ಕಾರ್​ಗೆ ಸೈಡ್ ಬಿಡಲಿಲ್ಲವೆಂದು ಶಾಲಾ ವಾಹನ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ, ಬೆಚ್ಚಿಬಿದ್ದ ಮಕ್ಕಳು

ಕಾರಿಗೆ ಸೈಡ್ ಬಿಡಲಿಲ್ಲವೆಂದು ಕೋಪಗೊಂಡ ಕಾರು ಚಾಲಕ ಹಾಗೂ ಆತನ ಸ್ನೇಹಿತರು ಮಕ್ಕಳಿದ್ದ ಶಾಲಾ ಬಸ್​ಗೆ ಅಡ್ಡಗಟ್ಟಿ ಚಾಲಕನನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಬಸ್​ನ ಕಿಟಕಿ ಗಾಜುಗಳನ್ನು ಹೊಡೆದು ರಂಪಾ ಮಾಡಿದ್ದಾರೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳಿಗೆ ಬಲೆ ಬೀಸಲಾಗಿದೆ.

ಕಾರ್​ಗೆ ಸೈಡ್ ಬಿಡಲಿಲ್ಲವೆಂದು ಶಾಲಾ ವಾಹನ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ, ಬೆಚ್ಚಿಬಿದ್ದ ಮಕ್ಕಳು
ಕಾರ್​ಗೆ ಸೈಡ್ ಬಿಡಲಿಲ್ಲವೆಂದು ಶಾಲಾ ವಾಹನ ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ
Follow us
| Updated By: ಆಯೇಷಾ ಬಾನು

Updated on:Sep 17, 2024 | 12:27 PM

ಬೆಂಗಳೂರು, ಸೆ.17: ಸಿಲಿಕಾನ್ ಸಿಟಿಯಲ್ಲಿ ಪ್ರತಿ ದಿನ ಒಂದಿಲ್ಲೊಂದು ರೋಡ್ ರೇಂಜ್ ಪ್ರಕರಣಗಳು (Road Rage Case) ವರದಿಯಾಗುತ್ತಿವೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಮಾರಗೊಂಡನಹಳ್ಳಿ ಬಳಿ ಶಾಲಾ ಮಕ್ಕಳಿದ್ದ ಬಸ್ (School Bus) ಚಾಲಕನನ್ನ ಎಳೆದಾಡಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಿನ್ನೆ ಸಂಜೆ 3.45ರ ಸುಮಾರಿಗೆ ಮಕ್ಕಳನ್ನ ಡ್ರಾಪ್ ಮಾಡಿಲು ಶಾಲೆಯಿಂದ ಹೊರಟಿದ್ದ ಶಾಲಾ ಬಸ್​ಗೆ ಸ್ಕಾರ್ಪಿಯೊ ಕಾರಿನಿಂದ ಅಡ್ಡಕಟ್ಟಿ ನಾಲ್ಕೈದು ಯುವಕರು ಬಸ್​ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಟಿರ್ಮಿಶ್​​ ಶಾಲೆಗೆ ಸೇರಿದ ಶಾಲಾ ಬಸ್ ಮೇಲೆ ಸೋಮವಾರ ಮಧ್ಯಾಹ್ನ ವ್ಯಕ್ತಿಗಳ ಗುಂಪು ದಾಳಿ ಮಾಡಿ ಚಾಲಕ ಜೇಮ್ಸ್ ಧೋನ್ ಎಂಬುವವನ ಮೇಲೆ ಹಲ್ಲೆ ನಡೆಸಲಾಗಿದೆ. ಇನ್ನು ಈ ಘಟನೆಗೆ ಕಾರಣ ಸೈಡ್ ಬಿಡದಿರುವುದು. ಕಿಡಿಗೇಡಿಗಳ ಕಾರಿಗೆ ಸೈಡ್​ ಕೊಡದಿದ್ದಕ್ಕೆ ಶಾಲಾ ಬಸ್ ಅಡ್ಡಹಾಕಿ ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ಡಬಲ್​ ಡೆಕ್ಕರ್​ ಫ್ಲೈ​ ಓವರ್ ಸುತ್ತಮುತ್ತಲಿನ ನಿವಾಸಿಗಳಿಗೆ ಟ್ರಾಫಿಕ್​ ಕಿರಿ ಕಿರಿ

ಕಿಡಿಗೇಡಿಗಳು ಚಾಲಕನ ಮೇಲೆ ಹಲ್ಲೆ ನಡೆಸಿದ್ದೇಕೆ?

ಶಾಲಾ ವಾಹನದ ಹಿಂದೆ ಸ್ಕಾರ್ಪಿಯೋ ಕಾರು ಬರುತ್ತಿತ್ತು. ಈ ವೇಳೆ ದಾರಿ ಬಿಡುವಂತೆ ಕಾರು ಚಾಲಕ ಒಂದೇ ಸಮನೆ ಹಾರ್ನ್ ಮಾಡಿದ್ದ. ಆಗ ಶಾಲಾ ವಾಹನದ ಚಾಲಕ ದಾರಿ ಬಿಡದೆ ಬಸ್ ಚಲಾಯಿಸಿದ್ದಾನೆ. ಇದಕ್ಕೆ ಕೋಪಗೊಂಡ ಕಾರು ಚಾಲಕ ಶಾಲಾ ವಾಹನವನ್ನ ಅಡ್ಡಗಟ್ಟಿ ಚಾಲಕನನ್ನ ಕೆಳಗಿಳಿಸಿ ಹಲ್ಲೆ ನಡೆಸಿದ್ದಾನೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ನಾಲ್ಕೈದು ಮಂದಿ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಲೋಹದ ವಸ್ತುವನ್ನು ಬಳಸಿ ಬಸ್​ ಕಿಟಕಿಯನ್ನು ಒಡೆದು ಬಲವಂತವಾಗಿ ಬಸ್ಸಿನೊಳಗೆ ನುಗ್ಗಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಶಾಲಾ ಬಸ್​ನಲ್ಲಿದ್ದ ಮಕ್ಕಳು ಹೆದರಿ ಕಿರುಚಾಡಿಕೊಂಡಿದ್ದಾರೆ. ಸದ್ಯ ಚಾಲಕ ಜೇಮ್ಸ್ ಧೋನ್ ಅವರು ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಅದೃಷ್ಟವಶಾತ್, ಘಟನೆಯಲ್ಲಿ ಮಕ್ಕಳಿಗೆ ಯಾವುದೇ ಹಾನಿಯಾಗಿಲ್ಲ, ಆದರೆ ಹಠಾತ್ ದಾಳಿಯಿಂದ ಮಕ್ಕಳು ಹೆದರಿದ್ದಾರೆ.

112ಕ್ಕೆ ಕರೆ ಮಾಡಲು ಪೊಲೀಸ್ ಆಯುಕ್ತರ ಸಲಹೆ

ಇನ್ನು ಘಟನೆ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ರೋಡ್ ರೇಜ್ ಕೇಸ್​ಗಳ ಬಗ್ಗೆ ಜನರು ಎಚ್ಚರವಹಿಸಬೇಕು ಎಂದರು. ಎಲ್ಲರೂ ಸಂಚಾರಿ ನಿಯಮಗಳನ್ನ ಫಾಲೋ ಮಾಡಬೇಕು. ಸಣ್ಣ ಪುಟ್ಟ ಮಾತುಕತೆ ಶುರುವಾದ್ರೂ ಎಚ್ಚರವಹಿಸಬೇಕು. ಬೇರೆಯವರಿಗೆ ತೊಂದರೆ ಆಗದಂತೆ ನಡೆದುಕೊಳ್ಳಬೇಕು. ಒಂದು ವೇಳೆ ತೊಂದ್ರೆ ಆದರೆ 112ಕ್ಕೆ ಕರೆ ಮಾಡಬೇಕು. ಇತ್ತೀಚೆಗೆ ಆಗಿರೋ ಪ್ರಕರಣಗಳನ್ನ ಪತ್ತೆ ಮಾಡಲಾಗಿದೆ. ಒಂದಷ್ಟು ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:25 pm, Tue, 17 September 24

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!