AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime ಕೇಂದ್ರ ಸರ್ಕಾರಿ ಯೋಜನೆ ಹೆಸರಲ್ಲಿ ಹಾಕಿದ್ರು ನಾಮ.. ಹುಬ್ಬಳ್ಳಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ದೋಖಾ

ಆನ್ಲೈನ್ ಮಾರ್ಕೆಟಿಂಗ್, ಬ್ಯಾಂಕ್ಗಳ ಹೆಸರಲ್ಲಿ ವಂಚನೆ ಮಾಡ್ತಿದ್ದ ಸೈಬರ್ ವಂಚಕರು ಈಗ ಮತ್ತೊಂದು ದಾರಿ ಹಿಡಿದಿದ್ದಾರೆ. ಸ್ವಲ್ಪ ಯಾಮಾರಿದ್ರೂ ನಿಮ್ಮ ಅಕೌಂಟ್ಗೆ ಕನ್ನ ಹಾಕಿ. ನಿಮ್ಮಿಂದ ದುಡ್ಡು ಹಾಕಿಸಿಕೊಂಡು ವಂಚನೆ ಮಾಡ್ತಿದ್ದಾರೆ. ಅದು ಹೇಗೆ ಅನ್ನೋದನ್ನ ಇಲ್ಲಿ ಓದಿ.

Cyber Crime ಕೇಂದ್ರ ಸರ್ಕಾರಿ ಯೋಜನೆ ಹೆಸರಲ್ಲಿ ಹಾಕಿದ್ರು ನಾಮ.. ಹುಬ್ಬಳ್ಳಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ದೋಖಾ
ಸೈಬರ್ ಕ್ರೈಂ ಠಾಣೆ
TV9 Web
| Edited By: |

Updated on: Jul 07, 2021 | 8:33 AM

Share

ನಾವು ಬ್ಯಾಂಕ್​ನಿಂದ ಕರೆ ಮಾಡ್ತಿದ್ದೇವೆ.. ನಿಮಗೆ ಓಟಿಪಿ ಬಂದಿದ್ಯಾ.. ಓಟಿಪಿ ಬಂದಿದ್ರೆ ಹೇಳಿ.. ನಿಮಗೆ ಸ್ಪೆಷಲ್ ಆಫರ್ ಇದೆ.. ಬೇಕಾದ್ರೆ ತಗೊಳ್ಳಿ.. ಹಾಗೆ ಹೀಗೆ ಅಂತಾ ಪೂಸಿ ಹೊಡೆದು ನಿಮ್ಮ ಅಕೌಂಟ್ಗೆ ಕನ್ನ ಹಾಕ್ತಿದ್ದ ಸೈಬರ್ ಖದೀಮರು ಈಗ ಹೊಸ ಹಾದಿ ಹಿಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಸೈಬರ್ ವಂಚಕರು ಫುಲ್ ಆ್ಯಕ್ಟಿವ್ ಆಗಿದ್ದು ಕೇಂದ್ರ ಸರ್ಕಾರ ಪುನರ್ಬಳಕೆ ಇಂಧನ ಸಚಿವಾಲಯದ ಹೆಸರಲ್ಲಿ ಧೋಖಾ ಎಸಗಿದ್ದಾರೆ. ಸೋಲಾರ್ ಪ್ಯಾನಲ್ ಚೈನ್ ಲಿಂಕ್ ಅನ್ನೋ ನಕಲಿ ಯೋಜನೆ ಸೃಷ್ಟಿಸಿ ವ್ಯಕ್ತಿಯೊಬ್ಬರಿಂದ ಸುಮಾರು 3 ಲಕ್ಷ 38 ಸಾವಿರ ರೂಪಾಯಿ ಹೂಡಿಕೆ ಮಾಡಿಸಿ, ವಂಚಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಪರಿಚಯವಾಗಿದ್ದ. ಪ್ರಧಾನಿ ಮೋದಿ ಫೋಟೋ ಇರೋ ವೆಬ್ಸೈಟ್ ಸೃಷ್ಟಿಸಿ, ಅದರಲ್ಲಿ ವಿವಿಧ ಹೂಡಿಕೆ ಸ್ಕೀಂಗಳ ಬಗ್ಗೆ ಉಲ್ಲೇಖ ಮಾಡಿದ್ದ. ಇದನ್ನ ನಂಬಿ ಮೊದಲಿಗೆ 1,516 ರೂಪಾಯಿ ಹೂಡಿದ್ದಾರೆ. ಆರಂಭದಲ್ಲಿ ರಿಟರ್ನ್ಸ್ ನೀಡಿ ವಿಶ್ವಾಸ ಮೂಡಿಸಿದ್ದಾರೆ. ಇದರಿಂದ ಪ್ರೇರಿತನಾದ ದೂರುದಾರ ಪರಿಚಯಸ್ಥರಿಂದಲೂ ಹೂಡಿಕೆ ಮಾಡಿಸಿ ಮೋಸ ಹೋಗಿದ್ದಾನೆ.

ದಿನ ಕಳೆದಂತೆ ಸ್ಕೀಂಗಳ ಪ್ರಯೋಜನ ಲಭಿಸದೇ ಇದ್ದಾಗ ಹೂಡಿಕೆದಾರರು ಸಂಪರ್ಕಕ್ಕೆ ಯತ್ನಿಸಿದ್ದಾರೆ. ವಂಚಕರು ಸಂಪರ್ಕಕ್ಕೆ ಸಿಗದೇ ಇದ್ದಾಗ, ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾರ್ವಜನಿಕರು ಈ ರೀತಿ ಮೋಸ ಹೋಗಬಾರದು. ಒಂದು ವೇಳೆ ಮೋಸದ ಜಾಲಕ್ಕೆ ಬಲಿಯಾಗಿದ್ರೆ, ಸೂಕ್ತ ದಾಖಲೆಗಳೊಂದಿಗೆ ದೂರು ನೀಡುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.

ಸೈಬರ್ ವಂಚಕರ ಜಾಲಕ್ಕೆ ವಿದ್ಯಾವಂತರೇ ಬಲಿಯಾಗ್ತಿದ್ದಾರೆ. ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಮಾಡೋರು ಇರ್ತಾರೆ ಅಂತಾ ಗೊತ್ತಿದ್ರೂ, ವಂಚಕರ ವಂಚನೆಯ ಜಾಲದಲ್ಲಿ ಸಿಲುಕಿ ಮೋಸ ಹೋಗ್ತಿರೋದು ಮಾತ್ರ ವಿಪರ್ಯಾಸವೇ ಸರಿ.

ಇದನ್ನೂ ಓದಿ: ಸಿಸಿಬಿ ನಡೆಸಿದ ಕಾರ್ಯಚರಣೆಯಲ್ಲಿ ಇಬ್ಬರು ಸೈಬರ್ ಕ್ರಿಮಿಗಳು ಸೆರೆ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?