AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಮಾಡದ ಸಚಿವರು, ಶಾಸಕರಿಗೆ ಈ ಬಾರಿ ಟಿಕೆಟ್​ ಸಿಗಲ್ಲ; ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಟಿಕೆಟ್​ ಮಾತು ಜೋರಾಗಿದೆ. ಈ ವೇಳೆ ಕ್ಷೇತ್ರದಲ್ಲಿ ಕೆಲಸ ಮಾಡದ ಸಚಿವರು, ಶಾಸಕರಿಗೆ ಈ ಬಾರಿ ಟಿಕೆಟ್​ ಸಿಗಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಹೇಳಿದ್ದಾರೆ.

ಕೆಲಸ ಮಾಡದ ಸಚಿವರು, ಶಾಸಕರಿಗೆ ಈ ಬಾರಿ ಟಿಕೆಟ್​ ಸಿಗಲ್ಲ; ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್
ಬಿಜೆಪಿ ಟಿಕೆಟ್​ ಹಂಚಿಕೆ ವಿಚಾರವಾಗಿ ಮಾತನಾಡಿದ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 21, 2023 | 3:28 PM

Share

ಕಲಬುರಗಿ: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಈ ಬಾರಿ ಹೇಗಾದರೋ ಗೆಲ್ಲಬೇಕೇಂಬ ಉದ್ದೇಶದಿಂದ ಶತಾಯ ಗಥಾಯ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಈ ಬಾರಿ ಯಾವ ಕ್ಷೇತ್ರದಿಂದ ಯಾರಿಗೆ ಟಿಕೆಟ್​ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಂತೆ ಕೆಲಸ ಮಾಡದ ಸಚಿವರು, ಶಾಸಕರಿಗೆ ಈ ಬಾರಿ ಟಿಕೆಟ್​ ಸಿಗಲ್ಲ, ಯಾರು ಕೆಲಸ ಮಾಡುವುದಿಲ್ಲವೋ, ಜನರಿಗೆ ಸಿಗುವುದಿಲ್ಲವೋ ಅಂತಹವರಿಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲ, ಗುಜರಾತ್​​, ಉತ್ತರ ಪ್ರದೇಶ ಮಾದರಿಯಲ್ಲಿ ಈ ಬಾರಿ ಟಿಕೆಟ್ ಹಂಚಿಕೆ ಮಾಡಲಾಗುವುದು ಮತ್ತು ಯಾರು ಆಚಾರ ವಿಚಾರದಲ್ಲಿ ಸರಿ ಇರುತ್ತಾರೋ ಅಂತಹವರಿಗೆ ಪಕ್ಷ ರಕ್ಷಣೆ ನೀಡುತ್ತೆ. ಜನವಿರೋಧಿ ಕೆಲಸ ಮಾಡುವವರಿಗೆ ಟಿಕೆಟ್ ಕಟ್​ ಮಾಡ್ತಾರೆ, ಯಾರಿಗೆ ಟಿಕೆಟ್​ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಕಲಬುರಗಿ ನಗರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಟಿಕೆಟ್​ ಆಕಾಂಕ್ಷಿಗಳಿಗೆ ಶಾಕ್​ ನೀಡಿದ್ದಾರೆ.

ಈ ಬಾರಿ ಹಾಲಿ ಶಾಸಕರು,‌ ಸಚಿವರಿಗೊ ಕೂಡಾ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಗುಜರಾತ್, ಉತ್ತರಪ್ರದೇಶದ ಮಾದರಿಯಂತೆ ಟಿಕೆಟ್​ ಹಂಚಿಕೆ ಮಾಡುತ್ತಿದ್ದು, ಜನರಿಗೆ ಯಾರು ವಿರುದ್ದವಾಗಿದ್ದಾರೋ ಅಂತಹ ಶಾಸಕರು, ಸಚಿವರಿಗೆ ಟಿಕೆಟ್​ ನೀಡದೇ, ಬೇರೆಯವರಿಗೆ ಟಿಕೆಟ್ ನೀಡಲಾಗುತ್ತದೆ. ಆದರೆ ಯಾರಿಗೆ ಟಿಕೆಟ್ ನೀಡಬೇಕು ಅನ್ನೋದನ್ನು ಪಾರ್ಟಿ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದಿದ್ದಾರೆ. ಇನ್ನು ಟಿಕೆಟ್​ ಹಂಚಿಕೆ ವಿಚಾರವಾಗಿ ಈ ಕುರಿತು ಹಲವು ವಿಚಾರಗಳು ಕೇಳಿಬರುತ್ತಿದ್ದು, ಹಾಲಿ ಶಾಸಕರು, ಸಚಿವರುಗಳಿಗೆ ಟಿಕೆಟ್​ ಕೈ ತಪ್ಪುವ ಭೀತಿ ಎದುರಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ