ತುಮಕೂರು: ನಿಧಿ ಆಸೆಗಾಗಿ ಮಧ್ಯ ರಾತ್ರಿ ದೇವಸ್ಥಾನದ ಬಂಡೆ ಕೊರೆದ ಕಿಡಿಗೇಡಿಗಳು

ಮಹೇಶ್ ಇ, ಭೂಮನಹಳ್ಳಿ Edited By: ಆಯೇಷಾ ಬಾನು

Updated on: Aug 04, 2024 | 10:19 AM

ವಡ್ಢರಹಳ್ಳಿ ಗ್ರಾಮದ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ನಿಧಿ ಶೋಧ ನಡೆಸಿದ್ದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ನಿಧಿಗಾಗಿ ಮಧ್ಯರಾತ್ರಿ ದೇವಸ್ಥಾನದ ಬಳಿ ಮೂರು ಕಡೆ ಬಂಡೆ ಕೊರೆದಿದ್ದಾರೆ. ದೇವಸ್ಥಾನಕ್ಕೆ ಗ್ರಾಮಸ್ಥರೆಲ್ಲ ಭೇಟಿ ನೀಡಿದ್ದು ದೇವಸ್ಥಾನಕ್ಕೆ ಭದ್ರತೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ತುಮಕೂರು, ಆಗಸ್ಟ್.04: ತುಮಕೂರು ತಾಲೂಕಿನಲ್ಲಿರುವ ವಡ್ಢರಹಳ್ಳಿ ಗ್ರಾಮದ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಕೆಲ ಕಿಡಿಗೇಡಿಗಳು ನಿಧಿ ಶೋಧ ನಡೆಸಿದ್ದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ನಿಧಿಗಾಗಿ ಮಧ್ಯರಾತ್ರಿ ದೇವಸ್ಥಾನದ ಬಳಿ ಮೂರು ಕಡೆ ಬಂಡೆ ಕೊರೆದಿದ್ದಾರೆ. ಅರಿಶಿನ, ಕುಂಕುಮ, ತೆಂಗಿನಕಾಯಿ ಹಾಗೂ ವಸ್ತ್ರವನ್ನಿಟ್ಟು ಕಿಡಿಗೇಡಿಗಳು ಪೂಜೆ ಮಾಡಿದ್ದಾರೆ. ಬಳಿಕ ನಿಧಿ ಸಿಗದೇ ಅರ್ಧಕ್ಕೆ ಬಿಟ್ಟು ಪರಾರಿಯಾಗಿದ್ದಾರೆ.

ದೇವಸ್ಥಾನಕ್ಕೆ ಪೂಜೆ ಮಾಡಲು ಬಂದ ಅರ್ಚಕರು ನಿಧಿಗೆ ಶೋಧ ನಡೆದಿರುವುದನ್ನು ಕಂಡು ಬಿಚ್ಚಿಬಿದ್ದಿದ್ದಾರೆ. ದೇವಸ್ಥಾನಕ್ಕೆ ಗ್ರಾಮಸ್ಥರೆಲ್ಲ ಭೇಟಿ ನೀಡಿದ್ದು ದೇವಸ್ಥಾನಕ್ಕೆ ಭದ್ರತೆ ಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published on: Aug 04, 2024 10:17 AM
Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...