AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ‌ ಮತ್ತೆ ಆಕ್ಟಿವ್: ಗೋ ಬ್ಯಾಕ್ ಅಭಿಯಾನ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಸಚಿವ ಸೋಮಣ್ಣ

ಸಚಿವ ಸೋಮಣ್ಣ ಚಾಮರಾಜನಗರದಲ್ಲಿ‌ ಮತ್ತೆ ಆಕ್ಟಿವ್ ಆಗಿದ್ದು. ತಮ್ಮ ವಿರುದ್ಧ ಗೋ ಬ್ಯಾಕ್ ಅಭಿಯಾನ ಡ್ಯಾಮೇಜ್ ಕಂಟ್ರೋಲ್‌ ಗೆ ಮುಂದಾಗಿದ್ದಾರೆ.

ಚಾಮರಾಜನಗರದಲ್ಲಿ‌ ಮತ್ತೆ ಆಕ್ಟಿವ್:  ಗೋ ಬ್ಯಾಕ್ ಅಭಿಯಾನ ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಸಚಿವ ಸೋಮಣ್ಣ
ಸಚಿವ ವಿ.ಸೋಮಣ್ಣ ವಿರುದ್ದ ಗ್ರಾಮಸ್ಥರ ಅಭಿಯಾನ
ರಮೇಶ್ ಬಿ. ಜವಳಗೇರಾ
|

Updated on: Mar 26, 2023 | 10:35 AM

Share

ಮುಖ್ಯಾಂಶಗಳು

  • ಚಾಮರಾಜನಗರದಲ್ಲಿ‌ ಮತ್ತೆ ಆಕ್ಟಿವ್ ಆದ ಸಚಿವ ಸೋಮಣ್ಣ
  • ಗೋ ಬ್ಯಾಕ್ ಅಂತ ಅಭಿಯಾನ ಶುರವಾಗುತ್ತಿದ್ದಂತೆ ಡ್ಯಾಮೇಜ್ ಕಂಟ್ರೋಲ್‌ ಗೆ ಮುಂದಾದ ಸಚಿವ ಸೊಮಣ್ಣ.
  • ವೀರಭದ್ರ ಸ್ವಾಮಿ ರಥ ನಿರ್ಮಿಸಿಕೊಡುವುದಾಗಿ ಹೇಳಿ ಮಾತು ತಪ್ಪಿದ್ದ ಸೋಮಣ್ಣ

ಚಾಮರಾಜನಗರ: ಚುನಾವಣೆ ಹೊಸ್ತಿಲಲ್ಲಿ ತಮ್ಮ ವಿರುದ್ಧ ಚಾಮರಾಜನಗರದಲ್ಲಿ (Chamarajnagar) ಗೋ ಬ್ಯಾಕ್ (Go Back Somanna) ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ವಸತಿ ಸಚಿವ ವಿ.ಸೋಮಣ್ಣ(V Somanna) ಎಚ್ಚೆತ್ತುಕೊಂಡಿದ್ದಾರೆ. ಹೈಕಮಾಂಡ್​ ನಾಯಕರು ಸಮಾಧಾನ ಮಾಡಿದ ಬೆನ್ನಲೇ ಸೋಮಣ್ಣ ತಮ್ಮ ಉಸ್ತುವಾರಿ ಜಿಲ್ಲೆ ಚಾಮರಾಜನಗರದಲ್ಲಿ ಆ್ಯಕ್ಟೀವ್ ಆಗಿದ್ದು, ಗೋ ಬ್ಯಾಕ್ ಅಭಿಯಾನ ಡ್ಯಾಮೇಜ್ ಕಂಟ್ರೋಲ್​ ಮುಂದಾಗಿದ್ದಾರೆ. ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ಹೊಸ ತೇರು ನಿರ್ಮಾಣ ಮಾಡಿಕೊಡುವುದಾಗಿ ಕೊಟ್ಟಿದ್ದ ಮಾತು ತಪ್ಪಿದ್ದರು, ಈ ಹಿನ್ನೆಲೆಯಲ್ಲಿ ಸೋಮಣ್ಣ ವಿರುದ್ಧ ಚಾಮರಾಜನಗರ ಜಲ್ಲೆಯ ಚನ್ನಪ್ಪನಪುರ ಗ್ರಾಮಸ್ಥರು ‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ ನಡೆಸಿ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸೋಮಣ್ಣ ಗ್ರಾಮಸ್ಥರೊಂದಿಗೆ ಸಭೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಮುರಿದ ರಥ ನಿರ್ಮಾಣ ಮಾಡಿ ಕೊಡುವುದಾಗಿ ಹೇಳಿ ಮಾತು ತಪ್ಪಿದ ಸೋಮಣ್ಣ; ಸಚಿವರ ವಿರುದ್ಧ ಗೋ ಬ್ಯಾಕ್​ ಅಭಿಯಾನ

ಹೌದು…ಇದೇ ಮಾರ್ಚ್​ 26 ಇಲ್ಲವೇ 27 ಕ್ಕೆ ಸಚಿವ ಸೋಮಣ್ಣ ಗ್ರಾಮದ ದೇಗುಲಕ್ಕೆ ಬಂದು ಕೊಟ್ಟ ಮಾತಿನಂತೆ ರಥ ನಿರ್ಮಿಸಿಕೊಡಬೇಕು ಇಲ್ಲದಿದ್ದರೇ ಗೋ ಬ್ಯಾಕ್ ಸೋಮಣ್ಣ ಹೋರಾಟ ಮಾಡುತ್ತೇವೆ‌. ಜೊತೆಗೆ, ಚುನಾವಣೆಯನ್ನೂ ಬಹಿಷ್ಕರಿಸುತ್ತೇವೆ ಎಂದು ಗ್ರಾಮದ ಮುಖಂಡರುಗಳು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸೋಮಣ್ಣ ಇದೀಗ ದಿಢೀರ್​ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಚನ್ನಪ್ಪನಪುರ ಗ್ರಾಮದ ವಿವಿಧ ಸಮುದಾಯಗಳ ಮಖಂಡರ ಜೊತೆ ಮಾತುಕತೆ ನಡೆಸಲಿದ್ದಾರೆ.

ಇಂದು(ಮಾರ್ಚ್ 26) ಮಧ್ಯಾಹ್ನ 2 ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದರೊಂದಿಗೆ ಅಸಮಾಧಾನಿತರನ್ನ ಸಮಾಧಾನ ಮಾಡುವ ಪ್ಲಾನ್ ಮಾಡಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ಗೋ ಬ್ಯಾಕ್​ ಅಭಿಯಾನ ಡ್ಯಾಮೇಜ್​ ಕಂಟ್ರೋಲ್​ಗೆ ಕಸರತ್ತು ನಡೆಸಿದ್ದಾರೆ.

ಆಗಿದ್ದೇನು?

ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದಲ್ಲಿ 400 ವರ್ಷ ಪುರಾತನವಾದ ವೀರಭದ್ರೇಶ್ವರ ಸ್ವಾಮಿ ದೇಗುಲವಿದೆ. ಈ ಐತಿಹಾಸಿಕ ದೇವಾಲಯ ಶಿಥಿಲಗೊಂಡಿದ್ದು ರಥವೂ ಕೂಡ ಹಾಳಾಗಿದೆ. ಗ್ರಾಮಕ್ಕೆ ಸಚಿವ ಸೋಮಣ್ಣ ಬಂದಿದ್ದ ವೇಳೆ ದೇಗುಲ ಜೀರ್ಣೋದ್ಧಾರ ಮಾಡಲು ಕ್ರಮ ವಹಿಸುತ್ತೇನೆ ಜೊತೆಗೆ ರಥ ಮಾಡಿಸಿಕೊಡುತ್ತೇನೆ ಎಂದು ಸೋಮಣ್ಣ ಭರವಸೆ ಕೊಟ್ಟಿದ್ದರು. ಆದರೆ, ಸುತ್ತಮುತ್ತಲಿನ ಗ್ರಾಮದ ಒಟ್ಟು 24 ಕೋಮುಗಳ ಮುಖಂಡರು ಸೋಮಣ್ಣ ಅವರನ್ನು ನಗರದಲ್ಲಿ ಮತ್ತು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದ ವೇಳೆ ಅಸೌಜನ್ಯದಿಂದ ನಡೆದುಕೊಂಡು ತಿರಸ್ಕಾರದಿಂದ ಕಂಡರು ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸೋಮಣ್ಣ ನಡೆ ಖಂಡಿಸಿ ಗ್ರಾಮದ ಮುಖಂಡರುಗಳು ಸಭೆ ಸೇರಿ ನಿರ್ಣಯ ಕೈಗೊಂಡಿದ್ದು ಇದೇ 26 ಇಲ್ಲವೇ 27ಕ್ಕೆ ಸೋಮಣ್ಣ ದೇವಾಲಯಕ್ಕೆ ಬಂದು ಭರವಸೆ ಹಾಗೂ ಅವರ ಅಭಿಪ್ರಾಯ ತಿಳಿಸಬೇಕು, ಇಲ್ಲದಿದ್ದರೇ ಗೋ ಬ್ಯಾಕ್ ಸೋಮಣ್ಣ ಹೋರಾಟ ಮಾಡುತ್ತೇವೆ ಎಚ್ಚರಿಸಿದ್ದರು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!