AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ತಲಾ 20 ವರ್ಷ ಜೈಲು ಶಿಕ್ಷೆ

2016ರ ಜನವರಿ 14ರಂದು ಜ್ಯೂಸ್ ಕೊಡಿಸುವುದಾಗಿ ಡಾಬಾಗೆ ಕರೆದುಕೊಂಡು ಹೋಗಿ ಜ್ಯೂಸ್ ಕುಡಿಸಿ ಗೋಬಿ ತಿನ್ನಿಸಿ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಮಾಡಿದ್ದರು. ಬಳಿಕ ಈ ಕೃತ್ಯದ ಬಗ್ಗೆ ಎಲ್ಲೂ ಕೂಡ ಬಾಯಿ ಬಿಡದಂತೆ ಅಪ್ರಾಪ್ತೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದರು.

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ತಲಾ 20 ವರ್ಷ ಜೈಲು ಶಿಕ್ಷೆ
ಶಿಕ್ಷೆಗೆ ಒಳಗಾದ ಆರೋಪಿಗಳು
preethi shettigar
| Edited By: |

Updated on: Mar 16, 2021 | 10:21 AM

Share

ಮೈಸೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿದಂತೆ ಮೂವರು ಅತ್ಯಾಚಾರಿಗಳಿಗೆ 20 ವರ್ಷ ಕಾರಾಗೃಹ ಶಿಕ್ಷೆಯಾಗಿದೆ. ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಒಂದನೇ ಶೀಘ್ರಗತಿ ಕೋರ್ಟ್‌ನಿಂದ ತೀರ್ಪು ಪ್ರಕಟವಾಗಿದ್ದು, ನದೀಂ ಪಾಷಾ, ತನ್ವೀರ್ ಪಾಷಾ, ಸದ್ದಾಂ ಹುಸೇನ್‌ ಸದ್ಯ ಜೈಲು ಪಾಲಾಗಿದ್ದಾರೆ.

2016ರ ಜನವರಿ 14ರಂದು ಜ್ಯೂಸ್ ಕೊಡಿಸುವುದಾಗಿ ಡಾಬಾಗೆ ಕರೆದುಕೊಂಡು ಹೋಗಿ ಜ್ಯೂಸ್ ಕುಡಿಸಿ, ಗೋಬಿ ತಿನ್ನಿಸಿ ಬಾಲಕಿಯ ಮೇಲೆ ಮೂವರು ಅತ್ಯಾಚಾರ ಮಾಡಿದ್ದರು. ಬಳಿಕ ಈ ಕೃತ್ಯದ ಬಗ್ಗೆ ಎಲ್ಲೂ ಕೂಡ ಬಾಯಿ ಬಿಡದಂತೆ ಅಪ್ರಾಪ್ತೆಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದರು. ಸದ್ಯ 5 ವರ್ಷದ ನಂತರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥೆಗೆ ನ್ಯಾಯ ಸಿಕ್ಕಿದ್ದು, ದೋಷಿಗಳಿಗೆ ತಲಾ 20 ವರ್ಷ ಜೈಲು ಹಾಗೂ 50,000 ರೂಪಾಯಿ ದಂಡ ವಿಧಿಸಲಾಗಿದೆ.

ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ 2016ರಲ್ಲಿ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಹಾಗೂ ಕೊಲೆ ಬೆದರಿಕೆಯಡಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಪರ ಸರ್ಕಾರಿ ಅಭಿಯೋಜಕರಾದ ಮಂಜುಳಾ ವಾದ ಮಂಡಿಸಿದ್ದರು. ಉದಯಗಿರಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಸಂತೋಷ್ ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಿದ್ದರು. ಅಂತಿಮವಾಗಿ ಬಾಲಕಿಗೆ ನ್ಯಾಯ ಸಿಕ್ಕಿದ್ದು, ಇನ್ನು ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: 

ಅತ್ಯಾಚಾರ ಸಂತ್ರಸ್ತೆಯನ್ನು ಮದುವೆಯಾಗ್ತೀರಾ ಎಂಬ ವಿಚಾರಕ್ಕೆ ಸಂಬಂಧಿಸಿದ ತಪ್ಪು ವರದಿ ಬಗ್ಗೆ ಸುಪ್ರೀಂ ಕೋರ್ಟ್​ ಅಸಮಾಧಾನ

ಮೈಸೂರಿನಲ್ಲಿ ಗೃಹಿಣಿ ಮೇಲೆ ಅತ್ಯಾಚಾರವೆಸಗಿ ಕೊಲೆ? ಬಾಗಲಕೋಟೆಯಲ್ಲಿ ತಹಶೀಲ್ದಾರ್ ಮೇಲೆ ಸೀಮೆ ಎಣ್ಣೆ ಸುರಿದ ತಂದೆ-ಮಗ

Follow Us
preethi shettigar
preethi shettigar
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?