AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು, ಲಾಂಗ್ ಆಯ್ತು ಈಗ ಪುಂಡರ ಕೈಯಲ್ಲಿ ಪಿಸ್ತೂಲ್; ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಬೆದರಿಕೆ

ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ ಘಟನೆ ಬೆಂಗಳೂರಿನ ಜಗಜೀವನ್‌ರಾಮ್ ನಗರದಲ್ಲಿ ನಡೆದಿದೆ. ಸಾಲದ ವಿಚಾರವಾಗಿ ಕುರಽಂ ಮೇಲೆ ಆರೀಫ್ ಮತ್ತು ಸಹಚರರು ಹಲ್ಲೆಗೈದ ಆರೋಪ ಕೇಳಿ ಬಂದಿದೆ.

ಮಚ್ಚು, ಲಾಂಗ್ ಆಯ್ತು ಈಗ ಪುಂಡರ ಕೈಯಲ್ಲಿ ಪಿಸ್ತೂಲ್; ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಬೆದರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 08, 2021 | 1:02 PM

Share

ಬೆಂಗಳೂರು: ಹೆಚ್ಚಾಗಿ ಹೈದರಾಬಾದು, ಉತ್ತರ ಭಾರತದ ಪ್ರದೇಶಗಳಲ್ಲಿ ಹೀನಾಯ ಅಪರಾಧ ಪ್ರಕರಣಗಳು ನಡೆಯುವುದನ್ನು ಕೇಳುತ್ದಿವಿ. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಹಾಡಹಗಲೇ ಮಾಜಿ ಕಾರ್ಪೋರೇಟರ್ ಕೊಲೆ ಮಾಡಲಾಗಿತ್ತು. ಈ ಮಧ್ಯೆ ಡಿಸಿಪಿ ಒಬ್ಬರು ರೌಡಿಯ ಉಪಟಳ ತಾಳಲಾರದೆ ಗಡಿಪಾರು ಮಾಡಿದರು. ಎಲ್ಲಿಂದಲೋ ಬಂದ ಪಾಪಿಗಳು ಇಲ್ಲಿ ಗ್ಯಾಂಗ್ ರೇಪ್ ಮಾಡಿದರು. ಪೊಲೀಸ್ ಅಧಿಕಾರಿಯನ್ನೇ ಬೆದರಿಸಿ, ದರೋಡೆ ಮಾಡುವ ವಿಫಲ ಯತ್ನವೂ ನಡೆದಿದೆ. ಸರಣಿ ಚೈನ್ ಸ್ನಾಚ್ಗಳು ಸರಾಗವಾಗಿ ನಡೆದವು.

ಇದರ ಮಧ್ಯೆ ಇಂದು ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಮಂಚು, ಲಾಂಗ್ ಆಟ ಮುಗಿದು ಈಗ ರೌಡಿಗಳು ಪಿಸ್ತೂಲ್ ಹಿಡಿದು ಅಟ್ಟಹಾಸ ಮೆರೆಯಲು ಮುಂದಾಗಿದ್ದಾರೆ. ಸಿಲಿಕಾನ್ ಸಿಟಿ ಈಗ ಕ್ರೈ ಸಿಟಿಯಾಗುತ್ತಿದೆಯಾ ಎಂದು ಬೆಂಗಳೂರು ಮಂದಿ ತಣ್ಣಗೆ ನಡುಗುತ್ತಿದ್ದಾರೆ.

ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ ಘಟನೆ ಬೆಂಗಳೂರಿನ ಜಗಜೀವನ್‌ರಾಮ್ ನಗರದಲ್ಲಿ ನಡೆದಿದೆ. ಸಾಲದ ವಿಚಾರವಾಗಿ ಕುರಽಂ ಮೇಲೆ ಆರೀಫ್ ಮತ್ತು ಸಹಚರರು ಹಲ್ಲೆಗೈದ ಆರೋಪ ಕೇಳಿ ಬಂದಿದೆ. ಹಲ್ಲೆ ಬಗ್ಗೆ ದೂರು ನೀಡಿದ್ದಕ್ಕೆ ರಾತ್ರಿ ಮನೆಗೆ ನುಗ್ಗಿ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಜೆ.ಜೆ.ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಮಾದಕ ಜಾಲದ ಬಗ್ಗೆ ಹೇಳೋದೇ ಬೇಡ. ಬೆಂಗಳೂರು ಎಲ್ಲಿ ಮಾದಕ ವಸ್ತುಗಳ ಅಡ್ಡೆ ಆಗಿಬಿಡುತ್ತದೋ ಎಂಬ ಆತಂಕವೂ ಇದೆ. ಎಗೈನ್… ಇದಕ್ಕೆ ಸಾಥ್​ ಕೊಡುತ್ತಿರುವವರು ಪರದೇಶಿಗಳೇ.

ಇದನ್ನೂ ಓದಿ: ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಸಾವು ಪ್ರಕರಣ; ಪೊಲೀಸರ ತನಿಖೆ ಎಲ್ಲಿಗೆ ಬಂತು? ವೈದ್ಯರ ವಿಸ್ತೃತ ವರದಿ ಏನು ಹೇಳುತ್ತಿದೆ?

Published On - 12:10 pm, Thu, 8 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?