AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಸಂಸದರಾಗಲು ಅನರ್ಹ; ದಿನೇಶ್ ಗುಂಡೂರಾವ್ ವಾಗ್ದಾಳಿ

Tejasvi Surya: ‘ಶೇಕಡಾ 75ರಷ್ಟು ಬೆಡ್‌ಗಳನ್ನು ಬಿಜೆಪಿಗರಿಗೆ ನೀಡುತ್ತಿದ್ದಾರೆ. ಉಳಿದ ಬೆಡ್‌ಗಳನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಇದನ್ನು ಸಮರ್ಥಿಸಿಕೊಳ್ಳಬಾರದು.

ತೇಜಸ್ವಿ ಸೂರ್ಯ ಸಂಸದರಾಗಲು ಅನರ್ಹ; ದಿನೇಶ್ ಗುಂಡೂರಾವ್ ವಾಗ್ದಾಳಿ
ತೇಜಸ್ವಿ ಸೂರ್ಯ ಮತ್ತು ದಿನೇಶ್ ಗುಂಡೂರಾವ್
Follow us
guruganesh bhat
|

Updated on:May 08, 2021 | 3:29 PM

ಬೆಂಗಳೂರು: ನಗರದ ಆಸ್ಪತ್ರೆಗಳಲ್ಲಿ ಬಿಜೆಪಿ ನಾಯಕರೇ ಬೆಡ್ ಹಗರಣ ನಡೆಸಿದ್ದಾರೆ. ಜತೆಗೆ ಅವರೇ ಹಗರಣ ಆಗಿದೆ ಎಂದು ಆರೋಪಿಸಿ ನಾಟಕ ಮಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಶಾಸಕ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದರು. ಬಿಬಿಎಂಪಿ ವಾರ್ ರೂಂಗೆ ಸಂಸದ ತೇಜಸ್ವಿ ಸೂರ್ಯ  ಹೋಗಿ ವಿಡಿಯೋ ಮಾಡದೇ ಕ್ಷಮಾಪಣೆ ಕೇಳಿದ್ದಾರೆ. ಇಂಥವರು ಸಂಸದರಾಗುವುದಕ್ಕೆ ಅನರ್ಹರು. ಬಿಜೆಪಿ ನಾಯಕರು ಮಾಡಿದ ಕೆಲಸ ಪ್ರತಿಯೊಬ್ಬ ರಾಜಕಾರಣಿಗೂ ಅವಮಾನ. ಐಎಎಸ್ ಅಧಿಕಾರಿಗೆ ರಕ್ಷಣೆ ನೀಡಲಾಗದ ಸರ್ಕಾರ ಅರ್ಹ ಸರ್ಕಾರವೇ? ಇವರೆಲ್ಲರನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಕೃಷ್ಣ ಭೈರೇಗೌಡ, ‘ಶೇಕಡಾ 75ರಷ್ಟು ಬೆಡ್‌ಗಳನ್ನು ಬಿಜೆಪಿಗರಿಗೆ ನೀಡುತ್ತಿದ್ದಾರೆ. ಉಳಿದ ಬೆಡ್‌ಗಳನ್ನು ಸಾರ್ವಜನಿಕರಿಗೆ ನೀಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಇದನ್ನು ಸಮರ್ಥಿಸಿಕೊಳ್ಳಬಾರದು. ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಧೈರ್ಯ ತುಂಬಬೇಕು. ಬಿಜೆಪಿಯ ದಾಂಧಲೆ ಮುಂದುವರಿದರೆ ಜನ ಸಾಯುವ ಪರಿಸ್ಥಿತು ಉಂಟಾಗಲಿದೆ ಎಂದು ವಾಗ್ಧಾಳಿ ನಡೆಸಿದರು.

ಶಾಸಕ ಸತೀಶ್ ರೆಡ್ಡಿ ವಿರುದ್ಧ ಇನ್ನೂ ಏಕೆ ಕ್ರಮ ಕೈಗೊಂಡಿಲ್ಲ?

ಬೆಡ್​ ಬ್ಲಾಕಿಂಗ್ ಹಗರಣ ಪ್ರಕರಣದಲ್ಲಿ ಇನ್ನೂ ಕ್ರಮ ಕೈಗೊಂಡಿಲ್ಲವೇಕೆ?. ಕರ್ತವ್ಯನಿರತ ಐಎಎಸ್​ ಅಧಿಕಾರಿಯನ್ನು ಎಳೆದಾಡಿದ್ದಾರೆ. ಆ ಸ್ಥಳದಲ್ಲಿ ಪೊಲೀಸರಿದ್ದರೂ ಇನ್ನೂ ಪ್ರಕರಣ ದಾಖಲಿಸಿಲ್ಲ. ಬೊಮ್ಮನಹಳ್ಳಿಯಲ್ಲಿ ಬೆಡ್​ ಬ್ಲಾಕಿಂಗ್ ಹಗರಣ ಆಗಿದೆ. ಆದರೆ ದಕ್ಷಿಣ ವಲಯದಲ್ಲಿ ಬಂದು ಪರಿಶೀಲನೆ ಮಾಡ್ತಾರೆ. ಸರ್ಕಾರದ ವೈಫಲ್ಯ ಮುಚ್ಚಲು ಈ ರೀತಿ ಆರೋಪಿಸಿದ್ದಾರೆ. ಇದೆಲ್ಲದರ ಬಗ್ಗೆಯೂ ಸಂಪೂರ್ಣವಾಗಿ ತನಿಖೆಯಾಗಬೇಕು ಎಂದು ಬೆಂಗಳೂರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಈವರೆಗೂ ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದರೆ ರಾಜ್ಯದಲ್ಲಿ ಗೃಹ ಇಲಾಖೆ ಇದೆಯಾ ಇಲ್ವಾ ಅನ್ನೋ ಪ್ರಶ್ನೆ ಮೂಡುತ್ತಿದೆ? ಎಂದ ಅವರು ವಾಗ್ಧಾಳಿ ನಡೆಸಿದರು. ಈ ಮೂಲಕ ಕಾಂಗ್ರೆಸ್ ನಾಯಕರು ಬಿಬಿಎಂಪಿ ಬೆಡ್ ಹಗರಣದ ವಿಷಯದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ವಾಗ್ಧಾಳಿ ನಡೆಸಿದರು.

ಇದನ್ನೂ ಓದಿ: ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್​ರೆಡ್ಡಿ ಬೆಂಬಲಿಗರ ವಿರುದ್ಧ ಪೊಲೀಸರಿಗೆ ದೂರು

12 ಆಸ್ಪತ್ರೆಗಳಲ್ಲಿ ರಾತ್ರೋರಾತ್ರಿ ಬಿಬಿಎಂಪಿಯಿಂದ ಬೆಡ್ ಬುಕ್ಕಿಂಗ್ ದಂದೆ: ಇದು ಭ್ರಷ್ಟಾಚಾರ ಅಲ್ಲ, ಸೋಂಕಿತರ ಹತ್ಯೆ; ಸಂಸದ ತೇಜಸ್ವಿ ಸೂರ್ಯ

(MLA Dinesh Gundu Rao says Tejasvi Surya is unfit to a MP bbmp hospital bed blocking )

Published On - 3:23 pm, Sat, 8 May 21

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು