AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ

ಉತ್ತರ ಕರ್ನಾಟಕಕ್ಕೆ ತೊಂದರೆಯಾದರೆ ಪ್ರತ್ಯೇಕತೆ ಕೂಗು ಎಬ್ಬಿಸುವೆ. ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುತ್ತೇನೆ. ಉತ್ತರ ಕರ್ನಾಟಕಕ್ಕೆ ಆಗುವ ತೊಂದರೆ ಮುಂದುವರೆದರೆ ಮತ್ತೆ ಧ್ವನಿ ಎತ್ತುವೆ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ ಎಂದು ಉಮೇಶ್ ಕತ್ತಿ ತಿಳಿಸಿದರು.

ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ
ಉಮೇಶ್ ಕತ್ತಿ
TV9 Web
| Edited By: |

Updated on: Jul 12, 2021 | 12:54 PM

Share

ಧಾರವಾಡ: ನಾನು 8 ಸಲ ಶಾಸಕ, 6 ಇಲಾಖೆ ನಿರ್ವಹಿಸಿದವನು. ನನಗೆ ಅನುಭವ ಇದೆ. ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಧಾರವಾಡದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಯೋಗ್ಯತೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಕಳಂಕರಹಿತ ಶಾಸಕ, ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪಕ್ಷ ತೀರ್ಮಾನ ಮಾಡಿದರೆ ಮುಖ್ಯಮಂತ್ರಿ ಆಗುವ ಆಸೆ ಇದೆ. ಸಿಎಂ ಆದ ಮೇಲೆ ಪ್ರಧಾನಿಯಾಗುವ ಆಸೆಯೂ ಇರುತ್ತೆ. ಈಗ ಸದ್ಯಕ್ಕೆ ಅಖಂಡ ಕರ್ನಾಟಕದಲ್ಲಿ ಬದುಕಿದ್ದೇನೆ. ಕರ್ನಾಟಕದ ಮುಖ್ಯಮಂತ್ರಿ ಆಗುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ತೊಂದರೆಯಾದರೆ ಪ್ರತ್ಯೇಕತೆ ಕೂಗು ಎಬ್ಬಿಸುವೆ. ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುತ್ತೇನೆ. ಉತ್ತರ ಕರ್ನಾಟಕಕ್ಕೆ ಆಗುವ ತೊಂದರೆ ಮುಂದುವರೆದರೆ ಮತ್ತೆ ಧ್ವನಿ ಎತ್ತುವೆ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ ಎಂದು ಉಮೇಶ್ ಕತ್ತಿ ತಿಳಿಸಿದರು. ಜೊತೆಗೆ ಉತ್ತರ ಕರ್ನಾಟಕವನ್ನು ಒಡೆಯುವ ಉದ್ದೇಶ ನನಗಿಲ್ಲ. ಅಖಂಡ ಕರ್ನಾಟಕದಲ್ಲಿದ್ದು ಅದನ್ನು ಆಳಬೇಕೆಂಬ ಉದ್ದೇಶ ನನಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಸಲ ಉತ್ತರ ಕರ್ನಾಟಕದವರಿಗೆ ಸ್ಥಾನ ಸಿಗಬಹುದು. ನನಗೆ ಮುಖ್ಯಮಂತ್ರಿಯಾಗಲು ಇನ್ನೂ 15 ವರ್ಷ ಸಮಯ ಇದೆ. ಈಗ 60 ವರ್ಷ, ಇನ್ನು 15 ವರ್ಷದಲ್ಲಿ ಸಿಎಂ ಆಗಬಹುದು. ಅರವಿಂದ ಬೆಲ್ಲದ್ ಯಾಕೆ ಮುಖ್ಯಮಂತ್ರಿ ಆಗಬಾರದು ಅವರ ತಂದೆ ಶಾಸಕರಾಗಿದ್ರು, ಅವರೂ ಶಾಸಕರಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ನಾನು, ನಿರಾಣಿ ಅರವಿಂದ ಬೆಲ್ಲದ್ ಎಲ್ಲರೂ ಮುಖ್ಯಮಂತ್ರಿ ಆಗಬಹುದು ಎಂದು ಉಮೇಶ್ ಕತ್ತಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಸಿಡಿಲು ಬಡಿದು ಮೃತಪಟ್ಟ ಜನರ ಕುಟುಂಬಗಳಿಗೆ ಪರಿಹಾರ ಧನ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

Mekedatu Project: ಮೇಕೆದಾಟು ಯೋಜನೆಗೆ ವಿರೋಧ; ಸರ್ವ ಪಕ್ಷ ನಾಯಕರ ಮಹತ್ವದ ಸಭೆ ಕರೆದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

(Minister Umesh Katti says i am perfect suit for Chief Minister position)

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್