AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ

ಉತ್ತರ ಕರ್ನಾಟಕಕ್ಕೆ ತೊಂದರೆಯಾದರೆ ಪ್ರತ್ಯೇಕತೆ ಕೂಗು ಎಬ್ಬಿಸುವೆ. ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುತ್ತೇನೆ. ಉತ್ತರ ಕರ್ನಾಟಕಕ್ಕೆ ಆಗುವ ತೊಂದರೆ ಮುಂದುವರೆದರೆ ಮತ್ತೆ ಧ್ವನಿ ಎತ್ತುವೆ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ ಎಂದು ಉಮೇಶ್ ಕತ್ತಿ ತಿಳಿಸಿದರು.

ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ
ಉಮೇಶ್ ಕತ್ತಿ
TV9 Web
| Edited By: |

Updated on: Jul 12, 2021 | 12:54 PM

Share

ಧಾರವಾಡ: ನಾನು 8 ಸಲ ಶಾಸಕ, 6 ಇಲಾಖೆ ನಿರ್ವಹಿಸಿದವನು. ನನಗೆ ಅನುಭವ ಇದೆ. ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಧಾರವಾಡದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಯೋಗ್ಯತೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಕಳಂಕರಹಿತ ಶಾಸಕ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ತೀರ್ಮಾನ ಮಾಡಿದರೆ ಮುಖ್ಯಮಂತ್ರಿ ಆಗುವ ಆಸೆ ಇದೆ. ಸಿಎಂ ಆದ ಮೇಲೆ ಪ್ರಧಾನಿಯಾಗುವ ಆಸೆಯೂ ಇರುತ್ತೆ. ಈಗ ಸದ್ಯಕ್ಕೆ ಅಖಂಡ ಕರ್ನಾಟಕದಲ್ಲಿ ಬದುಕಿದ್ದೇನೆ. ಕರ್ನಾಟಕದ ಮುಖ್ಯಮಂತ್ರಿ ಆಗುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ತೊಂದರೆಯಾದರೆ ಪ್ರತ್ಯೇಕತೆ ಕೂಗು ಎಬ್ಬಿಸುವೆ. ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುತ್ತೇನೆ. ಉತ್ತರ ಕರ್ನಾಟಕಕ್ಕೆ ಆಗುವ ತೊಂದರೆ ಮುಂದುವರೆದರೆ ಮತ್ತೆ ಧ್ವನಿ ಎತ್ತುವೆ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ ಎಂದು ಉಮೇಶ್ ಕತ್ತಿ ತಿಳಿಸಿದರು. ಜೊತೆಗೆ ಉತ್ತರ ಕರ್ನಾಟಕವನ್ನು ಒಡೆಯುವ ಉದ್ದೇಶ ನನಗಿಲ್ಲ. ಅಖಂಡ ಕರ್ನಾಟಕದಲ್ಲಿದ್ದು ಅದನ್ನು ಆಳಬೇಕೆಂಬ ಉದ್ದೇಶ ನನಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಸಲ ಉತ್ತರ ಕರ್ನಾಟಕದವರಿಗೆ ಸ್ಥಾನ ಸಿಗಬಹುದು. ನನಗೆ ಮುಖ್ಯಮಂತ್ರಿಯಾಗಲು ಇನ್ನೂ 15 ವರ್ಷ ಸಮಯ ಇದೆ. ಈಗ 60 ವರ್ಷ, ಇನ್ನು 15 ವರ್ಷದಲ್ಲಿ ಸಿಎಂ ಆಗಬಹುದು. ಅರವಿಂದ ಬೆಲ್ಲದ್ ಯಾಕೆ ಮುಖ್ಯಮಂತ್ರಿ ಆಗಬಾರದು ಅವರ ತಂದೆ ಶಾಸಕರಾಗಿದ್ರು, ಅವರೂ ಶಾಸಕರಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ನಾನು, ನಿರಾಣಿ ಅರವಿಂದ ಬೆಲ್ಲದ್ ಎಲ್ಲರೂ ಮುಖ್ಯಮಂತ್ರಿ ಆಗಬಹುದು ಎಂದು ಉಮೇಶ್ ಕತ್ತಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

Mekedatu Project: ಮೇಕೆದಾಟು ಯೋಜನೆಗೆ ವಿರೋಧ; ಸರ್ವ ಪಕ್ಷ ನಾಯಕರ ಮಹತ್ವದ ಸಭೆ ಕರೆದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

(Minister Umesh Katti says i am perfect suit for Chief Minister position)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ