AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಚುನಾವಣೆ ನಂಟು ಶಂಕೆ: ಪೊಲೀಸ್​ ಸಬ್​ಇನ್ಸ್​ಪೆಕ್ಟರ್​​ ಮೇಲೆ ಗುಂಡಿನ ದಾಳಿ; ಮಂಗಳೂರಿನಲ್ಲಿ ಮೂವರ ಬಂಧನ

ಆರೋಪಿಗಳು ಕೇರಳ-ಕರ್ನಾಟಕ ಗಡಿ ಮೂಲಕ ಮಂಗಳೂರನ್ನು ಪ್ರವೇಶ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡ ವಿಟ್ಲ ಪೊಲೀಸರು, ಆರೋಪಿಗಳನ್ನ ಹಿಡಿಯಲು ಗಡಿಯಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿದ್ದರು. ಚೆಕ್‌ಪೋಸ್ಟ್‌ ಬಳಿ ಪಿಎಸ್​ಐ ವಿನೋದ್‌ ರೆಡ್ಡಿ ಕಾರು ಅಡ್ಡಹಾಕಿದ್ದು, ಈ ವೇಳೆ ಪೊಲೀಸರತ್ತ ಫೈರಿಂಗ್ ಮಾಡಿದ್ದಾರೆ.

ಕೇರಳ ಚುನಾವಣೆ ನಂಟು ಶಂಕೆ: ಪೊಲೀಸ್​ ಸಬ್​ಇನ್ಸ್​ಪೆಕ್ಟರ್​​ ಮೇಲೆ ಗುಂಡಿನ ದಾಳಿ; ಮಂಗಳೂರಿನಲ್ಲಿ ಮೂವರ ಬಂಧನ
ಆರೋಪಿಗಳು ಪರಾರಿಯಾಗುತ್ತಿದ್ದ ಕಾರಿನ ದೃಶ್ಯ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 26, 2021 | 11:07 AM

Share

ದಕ್ಷಿಣ ಕನ್ನಡ: ಪಿಎಸ್‌ಐ ಮೇಲೆ ಗುಂಡಿನ ದಾಳಿ ಮಾಡಲು ಯತ್ನಿಸಿದ ಮೂವರನ್ನ ಪೊಲೀಸರು ಬಂಧಿಸಿದ ಘಟನೆ ರಾಜ್ಯದ ಗಡಿ ಸಾಲೆತ್ತೂರು ಕೊಡಂಗೆ ಬಳಿ ನಡೆದಿದೆ. ಕೇರಳದ ಚೆಕ್​ಪೋಸ್ಟ್​ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಕರ್ನಾಟಕದ ಗಡಿಯೊಳಗೆ ಪ್ರವೇಶಿಸುತ್ತಿದ್ದ ಕಾರನ್ನು ಪೊಲೀಸರು ತಡೆದಾಗ ಕಾರಿನಲ್ಲಿದ್ದ ದುಷ್ಕರ್ಮಿಯೊಬ್ಬ ವಿಟ್ಲ ಪೊಲೀಸ್ ಠಾಣೆಯ ಪಿಎಸ್​ಐ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ಕಾರಿನಲ್ಲಿ ಪರಾರಿಯಾಗುತ್ತಿದ್ದ ಮೂವರ ತಂಡವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕೇರಳ-ಕರ್ನಾಟಕ ಗಡಿ ಮೂಲಕ ಮಂಗಳೂರನ್ನು ಪ್ರವೇಶ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡ ವಿಟ್ಲ ಪೊಲೀಸರು, ಅವರನ್ನ ಹಿಡಿಯಲು ಗಡಿಯಲ್ಲಿ ಚೆಕ್‌ ಪೋಸ್ಟ್ ನಿರ್ಮಿಸಿದ್ದರು. ಚೆಕ್‌ ಪೋಸ್ಟ್‌ ಬಳಿ ಪಿಎಸ್​ಐ ವಿನೋದ್‌ ರೆಡ್ಡಿ ಕಾರು ಅಡ್ಡಹಾಕಿದ್ದು, ಈ ವೇಳೆ ಪೊಲೀಸರತ್ತ ಫೈರಿಂಗ್ ಮಾಡಿದ್ದಾರೆ.

ಈ ಘಟನೆ ವೇಳೆ ವಿಟ್ಲ ಪೊಲೀಸ್ ಠಾಣೆಯ ಎಸ್​ಐ ವಿನೋದ್ ಗಾಯಗೊಂಡಿದ್ದಾರೆ. ಆದರೆ ಗುಂಡು ಹಾರಿಸಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿದ ಬಳಿಕ ಪೊಲೀಸರು ಕಾರಿನಲ್ಲಿದ್ದ ಸಾಕೀರ್ ಯಾನೆ ಮಹಮ್ಮದ್ ವಾಕೀರ್ (26), ಅಬ್ದುಲ್ ಲತೀಫ್ ಯಾನೆ ಲತ್ತಿ ಯಾನೆ ಲತೀಫ್ (23), ಅಸ್ಪಕ್ (25) ಎಂಬ ಮೂವರು ಬಂಧಿಸಿದ್ದಾರೆ. ಈ ವೇಳೆ ಓರ್ವ ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೇರಳದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಈ ಆರೋಪಿಗಳ ಪರಾರಿ ಯತ್ನದ ಹಿಂದೆ ಚುನಾವಣೆಯ ನಂಟು ಇರುವ ಬಗ್ಗೆ ಹಲವು ಅನುಮಾನಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:

Traffic Rules: ವಾಹನಗಳ ನಂಬರ್​ ಪ್ಲೇಟ್​ ಇನ್ಮುಂದೆ ಹೀಗೆ ಇರಬೇಕಂತೆ..ಇಲ್ಲದಿದ್ದರೆ ದಂಡ!; ಫೋಟೋ ಶೇರ್​ ಮಾಡಿದ ಬೆಂಗಳೂರು ಟ್ರಾಫಿಕ್​ ಪೊಲೀಸ್​

ಬೆಳ್ಳಂಬೆಳಗ್ಗೆ ಪೊಲೀಸ್ ಗನ್ ಸದ್ದು , ಆರೋಪಿಗಳ ಕಾಲಿಗೆ ಗುಂಡು

Follow Us
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ