AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಅನಾಮಧೇಯ ಬೆದರಿಕೆ ಪತ್ರ: ಮಗನೆ.. ನಿನ್ನ ನಾಲಗೆ ಕಟ್ ಮಾಡುತ್ತೇವೆ ಹುಷಾರ್ ಎಂದು ಬರೆಯಲಾಗಿದೆ

ಮುಸ್ಲಿಂ ಗೂಂಡಾಗಳು ಎಂದು ಹೇಳುವ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಬಳಸ್ತಿರುವುದು ಮುಸ್ಲಿಂ ಸಿಮೆಂಟ್ ಬ್ರಿಕ್ಸ್ಗಳನ್ನು. ಆದರೂ ನಿನಗೆ ಮುಸ್ಲಿಮರು ಬೇಡ, ನಿನಗೆ ನಾಚಿಕೆಯಾಗಬೇಕು. ಮಗನೆ.. ನಿನ್ನ ನಾಲಗೆ ಕಟ್ ಮಾಡುತ್ತೇವೆ ಹುಷಾರ್ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಅನಾಮಧೇಯ ಬೆದರಿಕೆ ಪತ್ರ: ಮಗನೆ.. ನಿನ್ನ ನಾಲಗೆ ಕಟ್ ಮಾಡುತ್ತೇವೆ ಹುಷಾರ್ ಎಂದು ಬರೆಯಲಾಗಿದೆ
ಕೆ.ಎಸ್.ಈಶ್ವರಪ್ಪ
ಆಯೇಷಾ ಬಾನು
|

Updated on:Aug 24, 2022 | 9:49 PM

Share

ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ(KS Eshwarappa) ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಶಿವಮೊಗ್ಗ ಶಾಸಕ ಈಶ್ವರಪ್ಪ ನಾಲಗೆ ಕತ್ತರಿಸುವುದಾಗಿ ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ. ಶಿವಮೊಗ್ಗದ ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪ ಮನೆಗೆ ಅನಾಮಧೇಯ ಪತ್ರ ಬಂದಿದೆ.

ಮುಸ್ಲಿಂ ಗೂಂಡಾಗಳು ಎಂದು ಹೇಳುವ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಬಳಸ್ತಿರುವುದು ಮುಸ್ಲಿಂ ಸಿಮೆಂಟ್ ಬ್ರಿಕ್ಸ್ಗಳನ್ನು. ಆದರೂ ನಿನಗೆ ಮುಸ್ಲಿಮರು ಬೇಡ, ನಿನಗೆ ನಾಚಿಕೆಯಾಗಬೇಕು. ಮಗನೆ.. ನಿನ್ನ ನಾಲಗೆ ಕಟ್ ಮಾಡುತ್ತೇವೆ ಹುಷಾರ್ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಕೆ.ಎಸ್.ಈಶ್ವರಪ್ಪ, ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ, ಬೆದರಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಟ್ಟಿದ್ದೇನೆ, ಕ್ರಮಕೈಗೊಳ್ಳುವ ವಿಶ್ವಾಸವಿದೆ ಎಂದರು.

ಕೊಲೆ, ದರೋಡೆ ಮಾಡುವ ಮುಸಲ್ಮಾನರಿಗೆ ಗೂಂಡಾ ಎಂದು ಕರೆಯುತ್ತೇನೆ. ಎಲ್ಲಾ ಮುಸಲ್ಮಾರಿಗೆ ನಾನು ಹಾಗೆ ಕರೆದಿಲ್ಲ. ಹಿಂದೂ ಹರ್ಷಾ, ಪ್ರವೀಣ್ ನೆಟ್ಟಾರ್ ಕೊಲೆ ಮಾಡಿದವರು ಹೇಡಿಗಳಂತೆ ಕೃತ್ಯ ಎಸಗಿದ್ದಾರೆ. ಮೊನ್ನೆ ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿದು ಹೋಗಿದ್ದೂ ಹೇಡಿತನದಿಂದ. ಎದುರು ಬಂದರೆ ಬೇರೆ ತರಹ, ಈ ಪತ್ರವೂ ಹೇಡಿತನದ್ದು, ನಾನು ಹದರೋದಿಲ್ಲ. ಯಾವ ಮುಸ್ಲಿಂ ಗೂಂಡಾ ಪ್ರವೃತ್ತಿ ಮಾಡ್ತಾರೋ ಅಂಥವರಿಗೆ ಗೂಂಡಾ ಅಂತ ಕರೆಯದೇ, ಒಳ್ಳೇಯವರು ಎನ್ನಬೇಕಾ? ಯಾರೋ ಹೇಡಿ ಗುಂಡಾ ಪ್ರವೃತ್ತಿಯವನೇ ಈ ಪತ್ರ ಬರೆದಿರಬೇಕು. ಪತ್ರ ಬಂದಿದೆ, ಎಲ್ಲಿಂದ ಎಂಬುದು ಗೊತ್ತಿಲ್ಲ. ಈ ಹಿಂದೆ ವಿದೇಶದಿಂದಲೂ ಕರೆ ಬಂದಿತ್ತು. ಈ ಪತ್ರ ನಮ್ಮ ರಾಜ್ಯದ್ದೇ ಆಗಿದ್ದು ಹೇಡಿ ಕಂಡು ಹಿಡಿಯುತ್ತಾರೆನ್ನುವ ಭರವಸೆ ಇದೆ ಎಂದರು.

Published On - 9:36 pm, Wed, 24 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ