AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚುನಾವಣೆ ನಂಟು ಶಂಕೆ: ಪೊಲೀಸ್​ ಸಬ್​ಇನ್ಸ್​ಪೆಕ್ಟರ್​​ ಮೇಲೆ ಗುಂಡಿನ ದಾಳಿ; ಮಂಗಳೂರಿನಲ್ಲಿ ಮೂವರ ಬಂಧನ

ಆರೋಪಿಗಳು ಕೇರಳ-ಕರ್ನಾಟಕ ಗಡಿ ಮೂಲಕ ಮಂಗಳೂರನ್ನು ಪ್ರವೇಶ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡ ವಿಟ್ಲ ಪೊಲೀಸರು, ಆರೋಪಿಗಳನ್ನ ಹಿಡಿಯಲು ಗಡಿಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿದ್ದರು. ಚೆಕ್‌ಪೋಸ್ಟ್‌ ಬಳಿ ಪಿಎಸ್​ಐ ವಿನೋದ್‌ ರೆಡ್ಡಿ ಕಾರು ಅಡ್ಡಹಾಕಿದ್ದು, ಈ ವೇಳೆ ಪೊಲೀಸರತ್ತ ಫೈರಿಂಗ್ ಮಾಡಿದ್ದಾರೆ.

ಕೇರಳ ಚುನಾವಣೆ ನಂಟು ಶಂಕೆ: ಪೊಲೀಸ್​ ಸಬ್​ಇನ್ಸ್​ಪೆಕ್ಟರ್​​ ಮೇಲೆ ಗುಂಡಿನ ದಾಳಿ; ಮಂಗಳೂರಿನಲ್ಲಿ ಮೂವರ ಬಂಧನ
ಆರೋಪಿಗಳು ಪರಾರಿಯಾಗುತ್ತಿದ್ದ ಕಾರಿನ ದೃಶ್ಯ
preethi shettigar
| Edited By: |

Updated on: Mar 26, 2021 | 11:07 AM

Share

ದಕ್ಷಿಣ ಕನ್ನಡ: ಪಿಎಸ್‌ಐ ಮೇಲೆ ಗುಂಡಿನ ದಾಳಿ ಮಾಡಲು ಯತ್ನಿಸಿದ ಮೂವರನ್ನ ಪೊಲೀಸರು ಬಂಧಿಸಿದ ಘಟನೆ ರಾಜ್ಯದ ಗಡಿ ಸಾಲೆತ್ತೂರು ಕೊಡಂಗೆ ಬಳಿ ನಡೆದಿದೆ. ಕೇರಳದ ಚೆಕ್​ಪೋಸ್ಟ್​ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಕರ್ನಾಟಕದ ಗಡಿಯೊಳಗೆ ಪ್ರವೇಶಿಸುತ್ತಿದ್ದ ಕಾರನ್ನು ಪೊಲೀಸರು ತಡೆದಾಗ ಕಾರಿನಲ್ಲಿದ್ದ ದುಷ್ಕರ್ಮಿಯೊಬ್ಬ ವಿಟ್ಲ ಪೊಲೀಸ್ ಠಾಣೆಯ ಪಿಎಸ್​ಐ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ಕಾರಿನಲ್ಲಿ ಪರಾರಿಯಾಗುತ್ತಿದ್ದ ಮೂವರ ತಂಡವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕೇರಳ-ಕರ್ನಾಟಕ ಗಡಿ ಮೂಲಕ ಮಂಗಳೂರನ್ನು ಪ್ರವೇಶ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡ ವಿಟ್ಲ ಪೊಲೀಸರು, ಅವರನ್ನ ಹಿಡಿಯಲು ಗಡಿಯಲ್ಲಿ ಚೆಕ್‌ ಪೋಸ್ಟ್ ನಿರ್ಮಿಸಿದ್ದರು. ಚೆಕ್‌ ಪೋಸ್ಟ್‌ ಬಳಿ ಪಿಎಸ್​ಐ ವಿನೋದ್‌ ರೆಡ್ಡಿ ಕಾರು ಅಡ್ಡಹಾಕಿದ್ದು, ಈ ವೇಳೆ ಪೊಲೀಸರತ್ತ ಫೈರಿಂಗ್ ಮಾಡಿದ್ದಾರೆ.

ಈ ಘಟನೆ ವೇಳೆ ವಿಟ್ಲ ಪೊಲೀಸ್ ಠಾಣೆಯ ಎಸ್​ಐ ವಿನೋದ್ ಗಾಯಗೊಂಡಿದ್ದಾರೆ. ಆದರೆ ಗುಂಡು ಹಾರಿಸಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿದ ಬಳಿಕ ಪೊಲೀಸರು ಕಾರಿನಲ್ಲಿದ್ದ ಸಾಕೀರ್ ಯಾನೆ ಮಹಮ್ಮದ್ ವಾಕೀರ್ (26), ಅಬ್ದುಲ್ ಲತೀಫ್ ಯಾನೆ ಲತ್ತಿ ಯಾನೆ ಲತೀಫ್ (23), ಅಸ್ಪಕ್ (25) ಎಂಬ ಮೂವರು ಬಂಧಿಸಿದ್ದಾರೆ. ಈ ವೇಳೆ ಓರ್ವ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೇರಳದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಈ ಆರೋಪಿಗಳ ಪರಾರಿ ಯತ್ನದ ಹಿಂದೆ ಚುನಾವಣೆಯ ನಂಟು ಇರುವ ಬಗ್ಗೆ ಹಲವು ಅನುಮಾನಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:

Traffic Rules: ವಾಹನಗಳ ನಂಬರ್​ ಪ್ಲೇಟ್​ ಇನ್ಮುಂದೆ ಹೀಗೆ ಇರಬೇಕಂತೆ..ಇಲ್ಲದಿದ್ದರೆ ದಂಡ!; ಫೋಟೋ ಶೇರ್​ ಮಾಡಿದ ಬೆಂಗಳೂರು ಟ್ರಾಫಿಕ್​ ಪೊಲೀಸ್​

ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು