AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್

ಸಿಡಿ ಪ್ರಕರಣವನ್ನು ಎಸ್​ಐಟಿ ತನಿಖೆಗೆ ಕೊಡಲಾಗಿದೆ. ತನಿಖೆ ಎಷ್ಟರಮಟ್ಟಿಗೆ ಪಾರದರ್ಶಕತೆಯಿಂದ ನಡೆಯುತ್ತದೆ, ಎನ್ನುವುದೇ ನನಗೆ ಸಂಶಯ ಮೂಡಿಸುತ್ತಿದೆ‌ ಎಂದು ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್ (ಸಂಗ್ರಹ ಚಿತ್ರ)
shruti hegde
|

Updated on:Mar 14, 2021 | 4:22 PM

Share

ವಿಜಯಪುರ: ರಮೇಶ್ ಜಾರಕಿಹೊಳಿ ಸಿಡಿ ಹಿಂದೆ ಒಂದು ದೊಡ್ಡ ಷಡ್ಯಂತ್ರವಿದೆ. ರಾಜಕೀಯವಾಗಿ ಅವರನ್ನು ಮುಗಿಸಲು ವ್ಯವಸ್ಥಿತವಾಗಿ ಷಡ್ಯಂತ್ರ ನಡೆದಿದೆ ಸಿಡಿ ಪ್ರಕರಣದ ತನಿಖೆ ಹೊಣೆಯನ್ನು ಎಸ್​ಐಟಿಗೆ ವಹಿಸಲಾಗಿದೆ. ತನಿಖೆ ಎಷ್ಟರಮಟ್ಟಿಗೆ ಪಾರದರ್ಶಕತೆಯಿಂದ ನಡೆಯುತ್ತದೆ, ಎನ್ನುವುದೇ ನನಗೆ ಸಂಶಯ ಮೂಡಿಸುತ್ತಿದೆ‌. ಅಲ್ಲಿರುವ ಓರ್ವ ಅಧಿಕಾರಿ ವಿಜಯೇಂದ್ರ ಹೇಳಿದಂತೆ ಕೇಳುತ್ತಾರೆ. ಹೀಗಾಗಿ ಎರಡೂ ಪಕ್ಷದಲ್ಲಿನ ಒಬ್ಬೊಬ್ಬ ನಾಯಕರು ಜಾರಕಿಹೊಳಿಯನ್ನು ವ್ಯವಸ್ಥಿತವಾಗಿ ಮುಗಿಸಲು ಪ್ಲಾನ್ ಮಾಡಿದ್ದಾರೆ. ಬಿಜೆಪಿಯ ಓರ್ವ ಉನ್ನತ ನಾಯಕ ಹಾಗೂ ಕಾಂಗ್ರೆಸ್​ನಲ್ಲಿನ ಓರ್ವ ಉನ್ನತ ನಾಯಕ ಸೇರಿ ಷಡ್ಯಂತ್ರ ರೂಪಿಸಿದ್ದಾರೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಹೊರಬಳೀಲು ಸಾಧ್ಯ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಜಾರಕಿಹೊಳಿ ದೂರು ನೀಡಿದ ತಕ್ಷಣ ಯುವತಿ ವಿಡಿಯೋ ಹೊರಗೆ ಬರುತ್ತದೆ. ಪ್ರಕರಣವನ್ನು ಎಸ್​ಐಟಿ ಬದಲು ಸಿಬಿಐ ತನಿಖೆಗೆ ಕೊಡಬೇಕು. ಇನ್ನೂ ಬಹಳ ಜನರ ಸಿಡಿಗಳು ಇವೆ. ಬಿಜೆಪಿಯ ಉನ್ನತ ನಾಯಕನ ಮಗನ ಬಳಿ ಹಾಗೂ ಕಾಂಗ್ರೆಸ್ ಉನ್ನತ ನಾಯಕನ ಮನೆಯಲ್ಲಿ ಸಿಡಿಗಳು ಇವೆ ಎಂದಿದ್ದಾರೆ.

ಸಿಬಿಐನಿಂದ ತನಿಖೆ ಮಾಡಿಸಿ, ಬ್ಲಾಕ್ ಮೇಲ್ ಮಾಡುವ ರಾಜಕಾರಣಿಗಳನ್ನು ಜೈಲಿಗೆ ಅಟ್ಟಬೇಕು. ಇಂತಹ ರಾಜಕಾರಣಿಗಳನ್ನು ಜೈಲಿಗೆ ಅಟ್ಟದಿದ್ದರೆ ಕರ್ನಾಟಕದಲ್ಲಿ ಕೆಟ್ಟ ಸಂಸ್ಕೃತಿ ಆರಂಭವಾಗುತ್ತದೆ. ಮೊದಲಿನ ವಿಡಿಯೋದಲ್ಲಿ ಬೀದರ್​ ಭಾಷೆ ಕೇಳಿಬರುತ್ತದೆ. ಮತ್ತೊಂದು ವಿಡಿಯೋದಲ್ಲಿ ಬೇರೆ ಶೈಲಿಯ ಕನ್ನಡ ಬಳಕೆ ಆಗಿದೆ. ಭಾಷೆಗಳು ಹೇಗೆ ಬದಲಾಗಿವೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಿನ್ನೆಯಷ್ಟೇ ದೂರು ದಾಖಲಾಗಿದೆ.. ತಾಳ್ಮೆಯಿಂದ ಕಾಯೋಣ: ಸತೀಶ್​ ಜಾರಕಿಹೊಳಿ

ಇದನ್ನೂ ಓದಿ: ಸತೀಶ್ ಜಾರಕಿಹೊಳಿ-ಸಿದ್ದರಾಮಯ್ಯ ಮಾತುಕತೆ: ಸದನದಲ್ಲಿ ಕಾಂಗ್ರೆಸ್​ನಿಂದ ಸಿಡಿ ಪ್ರಕರಣ ಚರ್ಚೆ ಸಾಧ್ಯತೆ ಕಡಿಮೆ!

Published On - 4:20 pm, Sun, 14 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!