MSIL ಮದ್ಯ ಮಳಿಗೆಯಲ್ಲಿ ಉದ್ಯೋಗಕ್ಕೆ ಸಚಿವರ ಶಿಫಾರಸ್ಸು ಪತ್ರ! ಹೈಕೋರ್ಟ್​ ಹೇಳಿದ್ದೇನು?

ಬೆಂಗಳೂರು: ಇಬ್ಬರು ಯುವಕರಿಗೆ MSIL ಮದ್ಯದ ಅಂಗಡಿಯಲ್ಲಿ ನೌಕರಿ ನೀಡಲು ಶಿಫಾರಸು ಮಾಡಿದ್ದ ಸಚಿವರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರು ತಮ್ಮ ಶಿಫಾರಸು ಪತ್ರವನ್ನು ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪಶು ಸಂಗೋಪನೆ ಸಚಿವ ಪ್ರಭು ಚವಾಣ್​​ ಇಬ್ಬರು ಯುವಕರಿಗೆ MSIL ಮದ್ಯ ಮಳಿಗೆಯಲ್ಲಿ ಕೆಲಸ ನೀಡುವಂತೆ ಶಿಫಾರಸು ಮಾಡಿದ್ದರು. ಈ ವಿಷಯ ತಿಳಿದ ಬೀದರ್​ನ ಸೋಮನಾಥ್ ಎಂಬುವವರು ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಚಿವರ ಕಾರ್ಯಕ್ಕೆ […]

MSIL ಮದ್ಯ ಮಳಿಗೆಯಲ್ಲಿ ಉದ್ಯೋಗಕ್ಕೆ ಸಚಿವರ ಶಿಫಾರಸ್ಸು ಪತ್ರ! ಹೈಕೋರ್ಟ್​ ಹೇಳಿದ್ದೇನು?
ಸಾಧು ಶ್ರೀನಾಥ್​

Updated on: Aug 12, 2020 | 6:45 PM

ಬೆಂಗಳೂರು: ಇಬ್ಬರು ಯುವಕರಿಗೆ MSIL ಮದ್ಯದ ಅಂಗಡಿಯಲ್ಲಿ ನೌಕರಿ ನೀಡಲು ಶಿಫಾರಸು ಮಾಡಿದ್ದ ಸಚಿವರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರು ತಮ್ಮ ಶಿಫಾರಸು ಪತ್ರವನ್ನು ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಪಶು ಸಂಗೋಪನೆ ಸಚಿವ ಪ್ರಭು ಚವಾಣ್​​ ಇಬ್ಬರು ಯುವಕರಿಗೆ MSIL ಮದ್ಯ ಮಳಿಗೆಯಲ್ಲಿ ಕೆಲಸ ನೀಡುವಂತೆ ಶಿಫಾರಸು ಮಾಡಿದ್ದರು. ಈ ವಿಷಯ ತಿಳಿದ ಬೀದರ್​ನ ಸೋಮನಾಥ್ ಎಂಬುವವರು ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಚಿವರ ಕಾರ್ಯಕ್ಕೆ ತೀವ್ರ ಅಸಮಾಧಾನ ಹೊರಹಾಕಿದೆ.

ಸರ್ಕಾರಿ ಸಂಸ್ಥೆಗೆ ಯಾವುದೇ ರೀತಿಯ ಶಿಫಾರಸು ಪತ್ರ ಕಳಿಸುವುದು ಸರಿಯಾದ ಕ್ರಮವಲ್ಲವೆಂದು ಸಚಿವರಿಗೆ ತಾಕೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಶಿಫಾರಸು ಪತ್ರವನ್ನು ಹಿಂಪಡೆಯುವುದಾಗಿ ಸಚಿವರ ಪರ ವಕೀಲ ಹೈಕೋರ್ಟಿಗೆ ಮಾಹಿತಿ ನೀಡಿದ್ದಾರೆ. ಆದರೆ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.

Published On - 6:43 pm, Wed, 12 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us