AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ಬದಲಾದ್ರೆ ನಾನೂ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವೆ: ಶಾಸಕ ದುರ್ಯೋಧನ ಐಹೊಳೆ

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆಯ ಸಾಧ್ಯತೆ ಸುದ್ದಿ ಬೆನ್ನಲ್ಲೆ ಸಿಎಂ ಸೀಟಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಆದರೆ ಸದ್ಯ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ನಿಗೂಢವಾಗಿದೆ.

ಸಂಪುಟ ಬದಲಾದ್ರೆ ನಾನೂ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವೆ: ಶಾಸಕ ದುರ್ಯೋಧನ ಐಹೊಳೆ
ಶಾಸಕ ದುರ್ಯೋಧನ ಐಹೊಳೆ
TV9 Web
| Updated By: sandhya thejappa|

Updated on: Jul 20, 2021 | 10:56 AM

Share

ಬೆಳಗಾವಿ: ಸಂಪುಟದಲ್ಲಿ ಬದಲಾವಣೆ ಮಾಡಿದರೆ ನನಗೂ ಮಂತ್ರಿ ಸ್ಥಾನ ಕೊಡಿ ಅಂತಾ ಕೇಳುತ್ತೇನೆ ಅಂತ ಬೆಳಗಾವಿಯಲ್ಲಿ ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿಕೆ ನೀಡಿದ್ದಾರೆ. ಮೂರು ಬಾರಿ ನಾನು ಶಾಸಕನಾಗಿ ಆಯ್ಕೆ ಆಗಿದ್ದೇನೆ. ಸಂಪುಟದಲ್ಲಿ ಬದಲಾವಣೆ ಮಾಡಿದರೆ ನನಗೂ ಮಂತ್ರಿ ಸ್ಥಾನ ಕೊಡಿ ಅಂತಾ ಕೇಳುತ್ತೇನೆ. ನಮಗೂ ಮಂತ್ರಿ ಆಗಬೇಕೆಂಬ ಅಪೇಕ್ಷೆ ಇದೆ. ನಾನೂ ಮಂತ್ರಿ ಸ್ಥಾನ ಕೇಳುತ್ತೇನೆ. ಇಲ್ಲವಾದರೆ ಅನಿವಾರ್ಯವಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗುವೆ ಅಂತ ಶಾಸಕ ದುರ್ಯೋಧನ ಐಹೊಳೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆಯ ಸಾಧ್ಯತೆ ಸುದ್ದಿ ಬೆನ್ನಲ್ಲೆ ಸಿಎಂ ಸೀಟಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಆದರೆ ಸದ್ಯ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ನಿಗೂಢವಾಗಿದೆ. ಈಗಾಗಲೇ ನಾವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ದೆಹಲಿಗೆ ಹೈಕಮಾಂಡ್ ಕರೆಯದಿದ್ದರೂ ಹಲವು ಭಾರಿ ಭೇಟಿ ಕೊಡುತ್ತಿದ್ದಾರೆ.

ಕೆಲ ಶಾಸಕರು ತೆರೆಮರೆಯಲ್ಲಿಯೇ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸೀಟ್ಗಾಗಿ 2,000 ಕೋಟಿ ಕೊಡಲು ಓಡಾಡುತ್ತಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಉಮೇಶ್ ಕತ್ತಿ ಕೂಡಾ ನಿನ್ನೆ ಬಹಿರಂಗವಾಗಿಯೇ ನಾನು ಸಿಎಂ ಆಗುವ ಎಲ್ಲಾ ಲಕ್ಷಣ ಹೊಂದಿದ್ದೇನೆ ಎಂದಿದ್ದರು. ಹೀಗಾಗಿ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ

‘ಲೀಡರ್ ಚೇಂಜ್’ಗೆ ಸಜ್ಜಾಗಿ ಬಿಟ್ಟಿದೆಯಾ ಕಮಲ ಹೈಕಮಾಂಡ್? ನಿಜಕ್ಕೂ ‘ಕೇಸರಿ ಮನೆ’ಯಲ್ಲಿನ ಬೆಳವಣಿಗೆಗಳು ಏನು? ಇಲ್ಲಿದೆ ಒಂದು ಇಣುಕು ನೋಟ

ಆಪ್ತ ಸಚಿವರ ಜತೆ ಭೋಜನಕೂಟದಲ್ಲಿ ಸಿಎಂ ಯಡಿಯೂರಪ್ಪ ಮೌನ, ಟೆನ್ಷನ್; ದಿಲ್ಲಿ ಭೇಟಿ ಮುಂದೂಡಿದ ನಳೀನ್ ಕುಮಾರ್ ಕಟೀಲ್

(MLA Duryodhan Aihole says I will demand a ministerial post in belagavi)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ