AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು, ಲಾಂಗ್ ಆಯ್ತು ಈಗ ಪುಂಡರ ಕೈಯಲ್ಲಿ ಪಿಸ್ತೂಲ್; ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಬೆದರಿಕೆ

ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ ಘಟನೆ ಬೆಂಗಳೂರಿನ ಜಗಜೀವನ್‌ರಾಮ್ ನಗರದಲ್ಲಿ ನಡೆದಿದೆ. ಸಾಲದ ವಿಚಾರವಾಗಿ ಕುರಽಂ ಮೇಲೆ ಆರೀಫ್ ಮತ್ತು ಸಹಚರರು ಹಲ್ಲೆಗೈದ ಆರೋಪ ಕೇಳಿ ಬಂದಿದೆ.

ಮಚ್ಚು, ಲಾಂಗ್ ಆಯ್ತು ಈಗ ಪುಂಡರ ಕೈಯಲ್ಲಿ ಪಿಸ್ತೂಲ್; ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಬೆದರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jul 08, 2021 | 1:02 PM

Share

ಬೆಂಗಳೂರು: ಹೆಚ್ಚಾಗಿ ಹೈದರಾಬಾದು, ಉತ್ತರ ಭಾರತದ ಪ್ರದೇಶಗಳಲ್ಲಿ ಹೀನಾಯ ಅಪರಾಧ ಪ್ರಕರಣಗಳು ನಡೆಯುವುದನ್ನು ಕೇಳುತ್ದಿವಿ. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಹಾಡಹಗಲೇ ಮಾಜಿ ಕಾರ್ಪೋರೇಟರ್ ಕೊಲೆ ಮಾಡಲಾಗಿತ್ತು. ಈ ಮಧ್ಯೆ ಡಿಸಿಪಿ ಒಬ್ಬರು ರೌಡಿಯ ಉಪಟಳ ತಾಳಲಾರದೆ ಗಡಿಪಾರು ಮಾಡಿದರು. ಎಲ್ಲಿಂದಲೋ ಬಂದ ಪಾಪಿಗಳು ಇಲ್ಲಿ ಗ್ಯಾಂಗ್ ರೇಪ್ ಮಾಡಿದರು. ಪೊಲೀಸ್ ಅಧಿಕಾರಿಯನ್ನೇ ಬೆದರಿಸಿ, ದರೋಡೆ ಮಾಡುವ ವಿಫಲ ಯತ್ನವೂ ನಡೆದಿದೆ. ಸರಣಿ ಚೈನ್ ಸ್ನಾಚ್ಗಳು ಸರಾಗವಾಗಿ ನಡೆದವು.

ಇದರ ಮಧ್ಯೆ ಇಂದು ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಮಂಚು, ಲಾಂಗ್ ಆಟ ಮುಗಿದು ಈಗ ರೌಡಿಗಳು ಪಿಸ್ತೂಲ್ ಹಿಡಿದು ಅಟ್ಟಹಾಸ ಮೆರೆಯಲು ಮುಂದಾಗಿದ್ದಾರೆ. ಸಿಲಿಕಾನ್ ಸಿಟಿ ಈಗ ಕ್ರೈ ಸಿಟಿಯಾಗುತ್ತಿದೆಯಾ ಎಂದು ಬೆಂಗಳೂರು ಮಂದಿ ತಣ್ಣಗೆ ನಡುಗುತ್ತಿದ್ದಾರೆ.

ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ ಘಟನೆ ಬೆಂಗಳೂರಿನ ಜಗಜೀವನ್‌ರಾಮ್ ನಗರದಲ್ಲಿ ನಡೆದಿದೆ. ಸಾಲದ ವಿಚಾರವಾಗಿ ಕುರಽಂ ಮೇಲೆ ಆರೀಫ್ ಮತ್ತು ಸಹಚರರು ಹಲ್ಲೆಗೈದ ಆರೋಪ ಕೇಳಿ ಬಂದಿದೆ. ಹಲ್ಲೆ ಬಗ್ಗೆ ದೂರು ನೀಡಿದ್ದಕ್ಕೆ ರಾತ್ರಿ ಮನೆಗೆ ನುಗ್ಗಿ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಜೆ.ಜೆ.ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಮಾದಕ ಜಾಲದ ಬಗ್ಗೆ ಹೇಳೋದೇ ಬೇಡ. ಬೆಂಗಳೂರು ಎಲ್ಲಿ ಮಾದಕ ವಸ್ತುಗಳ ಅಡ್ಡೆ ಆಗಿಬಿಡುತ್ತದೋ ಎಂಬ ಆತಂಕವೂ ಇದೆ. ಎಗೈನ್… ಇದಕ್ಕೆ ಸಾಥ್​ ಕೊಡುತ್ತಿರುವವರು ಪರದೇಶಿಗಳೇ.

ಇದನ್ನೂ ಓದಿ: ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಸಾವು ಪ್ರಕರಣ; ಪೊಲೀಸರ ತನಿಖೆ ಎಲ್ಲಿಗೆ ಬಂತು? ವೈದ್ಯರ ವಿಸ್ತೃತ ವರದಿ ಏನು ಹೇಳುತ್ತಿದೆ?

Published On - 12:10 pm, Thu, 8 July 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್