ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ. ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. […]

ಗೂಂಡಾಗಿರಿಗೂ ಮುನ್ನ ಕೊರೊನಾ ವಾರಿಯರ್ಸ್​ಗೆ ಪುಂಡರ ಬೆದರಿಕೆ
ಸಾಧು ಶ್ರೀನಾಥ್​

Updated on: Apr 20, 2020 | 9:55 AM

ಬೆಂಗಳೂರು: ಪಾದರಾಯನಪುರದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಭಯಾನಕ ಸಂಗತಿಯೊಂದು ಹೊರಬಿದ್ದಿದೆ. ಗಲಾಟೆಗೂ ಮುನ್ನ ಪುಂಡರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ನಾಳೆಯಿಂದ ನೀವು ಕೆಲಸಕ್ಕೆ ಹೇಗೆ ಬರ್ತೀರೋ ನೋಡ್ತೀವಿ ಎಂದು ಪುಂಡರ ಗುಂಪು ಆಶಾ ಕಾರ್ಯಕರ್ತೆಯರಿಗೆ ಆವಾಜ್ ಹಾಕಿದೆ.

ಪಾದರಾಯನಪುರದಲ್ಲಿ ಸೆಕೆಂಡರಿ ಕಾಂಟ್ಯಾಕ್ಟ್​ನಲ್ಲಿದ್ದ ಮಹಿಳೆಯರನ್ನು ಕ್ವಾರಂಟೈನ್​ಗೆ ಶಿಫ್ಟ್ ಮಾಡಲು ಆಶಾ ಕಾರ್ಯಕರ್ತೆಯರು ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪುಂಡರು ಪೊಲೀಸ್ ಚೆಕ್ ಪೋಸ್ಟ್ ಕಿತ್ತೆಸೆದು ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ್ದಾರೆ. ನಂತರ ಕಾರ್ಯಕರ್ತೆಯರು ಅವರಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರೆ. ಸ್ವಲ್ಪದರಲ್ಲೇ ನಿನ್ನೆ ರಾತ್ರಿ ಪ್ರಾಣಾಪಾಯದಿಂದ ಆಶಾ ಕಾರ್ಯಕರ್ತೆಯರು ಪಾರಾಗಿದ್ದಾರೆ. ಈ ಬಗ್ಗೆ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಸಾಧ್ಯತೆ ಇದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us