AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ತಲಾ 20 ವರ್ಷ ಜೈಲು ಶಿಕ್ಷೆ

2016ರ ಜನವರಿ 14ರಂದು ಜ್ಯೂಸ್ ಕೊಡಿಸುವುದಾಗಿ ಡಾಬಾಗೆ ಕರೆದುಕೊಂಡು ಹೋಗಿ ಜ್ಯೂಸ್ ಕುಡಿಸಿ ಗೋಬಿ ತಿನ್ನಿಸಿ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಮಾಡಿದ್ದರು. ಬಳಿಕ ಈ ಕೃತ್ಯದ ಬಗ್ಗೆ ಎಲ್ಲೂ ಕೂಡ ಬಾಯಿ ಬಿಡದಂತೆ ಅಪ್ರಾಪ್ತೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದರು.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ತಲಾ 20 ವರ್ಷ ಜೈಲು ಶಿಕ್ಷೆ
ಶಿಕ್ಷೆಗೆ ಒಳಗಾದ ಆರೋಪಿಗಳು
preethi shettigar
| Edited By: ಸಾಧು ಶ್ರೀನಾಥ್​|

Updated on: Mar 16, 2021 | 10:21 AM

Share

ಮೈಸೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿದಂತೆ ಮೂವರು ಅತ್ಯಾಚಾರಿಗಳಿಗೆ 20 ವರ್ಷ ಕಾರಾಗೃಹ ಶಿಕ್ಷೆಯಾಗಿದೆ. ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಒಂದನೇ ಶೀಘ್ರಗತಿ ಕೋರ್ಟ್‌ನಿಂದ ತೀರ್ಪು ಪ್ರಕಟವಾಗಿದ್ದು, ನದೀಂ ಪಾಷಾ, ತನ್ವೀರ್ ಪಾಷಾ, ಸದ್ದಾಂ ಹುಸೇನ್‌ ಸದ್ಯ ಜೈಲು ಪಾಲಾಗಿದ್ದಾರೆ.

2016ರ ಜನವರಿ 14ರಂದು ಜ್ಯೂಸ್ ಕೊಡಿಸುವುದಾಗಿ ಡಾಬಾಗೆ ಕರೆದುಕೊಂಡು ಹೋಗಿ ಜ್ಯೂಸ್ ಕುಡಿಸಿ, ಗೋಬಿ ತಿನ್ನಿಸಿ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಮಾಡಿದ್ದರು. ಬಳಿಕ ಈ ಕೃತ್ಯದ ಬಗ್ಗೆ ಎಲ್ಲೂ ಕೂಡ ಬಾಯಿ ಬಿಡದಂತೆ ಅಪ್ರಾಪ್ತೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದರು. ಸದ್ಯ 5 ವರ್ಷದ ನಂತರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥೆಗೆ ನ್ಯಾಯ ಸಿಕ್ಕಿದ್ದು, ದೋಷಿಗಳಿಗೆ ತಲಾ 20 ವರ್ಷ ಜೈಲು ಹಾಗೂ 50,000 ರೂಪಾಯಿ ದಂಡ ವಿಧಿಸಲಾಗಿದೆ.

ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ 2016ರಲ್ಲಿ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಕೊಲೆ ಬೆದರಿಕೆಯಡಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಪರ ಸರ್ಕಾರಿ ಅಭಿಯೋಜಕರಾದ ಮಂಜುಳಾ ವಾದ ಮಂಡಿಸಿದ್ದರು. ಉದಯಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಸಂತೋಷ್ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಿದ್ದರು. ಅಂತಿಮವಾಗಿ ಬಾಲಕಿಗೆ ನ್ಯಾಯ ಸಿಕ್ಕಿದ್ದು, ಇನ್ನು ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: 

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗ್ತೀರಾ ಎಂಬ ವಿಚಾರಕ್ಕೆ ಸಂಬಂಧಿಸಿದ ತಪ್ಪು ವರದಿ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ

ಮೈಸೂರಿನಲ್ಲಿ ಗೃಹಿಣಿ ಮೇಲೆ ಅತ್ಯಾಚಾರವೆಸಗಿ ಕೊಲೆ? ಬಾಗಲಕೋಟೆಯಲ್ಲಿ ತಹಶೀಲ್ದಾರ್ ಮೇಲೆ ಸೀಮೆ ಎಣ್ಣೆ ಸುರಿದ ತಂದೆ-ಮಗ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ