AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ-ಸಕ್ರಮ: ಬೆಂಗಳೂರು ನಿಮ್ಮ ಅಪ್ಪಂದಾ? ಸಿಎಂ ಮುಂದೆ ಕಿತ್ತಾಡಿಕೊಂಡ್ರು

ಬೆಂಗಳೂರು: ಕೊರೊನಾ ಸಂಕಷ್ಟ ಸಂದರ್ಭದಲ್ಲೂ ಅಕ್ರಮ-ಸಕ್ರಮ ಜಾರಿ ವಿಚಾರವಾಗಿ ಇಬ್ಬರು ಹಿರಿಯ ಸಚಿವರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಕ್ಯಾಬಿನೆಟ್ ಸಭೆ ಅನ್ನೋದನ್ನೂ ಮರೆತು ಬೆಂಗಳೂರು ಯಾರ ಅಪ್ಪಂದು..? ಬೆಂಗಳೂರು ನಿಮ್ಮ ಅಪ್ಪಂದಾ..? ನಮ್ಮ ಅಪ್ಪಂದಾ..? ನಿನಗೇನಾದರೂ ಗೊತ್ತೇನಯ್ಯಾ ಬೆಂಗಳೂರು ಕಷ್ಟ..? ಎಂದು ಇಬ್ಬರು ಮಹಾ ನಾಯಕರು ಟಾಕ್ ವಾರ್ ನಡೆಸಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಸಚಿವ ವಿ. ಸೋಮಣ್ಣ, ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿಯಾಗಿದೆ. ಬೆಂಗಳೂರು ಕಷ್ಟ ನಮಗಷ್ಟೇ ಗೊತ್ತು ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಈ […]

ಅಕ್ರಮ-ಸಕ್ರಮ: ಬೆಂಗಳೂರು ನಿಮ್ಮ ಅಪ್ಪಂದಾ? ಸಿಎಂ ಮುಂದೆ ಕಿತ್ತಾಡಿಕೊಂಡ್ರು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on:May 15, 2020 | 12:11 PM

Share

ಬೆಂಗಳೂರು: ಕೊರೊನಾ ಸಂಕಷ್ಟ ಸಂದರ್ಭದಲ್ಲೂ ಅಕ್ರಮ-ಸಕ್ರಮ ಜಾರಿ ವಿಚಾರವಾಗಿ ಇಬ್ಬರು ಹಿರಿಯ ಸಚಿವರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಕ್ಯಾಬಿನೆಟ್ ಸಭೆ ಅನ್ನೋದನ್ನೂ ಮರೆತು ಬೆಂಗಳೂರು ಯಾರ ಅಪ್ಪಂದು..? ಬೆಂಗಳೂರು ನಿಮ್ಮ ಅಪ್ಪಂದಾ..? ನಮ್ಮ ಅಪ್ಪಂದಾ..? ನಿನಗೇನಾದರೂ ಗೊತ್ತೇನಯ್ಯಾ ಬೆಂಗಳೂರು ಕಷ್ಟ..? ಎಂದು ಇಬ್ಬರು ಮಹಾ ನಾಯಕರು ಟಾಕ್ ವಾರ್ ನಡೆಸಿದ್ದಾರೆ.

ಕ್ಯಾಬಿನೆಟ್ ಸಭೆಯಲ್ಲಿ ಸಚಿವ ವಿ. ಸೋಮಣ್ಣ, ಜೆ.ಸಿ. ಮಾಧುಸ್ವಾಮಿ ನಡುವೆ ಮಾತಿನ ಚಕಮಕಿಯಾಗಿದೆ. ಬೆಂಗಳೂರು ಕಷ್ಟ ನಮಗಷ್ಟೇ ಗೊತ್ತು ಎಂದು ಸಚಿವ ಸೋಮಣ್ಣ ಹೇಳಿದ್ದಾರೆ. ಈ ವೇಳೆ ಬೆಂಗಳೂರು ಏನು ನಿಮ್ಮಪ್ಪಂದಾ, ಬೆಂಗಳೂರು ಎಲ್ಲರದ್ದು ಕಾನೂನು ವಿಚಾರ ಏನಿದೆ ಅದನ್ನು ಹೇಳುತ್ತಿದ್ದೇನೆ ಎಂದು ಸೋಮಣ್ಣ ವಿರುದ್ಧ ಸಚಿವ ಮಾಧುಸ್ವಾಮಿ ನಿಗಿನಿಗಿ ಕೆಂಡಕಾರಿದ್ದಾರೆ.

ಸೋಮಣ್ಣ-ಮಾಧುಸ್ವಾಮಿ ಇಬ್ಬರ ಕಿತ್ತಾಟದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಕ್ಕಾಬಿಕ್ಕಿಯಾಗಿದ್ದಾರೆ. ಈ ರೀತಿ ಕಿತ್ತಾಡಿದ್ರೆ ಸರ್ಕಾರದ ಇಮೇಜ್ ಏನಾಗಬೇಕು? ಹಿರಿಯ ಸಚಿವರೇ ಕಿತ್ತಾಡ್ತಿದ್ದಾರೆ ಅಂತಾ ಜನ ಆಡಿಕೊಳ್ತಾರೆ. ಜಗಳ ನಿಲ್ಲಿಸಿ ಸುಮ್ಮನಿರುವಂತೆ ಬಿಎಸ್​ವೈ ಪರಿಪರಿಯಾಗಿ ಬೇಡಿಕೊಂಡರು. ಯಡಿಯೂರಪ್ಪ ರಿಕ್ವೆಸ್ಟ್​ಗೂ ಹಿರಿಯ ಸಚಿವರು ಕಿವಿಗೊಡಲಿಲ್ಲ. ಕೊನೆಗೆ ಇಬ್ಬರ ಜಗಳದಲ್ಲಿ ಮೂಕ ಪ್ರೇಕ್ಷಕನಾಗಿ ಸುಮ್ಮನೆ ಕುಳಿತರು.

Published On - 11:32 am, Fri, 15 May 20

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK