AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮಘಟ್ಟದಲ್ಲಿ ಸಣ್ಣಸಣ್ಣ ಡ್ಯಾಂಗಳ ನಿರ್ಮಾಣಕ್ಕೆ 1,400 ಸ್ಥಳಗಳನ್ನು ಗುರುತಿಸಲಾಗಿದೆ: ಸಣ್ಣ ನೀರಾವರಿ‌ ಸಚಿವ ಮಾಧುಸ್ವಾಮಿ

ಕೇಂದ್ರ ಜಲಶಕ್ತಿ‌ ಸಚಿವರು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. 3.5 ಸಾವಿರ ಕೋಟಿ ಹಣ ಸಹಾಯಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ವಿವರಿಸಿದರು.

ಪಶ್ಚಿಮಘಟ್ಟದಲ್ಲಿ ಸಣ್ಣಸಣ್ಣ ಡ್ಯಾಂಗಳ ನಿರ್ಮಾಣಕ್ಕೆ 1,400 ಸ್ಥಳಗಳನ್ನು ಗುರುತಿಸಲಾಗಿದೆ: ಸಣ್ಣ ನೀರಾವರಿ‌ ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
TV9 Web
| Updated By: guruganesh bhat|

Updated on:Aug 10, 2021 | 3:18 PM

Share

ದೆಹಲಿ: ಪಶ್ಚಿಮ ಘಟ್ಟದಲ್ಲಿ ಸಣ್ಣಸಣ್ಣ ಡ್ಯಾಂ ನಿರ್ಮಿಸುವ ಚಿಂತನೆಯಿದ್ದು, ಇದಕ್ಕಾಗಿ ಒಟ್ಟು 1,400 ಜಾಗಗಳನ್ನು ಗುರುತಿಸಿದ್ದೇವೆ‌. ನದಿಗಳು ಸಮುದ್ರ ಸೇರುವ ಸ್ಥಳಗಳಲ್ಲಿ ಸಿಹಿ ನೀರು ಸಂಗ್ರಹ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುದಾನ ಕೇಳಿದ್ದೇವೆ ಎಂದು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ‌ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ನಂತರ ಸಣ್ಣ ನೀರಾವರಿ‌ ಸಚಿವ ಮಾಧುಸ್ವಾಮಿ ತಿಳಿಸಿದರು.

ಕೇಂದ್ರದಿಂದ ಜಲಜೀವನ್ ಮಿಷನ್ ಯೋಜನೆಗೆ ಅನುದಾನ ಕೇಳಿದ್ದೇವೆ. ಅಟಲ್ ಭುಜಬಲ್ ಯೋಜನೆಗೂ ಅನುದಾನ ಕೇಳಿದ್ದೇವೆ. ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡುವ ವಿಶ್ವಾಸವಿದೆ. ಕೇಂದ್ರ ಜಲಶಕ್ತಿ‌ ಸಚಿವರು ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ. 3.5 ಸಾವಿರ ಕೋಟಿ ಹಣ ಸಹಾಯಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ವಿವರಿಸಿದರು.

ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿ‌ಯವರ ತಂದೆಯ ಗೆಳೆಯರು. ಹಾಗಾಗಿ ದೇವೇಗೌಡರನ್ನು ಸಿಎಂ ಭೇಟಿ ಮಾಡಿದ್ದಾರೆ. ಭೇಟಿಗೆ ರಾಜಕೀಯ ಬಣ್ಣ ಬಳಿಯುವ ಅವಶ್ಯಕತೆ ಇಲ್ಲ. ಇಂತಹ ಭೇಟಿಯ ಬಗ್ಗೆ ತಪ್ಪು ತಿಳಿಯುವ ಅಗತ್ಯವಿಲ್ಲ. ನಮಗೆ ಸಂಖ್ಯೆ ಕೊರತೆ ಇಲ್ಲ. ಸಂಖ್ಯೆ ಕೊರತೆ ಇದೆ ಎಂದು ಕೇಳುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಸಹ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

ಇದನ್ನೂ ಓದಿ:  ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ: ಚೆಕ್​ ಬೌನ್ಸ್​ ಕೇಸ್​ಗೆ ಮರುಜೀವ

ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

(Minor Irrigation Minister Madhu Swamy says Over 1400 sites identified for small dams in the Western Ghats)

Published On - 2:55 pm, Tue, 10 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ