AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ ಮನಾಲಿಯಲ್ಲಿ ಶವವಾಗಿ ಪತ್ತೆ

ದಟ್ಟ ಅರಣ್ಯಕ್ಕೆ ಚಾರಣಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ವ್ಯಕ್ತಿ ಸೆ.28 ರಂದು ನಾಪತ್ತೆಯಾಗಿದ್ದರು. ಕಾರ್ಯಾಚರಣೆ ವೇಳೆ ಹಿಮಾಚಲ ಪ್ರದೇಶದ ಮನಾಲಿಯ ಜೋಗಿನಿ ಜಲತಾದ ಬಳಿ ಮೊಬೈಲ್ ಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆಸಿದಾಗ ಕಮರಿಯಲ್ಲಿ ಶವ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವ್ಯಕ್ತಿ ಮನಾಲಿಯಲ್ಲಿ ಶವವಾಗಿ ಪತ್ತೆ
ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರು ಮೂಲದ ರಮೇಶ್
Rakesh Nayak Manchi
|

Updated on: Oct 05, 2023 | 7:31 AM

Share

ಕುಲು/ ಹಿಮಾಚಲ ಪ್ರದೇಶ, ಅ.5: ದಟ್ಟ ಅರಣ್ಯಕ್ಕೆ ಚಾರಣಕ್ಕೆಂದು ತೆರಳಿದ್ದ ಬೆಂಗಳೂರು (Bengaluru) ಮೂಲದ ವ್ಯಕ್ತಿ ಹಿಮಾಚಲ ಪ್ರದೇಶದ ಮನಾಲಿಯ (Manali) ಜೋಗಿನಿ ಜಲತಾದ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ರಾಹುಲ್ ರಮೇಶ್ (35) ಮೃತ ವ್ಯಕ್ತಿ. ಸದ್ಯ ಮೃತದೇಹವನ್ನು ಜಲಪಾತದ ಕಮರಿಯಿಂದ ಹೊರತೆಗೆಯಲಾಗಿದೆ.

ರಮೇಶ್ ಅವರು ಸೆ.28ರಂದು ದಟ್ಟ ಅರಣ್ಯ ಪ್ರದೇಶಕ್ಕೆ ಚಾರಣಕ್ಕೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದರು. ಮಾಹಿತಿಯ ಪ್ರಕಾರ, ಅದೃಷ್ಟದ ದಿನದಂದು ರಮೇಶ್ ಅವರನ್ನು ತಾಯಿ ಮತ್ತು ಸಹೋದರ ಟ್ರಕ್‌ನ ಪ್ರಾರಂಭದ ಸ್ಥಳದಲ್ಲಿ ಡ್ರಾಪ್ ಮಾಡಿದ್ದರು. ಅಂದು ಸಂಜೆ 5.30ರ ಸುಮಾರಿಗೆ ತಾನು ಕಾಡಿನಲ್ಲಿ ದಾರಿ ತಪ್ಪಿದ್ದಾಗಿ ತನ್ನ ಸಹೋದರನಿಗೆ ಸಂದೇಶ ಕಳುಹಿಸಿದ್ದರು.

ಮೆಸೆಜ್ ನೋಡಿದ ಸಹೋದರ ಮತ್ತು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಕೂಡಲೇ ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಮತ್ತು ಅಲೈಡ್ ಸ್ಪೋರ್ಟ್ಸ್‌ನ ಪರ್ವತಾರೋಹಿಗಳು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಸೇರಿದಂತೆ ಶೋಧ ಕಾರ್ಯಾಚರಣೆ ಆರಂಭಿಸಿತ್ತು.

ಇದನ್ನೂ ಓದಿ: ಪಂಜಾಬ್: ನಾಪತ್ತೆಯಾಗಿದ್ದ ಮೂವರು ಸಹೋದರಿಯರ ಶವ ಕಬ್ಬಿಣದ ಟ್ರಂಕ್​ನಲ್ಲಿ ಪತ್ತೆ

ಕಾರ್ಯಾಚರಣೆಯ ನೇತೃತ್ವವನ್ನು ಮನಾಲಿಯ ಉಪವಿಭಾಗದ ಪೊಲೀಸ್ ಅಧಿಕಾರಿ ಕ್ಷಮಾ ದತ್ ಶರ್ಮಾ ವಹಿಸಿದ್ದರು. ಭಾರತೀಯ ವಾಯುಪಡೆಯು 35 ವರ್ಷದ ವ್ಯಕ್ತಿಯನ್ನು ಪತ್ತೆಹಚ್ಚಲು ವೈಮಾನಿಕ ರೆಸಿಯನ್ನು ನಡೆಸಿತು. ಆದರೂ ಯಶಸ್ವಿಯಾಗಲಿಲ್ಲ.

ರಮೇಶ್ ನಾಪತ್ತೆಯಾಗಿದ್ದ ಒಂದು ದಿನದ ನಂತರ, ಅಂದಸರೆ ಸೆಪ್ಟೆಂಬರ್ 29 ರಂದು, ಜೋಗಿನಿ ಜಲಪಾತದ ಬಳಿ ಅವರ ಮೊಬೈಲ್ ಪತ್ತೆಯಾಗಿದೆ. ಹೀಗಾಗಿ ಶೋಧಕಾರ್ಯವನ್ನು ತೀವ್ರಗೊಳಿಸಿದಾಗ ಕಮರಿಯಲ್ಲಿ ಶವ ಪತ್ತೆಯಾಗಿದೆ.

ಅರಣ್ಯ ಪ್ರದೇಶದಲ್ಲಿ ಸುಮಾರು 400 ಮೀಟರ್ ಆಳದಲ್ಲಿ ಕಮರಿಯಲ್ಲಿ ಶವ ಪತ್ತೆಯಾಗಿದೆ ಎಂದು ಎಸ್‌ಡಿಪಿಒ ಮನಾಲಿ ಕ್ಷಮಾ ದತ್ ಶರ್ಮಾ ತಿಳಿಸಿದ್ದಾರೆ. ಮಾಹಿತಿ ತಿಳಿದು ರಮೇಶ್ ಪತ್ನಿಯೂ ಮನಾಲಿಗೆ ಆಗಮಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ