AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್

ಸಿಡಿ ಪ್ರಕರಣವನ್ನು ಎಸ್​ಐಟಿ ತನಿಖೆಗೆ ಕೊಡಲಾಗಿದೆ. ತನಿಖೆ ಎಷ್ಟರಮಟ್ಟಿಗೆ ಪಾರದರ್ಶಕತೆಯಿಂದ ನಡೆಯುತ್ತದೆ, ಎನ್ನುವುದೇ ನನಗೆ ಸಂಶಯ ಮೂಡಿಸುತ್ತಿದೆ‌ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ (ಸಂಗ್ರಹ ಚಿತ್ರ)
Follow us
shruti hegde
|

Updated on:Mar 14, 2021 | 4:22 PM

ವಿಜಯಪುರ: ರಮೇಶ್ ಜಾರಕಿಹೊಳಿ ಸಿಡಿ ಹಿಂದೆ ಒಂದು ದೊಡ್ಡ ಷಡ್ಯಂತ್ರವಿದೆ. ರಾಜಕೀಯವಾಗಿ ಅವರನ್ನು ಮುಗಿಸಲು ವ್ಯವಸ್ಥಿತವಾಗಿ ಷಡ್ಯಂತ್ರ ನಡೆದಿದೆ ಸಿಡಿ ಪ್ರಕರಣದ ತನಿಖೆ ಹೊಣೆಯನ್ನು ಎಸ್​ಐಟಿಗೆ ವಹಿಸಲಾಗಿದೆ. ತನಿಖೆ ಎಷ್ಟರಮಟ್ಟಿಗೆ ಪಾರದರ್ಶಕತೆಯಿಂದ ನಡೆಯುತ್ತದೆ, ಎನ್ನುವುದೇ ನನಗೆ ಸಂಶಯ ಮೂಡಿಸುತ್ತಿದೆ‌. ಅಲ್ಲಿರುವ ಓರ್ವ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುತ್ತಾರೆ. ಹೀಗಾಗಿ ಎರಡೂ ಪಕ್ಷದಲ್ಲಿನ ಒಬ್ಬೊಬ್ಬ ನಾಯಕರು ಜಾರಕಿಹೊಳಿಯನ್ನು ವ್ಯವಸ್ಥಿತವಾಗಿ ಮುಗಿಸಲು ಪ್ಲಾನ್ ಮಾಡಿದ್ದಾರೆ. ಬಿಜೆಪಿಯ ಓರ್ವ ಉನ್ನತ ನಾಯಕ ಹಾಗೂ ಕಾಂಗ್ರೆಸ್​ನಲ್ಲಿನ ಓರ್ವ ಉನ್ನತ ನಾಯಕ ಸೇರಿ ಷಡ್ಯಂತ್ರ ರೂಪಿಸಿದ್ದಾರೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಹೊರಬಳೀಲು ಸಾಧ್ಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಜಾರಕಿಹೊಳಿ ದೂರು ನೀಡಿದ ತಕ್ಷಣ ಯುವತಿ ವಿಡಿಯೋ ಹೊರಗೆ ಬರುತ್ತದೆ. ಪ್ರಕರಣವನ್ನು ಎಸ್​ಐಟಿ ಬದಲು ಸಿಬಿಐ ತನಿಖೆಗೆ ಕೊಡಬೇಕು. ಇನ್ನೂ ಬಹಳ ಜನರ ಸಿಡಿಗಳು ಇವೆ. ಬಿಜೆಪಿಯ ಉನ್ನತ ನಾಯಕನ ಮಗನ ಬಳಿ ಹಾಗೂ ಕಾಂಗ್ರೆಸ್ ಉನ್ನತ ನಾಯಕನ ಮನೆಯಲ್ಲಿ ಸಿಡಿಗಳು ಇವೆ ಎಂದಿದ್ದಾರೆ.

ಸಿಬಿಐನಿಂದ ತನಿಖೆ ಮಾಡಿಸಿ, ಬ್ಲಾಕ್ ಮೇಲ್ ಮಾಡುವ ರಾಜಕಾರಣಿಗಳನ್ನು ಜೈಲಿಗೆ ಅಟ್ಟಬೇಕು. ಇಂತಹ ರಾಜಕಾರಣಿಗಳನ್ನು ಜೈಲಿಗೆ ಅಟ್ಟದಿದ್ದರೆ ಕರ್ನಾಟಕದಲ್ಲಿ ಕೆಟ್ಟ ಸಂಸ್ಕೃತಿ ಆರಂಭವಾಗುತ್ತದೆ. ಮೊದಲಿನ ವಿಡಿಯೋದಲ್ಲಿ ಬೀದರ್​ ಭಾಷೆ ಕೇಳಿಬರುತ್ತದೆ. ಮತ್ತೊಂದು ವಿಡಿಯೋದಲ್ಲಿ ಬೇರೆ ಶೈಲಿಯ ಕನ್ನಡ ಬಳಕೆ ಆಗಿದೆ. ಭಾಷೆಗಳು ಹೇಗೆ ಬದಲಾಗಿವೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ

ಇದನ್ನೂ ಓದಿ: ಸತೀಶ್ ಜಾರಕಿಹೊಳಿ-ಸಿದ್ದರಾಮಯ್ಯ ಮಾತುಕತೆ: ಸದನದಲ್ಲಿ ಕಾಂಗ್ರೆಸ್​ನಿಂದ ಸಿಡಿ ಪ್ರಕರಣ ಚರ್ಚೆ ಸಾಧ್ಯತೆ ಕಡಿಮೆ!

Published On - 4:20 pm, Sun, 14 March 21

ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು