಾಗುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್. ಸುರೇಶ್ಕುಮಾರ್ ಬೆಳಗಾವಿ ಗಡಿ ಭಾಗದ ಶಾಲೆಗಳಿಗೆ ಭೇಟಿ ನೀಡಿದ್ದಾರೆ.

ಬೆಳಗಾವಿ: ಮರಾಠಿ ಶಾಲೆಗಳನ್ನ ಕಡೆಗಣಿಸಲಾಗುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಇಂದು ಮರಾಠಿ ಶಾಲೆಗಳಿಗೆ ಭೇಟಿ ನೀಡಿದ್ದಾರೆ. ಶಾಲೆಗಳನ್ನು ಪರಿಶೀಲಿಸುವುದರ ಮೂಲಕ ಉದ್ಧವ್ ಠಾಕ್ರೆಗೆ ತಿರುಗೇಟು ನೀಡಿದ್ದಾರೆ.
ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದ ಖಾನಾಪುರ ತಾಲೂಕಿನ ಗ್ರಾಮಗಳಾದ ಜಾಂಬೋಟಿ, ನಂದಗಡ, ಮಂಗೇನಕೊಪ್ಪ ಗ್ರಾಮದಲ್ಲಿರುವ ಶಾಲೆಗಳಿಗೆ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಶಾಲಾ ಶಿಕ್ಷಕರು, ಮಕ್ಕಳ ಸಮಸ್ಯೆಯ ಕುರಿತು ವಿಚಾರಿಸಿದ್ದಾರೆ.
ತರುವಾಯ ಮರಾಠಿ ಶಾಲೆಗಳಲ್ಲಿ ನಾಡಗೀತೆಗಳನ್ನು ಹಾಡಿಸುವುದಿಲ್ಲ ಎಂಬ ಕನ್ನಡಪರ ಸಂಘಟನೆಗಳ ಆರೋಪಕ್ಕೆ ಎದುರಾಗಿ ವಿದ್ಯಾರ್ಥಿಗಳಲ್ಲಿ ನಾಡಗೀತೆ ಹಾಡಿಸಿ, ಅವರೊಡನೆ ಸುರೇಶ್ ಕುಮಾರ್ ಕೂಡಾ ನಾಡಗೀತೆಯನ್ನು ಹಾಡಿದ್ದಾರೆ.
ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇನೆ – ಉದ್ಧಟತನ ಮಾತುಗಳನ್ನು ಉದುರಿಸಿದ ಉದ್ಧವ ಠಾಕ್ರೆ
Published On - 6:18 pm, Mon, 8 February 21