Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ.

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು.. ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಹಾಕಿದ ಕಿಡಿಗೇಡಿಗಳು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Apr 10, 2021 | 1:40 PM

ದಾವಣಗೆರೆ: ಕುಡಿಯುವ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ಕ್ರಿಮಿನಾಶಕ ಹಾಕಿದ್ದು, ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಪತ್ತೆಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆಗಾಗಿ ನಿರ್ಮಿಸಿದ್ದ ನೀರಿನ ಟ್ಯಾಂಕರ್​ನಲ್ಲಿ ಕಿಡಿಗೇಡಿಗಳು ವಿಷ ಹಾಕಿದ್ದಾರೆ. ಟ್ಯಾಂಕರ್​ ಒಳಗೆ ಮೆಕ್ಕೆಜೋಳಕ್ಕೆ ಹೊಡೆಯುವ ಕ್ರೀಮಿನಾಶಕ ಬಾಟಲ್​ ಪತ್ತೆಯಾಗಿದೆ. ಹಾಗೂ ಟ್ಯಾಂಕರ್​ನ ಹೊರಗೆ ವಿಷದ ಪ್ಯಾಕೆಟ್​ಗಳು ಪತ್ತೆಯಾಗಿವೆ. ಸದ್ಯ ನೀರಗಂಟಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶಾಸಕ ಕರುಣಾಕರ ರೆಡ್ಡಿ ಸೂಚಿಸಿದ್ದಾರೆ. ಹಾಗೂ ತಹಶೀಲ್ದಾರ್​​ ನಂದೀಶ್ ಟ್ಯಾಂಕರ್​ನ ನೀರನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಚಿಗಟೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Water Tank poison

ನೀರಿನ ಟ್ಯಾಂಕರ್​ನಲ್ಲಿ ಕ್ರಿಮಿನಾಶಕ

Water Tank poison

ನೀರು ಟ್ಯಾಂಕರ್​ನಲ್ಲಿ ಕ್ರಿಮಿನಾಶಕ ಬಾಟಲ್ ಕಂಡು ಆತಂಕದಲ್ಲಿರುವ ಗ್ರಾಮಸ್ಥರು

ಇದನ್ನೂ ಓದಿ:ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್ 

(Miscreants Mix Poison to Water Tank in Davangere)

ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್