AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚು, ಲಾಂಗ್ ಆಯ್ತು ಈಗ ಪುಂಡರ ಕೈಯಲ್ಲಿ ಪಿಸ್ತೂಲ್; ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಬೆದರಿಕೆ

ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ ಘಟನೆ ಬೆಂಗಳೂರಿನ ಜಗಜೀವನ್‌ರಾಮ್ ನಗರದಲ್ಲಿ ನಡೆದಿದೆ. ಸಾಲದ ವಿಚಾರವಾಗಿ ಕುರಽಂ ಮೇಲೆ ಆರೀಫ್ ಮತ್ತು ಸಹಚರರು ಹಲ್ಲೆಗೈದ ಆರೋಪ ಕೇಳಿ ಬಂದಿದೆ.

ಮಚ್ಚು, ಲಾಂಗ್ ಆಯ್ತು ಈಗ ಪುಂಡರ ಕೈಯಲ್ಲಿ ಪಿಸ್ತೂಲ್; ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಬೆದರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 08, 2021 | 1:02 PM

Share

ಬೆಂಗಳೂರು: ಹೆಚ್ಚಾಗಿ ಹೈದರಾಬಾದು, ಉತ್ತರ ಭಾರತದ ಪ್ರದೇಶಗಳಲ್ಲಿ ಹೀನಾಯ ಅಪರಾಧ ಪ್ರಕರಣಗಳು ನಡೆಯುವುದನ್ನು ಕೇಳುತ್ದಿವಿ. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಹಾಡಹಗಲೇ ಮಾಜಿ ಕಾರ್ಪೋರೇಟರ್ ಕೊಲೆ ಮಾಡಲಾಗಿತ್ತು. ಈ ಮಧ್ಯೆ ಡಿಸಿಪಿ ಒಬ್ಬರು ರೌಡಿಯ ಉಪಟಳ ತಾಳಲಾರದೆ ಗಡಿಪಾರು ಮಾಡಿದರು. ಎಲ್ಲಿಂದಲೋ ಬಂದ ಪಾಪಿಗಳು ಇಲ್ಲಿ ಗ್ಯಾಂಗ್ ರೇಪ್ ಮಾಡಿದರು. ಪೊಲೀಸ್ ಅಧಿಕಾರಿಯನ್ನೇ ಬೆದರಿಸಿ, ದರೋಡೆ ಮಾಡುವ ವಿಫಲ ಯತ್ನವೂ ನಡೆದಿದೆ. ಸರಣಿ ಚೈನ್ ಸ್ನಾಚ್ಗಳು ಸರಾಗವಾಗಿ ನಡೆದವು.

ಇದರ ಮಧ್ಯೆ ಇಂದು ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಮಂಚು, ಲಾಂಗ್ ಆಟ ಮುಗಿದು ಈಗ ರೌಡಿಗಳು ಪಿಸ್ತೂಲ್ ಹಿಡಿದು ಅಟ್ಟಹಾಸ ಮೆರೆಯಲು ಮುಂದಾಗಿದ್ದಾರೆ. ಸಿಲಿಕಾನ್ ಸಿಟಿ ಈಗ ಕ್ರೈ ಸಿಟಿಯಾಗುತ್ತಿದೆಯಾ ಎಂದು ಬೆಂಗಳೂರು ಮಂದಿ ತಣ್ಣಗೆ ನಡುಗುತ್ತಿದ್ದಾರೆ.

ದೂರು ನೀಡಿದ್ದಕ್ಕೆ ಮನೆಗೆ ನುಗ್ಗಿ ಪಿಸ್ತೂಲ್ ತೋರಿಸಿ ಧಮ್ಕಿ ಹಾಕಿದ ಘಟನೆ ಬೆಂಗಳೂರಿನ ಜಗಜೀವನ್‌ರಾಮ್ ನಗರದಲ್ಲಿ ನಡೆದಿದೆ. ಸಾಲದ ವಿಚಾರವಾಗಿ ಕುರಽಂ ಮೇಲೆ ಆರೀಫ್ ಮತ್ತು ಸಹಚರರು ಹಲ್ಲೆಗೈದ ಆರೋಪ ಕೇಳಿ ಬಂದಿದೆ. ಹಲ್ಲೆ ಬಗ್ಗೆ ದೂರು ನೀಡಿದ್ದಕ್ಕೆ ರಾತ್ರಿ ಮನೆಗೆ ನುಗ್ಗಿ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಜೆ.ಜೆ.ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನು ಮಾದಕ ಜಾಲದ ಬಗ್ಗೆ ಹೇಳೋದೇ ಬೇಡ. ಬೆಂಗಳೂರು ಎಲ್ಲಿ ಮಾದಕ ವಸ್ತುಗಳ ಅಡ್ಡೆ ಆಗಿಬಿಡುತ್ತದೋ ಎಂಬ ಆತಂಕವೂ ಇದೆ. ಎಗೈನ್… ಇದಕ್ಕೆ ಸಾಥ್​ ಕೊಡುತ್ತಿರುವವರು ಪರದೇಶಿಗಳೇ.

ಇದನ್ನೂ ಓದಿ: ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಸಾವು ಪ್ರಕರಣ; ಪೊಲೀಸರ ತನಿಖೆ ಎಲ್ಲಿಗೆ ಬಂತು? ವೈದ್ಯರ ವಿಸ್ತೃತ ವರದಿ ಏನು ಹೇಳುತ್ತಿದೆ?

Published On - 12:10 pm, Thu, 8 July 21

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ