AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು; ಶಿಕ್ಷಣ ಸಚಿವ ಬಿ.ಸಿ ನಾಗೇಶ್

ಮದರಸಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕುವುದಾದರೇ ಈ ಶಿಕ್ಷಣ ಪದ್ಧತಿ ಬೇಕು.

ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು; ಶಿಕ್ಷಣ ಸಚಿವ ಬಿ.ಸಿ ನಾಗೇಶ್
ಶಿಕ್ಷಣ ಸಚಿವ ಬಿ.ಸಿ ನಾಗೇಶ್
TV9 Web
| Edited By: |

Updated on: Mar 20, 2022 | 9:28 AM

Share

ಗೋಕರ್ಣ: ಅಲ್ಪಸಂಖ್ಯಾತ ಮಕ್ಕಳು ಇವತ್ತಿನ ಶಿಕ್ಷಣ ಪದ್ದತಿ (Education System) ಯಿಂದ ದೂರ ಉಳಿಯಬಾರದು. ಒಂದಷ್ಟುಕಡೆ ಮದರಸಗಳನ್ನು ಶಿಕ್ಷಣ ಪದ್ದತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಗೋಕರ್ಣದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ ನೀಡಿದ್ದಾರೆ. ಅವರು ಸಹ ನಮ್ಮ ಎಲ್ಲಾ ಮಕ್ಕಳಂತೆ ಈ ಶಿಕ್ಷಣ ಪದ್ದತಿಗೆ ಬರಬೇಕು. ಅವರು ಸಹಿತ ಮುಂದುವರಿಯಬೇಕು ಎನ್ನುವಂತ ಕಾರಣದಿಂದ ಮುಂದಿನ ದಿನದಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇವೆ. ಅಲ್ಪಸಂಖ್ಯಾತ ನಾಯಕರ ಗಮನಕ್ಕೂ ಬಂದಿದೆ. ಮದರಸಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕುವುದಾದರೇ ಈ ಶಿಕ್ಷಣ ಪದ್ಧತಿ ಬೇಕು. ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಒಂದಷ್ಟು ಅವಕಾಶ ಮಾಡಿಕೊಟ್ಟಿದ್ದೀವಿ ಆ ಪ್ರಕಾರವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಶಾಲೆಗೆ ಬರಲೇಬೇಕು ಎಂದು ಅವರ ಅಧಿಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ. 99.9 ಆ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. %ಮಾತ್ರ ಬರುತ್ತಿಲ್ಲ. ಅವರನ್ನು ತರುವಂತ ಪ್ರಯತ್ನ ಮಾಡುತ್ತೇವೆ. ಆದರೆ ಎಳೆದುಕೊಂಡು ಬರುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದಾರೆ

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಧಿಕಾರಿಗಳು:

ಹಾಸನ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ತಹಸಿಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಪಾರಾಗಿದ್ದಾರೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹರಿಹಳ್ಳಿ ಗ್ರಾಮದಲ್ಲಿ ನೆನ್ನೆ ಸಂಜೆ ಘಟನೆ ನಡೆದಿದೆ. ಅಧಿಕಾರಿಗಳು ಭೂಮಿ ಸರ್ವೆ ಮಾಡೋವೇಳೆ ಕಾಡಾನೆ ಘೀಳಿಟ್ಟಿದೆ. ಕಾಡಾನೆಗಳಿಂದ ತಪ್ಪಿಸಿಕೊಳ್ಳಲು ಓಡಿಬರುವಾಗ ಬಿದ್ದು, ತಹಸಿಲ್ದಾರ್ ಶಿರೀನ್ ತಾಜ್ ಮತ್ತು ತಾಲ್ಲೂಕು ಸರ್ವೆಯರ್ ಕುಮಾರ್​ಗೆ ಗಾಯವಾಗಿದೆ. ಹರಿಹಳ್ಳಿಯ ಕೆಂಚಾಂಬ ದೇಗುಲದ ಒತ್ತುವರಿ ಜಮೀನು ತೆರವು ಕಾರ್ಯಾಚರಣೆ ವೇಳೆ ಘಟನೆ ಸಂಭವಿದ್ದು, ಸರ್ವೆ ಮಾಡುವಾಗ ಘೀಳಿಟ್ಟು, 5 ಕಾಡಾನೆಗಳು ಬಂದಿದೆ. ಘೀಳಿಡುತ್ತಲೇ ಸ್ಥಳದಿಂದ ಓಡಿಬಂದು ಅಧಿಕಾರಿಗಳು ಪ್ರಾಣ ಉಳಿಸಿಕೊಂಡಿದ್ದಾರೆ. ಡೆಪ್ಯುಟಿ ತಹಸಿಲ್ದಾರ್ ಮಧುಸೂದನ್, ರೆವಿನ್ಯೂ ಇನ್ಸ್‌ಪೆಕ್ಟರ್ ವಸಂತ್​ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಡಾನೆಗಳು ಘೀಳಿಡುತ್ತಾ ಮುಂದೆ ಬರುವುದನ್ನು ಕಣ್ಣಾರೆ ಕಂಡು ಅಧಿಕಾರಿಗಳು ಗಾಬರಿಯಾಗಿದ್ದಾರೆ. ರಾಯರಕೊಪ್ಪಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅಧಿಕಾರಿಗಳು ಮನೆಗೆ ವಾಪಸ್ದಾಗಿದ್ದಾರೆ.

ಇದನ್ನೂ ಓದಿ:

ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾ ನೋಡಿ ವಾಪಸ್​ ಬರುತ್ತಿದ್ದ ಬಿಜೆಪಿ ಸಂಸದನ ಕಾರು ಗುರಿಯಾಗಿಸಿ ಬಾಂಬ್ ದಾಳಿ; ಪಶ್ಚಿಮ ಬಂಗಾಳದಲ್ಲಿ ತಪ್ಪಿದ ದುರಂತ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ