AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲಲೆ ಪಾಂಡು ಕುಮಾರರಾ..ಕೊಲಲೇ.. -ಗ್ರಾ.ಪಂ ಎಲೆಕ್ಷನ್​ ಸಿದ್ಧತೆ ಮಧ್ಯೆ G.T.ದೇವೇಗೌಡರ ಭರ್ಜರಿ ಸಿಂಗಿಂಗ್​!

ಜಿಲ್ಲಾ ಪೌರಾಣಿಕ ರಂಗಭೂಮಿ ನಿರ್ದೇಶಕರು, ವಾದ್ಯ ವೃಂದದವರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ನಾಟಕದ ತುಣುಕೊಂದನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದ್ದಾರೆ.ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ನಾಟಕವೊಂದರ ಹಾಡು ಹಾಡಿದರು. 

ಕೊಲಲೆ ಪಾಂಡು ಕುಮಾರರಾ..ಕೊಲಲೇ.. -ಗ್ರಾ.ಪಂ ಎಲೆಕ್ಷನ್​ ಸಿದ್ಧತೆ ಮಧ್ಯೆ G.T.ದೇವೇಗೌಡರ ಭರ್ಜರಿ ಸಿಂಗಿಂಗ್​!
ನಾಟಕದ ಹಾಡು ಹಾಡಿ ರಂಜಿಸಿದ ಜಿ.ಟಿ.ದೇವೇಗೌಡ
Skanda
|

Updated on:Dec 13, 2020 | 2:59 PM

Share

ಮೈಸೂರು: ಜಿಲ್ಲಾ ಪೌರಾಣಿಕ ರಂಗಭೂಮಿ ನಿರ್ದೇಶಕರು, ವಾದ್ಯ ವೃಂದದವರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ನಾಟಕದ ತುಣುಕೊಂದನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದ್ದಾರೆ.ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ನಾಟಕವೊಂದರ ಹಾಡು ಹಾಡಿದರು.

ಒಂದೆಡೆ ಚಾಮುಂಡೇಶ್ವರಿ ಕ್ಷೇತ್ರದ ಗ್ರಾ.ಪಂ ಚುನಾವಣೆಗೆ ಜೆಡಿಎಸ್ ಚುನಾವಣೆ ಸಿದ್ದತೆ ಸಭೆ ನಡೆಸುತ್ತಿದೆ. ಚುನಾವಣೆಯ ಒತ್ತಡದ ನಡುವೆಯೂ ಹಾಡು ಹಾಡುತ್ತಾ ಮನರಂಜನೆ ನೀಡುವ ಮೂಲಕ ಜಿ.ಟಿ.ದೇವೇಗೌಡ ನೋಡುಗರ ಗಮನ ಸೆಳೆದರು. ಕೊಲಲೆ ಪಾಂಡು ಕುಮಾರರಾ.. ಕೊಲಲೇ ಕುಂತೀ ಸುತರಾ.. ಕೊಲಲೇ.. ಕೊಲಲೇ ಎಂದು ನಾಟಕವೊಂದರ ಹಾಡಿನ ತುಣುಕನ್ನು ಹಾಡುವ ಮೂಲಕ ಹೇಳಿದ ಜಿ.ಟಿ.ದೇವೇಗೌಡ ನೆರೆದವರ ಮನಗೆದ್ದರು.

ಜಿಲ್ಲಾ ಪೌರಾಣಿಕ ರಂಗಭೂಮಿ ನಿರ್ದೇಶಕರು, ವಾದ್ಯ ವೃಂದದವರ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಸೋಮನಾಥ ಸ್ವಾಮೀಜಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತಿ ಚುನಾವಣೆಯ ಪ್ರಚಾರಕ್ಕೆ ಹೋಗಲ್ಲ

ಗ್ರಾ.ಪಂ ಚುನಾವಣೆ ಪ್ರಚಾರದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ ನಾನು ಪ್ರಚಾರ ಮಾಡಲು ಯಾವ ಕ್ಷೇತ್ರಕ್ಕೂ ಹೋಗಲ್ಲ ಎಂದರು. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೂ ಹೋಗಲ್ಲ, ಹುಣಸೂರಿಗೂ ಹೋಗಲ್ಲ. ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ ಸಭೆಗೆ ಆಹ್ವಾನ ಸಹ ನೀಡಿಲ್ಲ. ನಾನು ಹಾಜರಾಗೋದೂ ಇಲ್ಲ. ಗ್ರಾ.ಪಂ ಚುನಾವಣೆ ಪಕ್ಷದ ಚಿಹ್ನೆ ಮೇಲೆ ನಡೆಯುವ ಚುನಾವಣೆಯಲ್ಲ. ಈ ಕಾರಣಕ್ಕೋಸ್ಕರ ನಾನು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತಟಸ್ಥವಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.

ನಿನ್ನೆಯಷ್ಟೇ ಜೆಡಿಎಸ್ ಪಕ್ಷದಿಂದ ಹುಣಸೂರು ಕ್ಷೇತ್ರದ ಉಸ್ತುವರಿಯನ್ನಾಗಿ ಮಾಡಲಾಗಿತ್ತು. ಈ ವಿಚಾರವನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಪಕ್ಷದ ಕಡೆಯಿಂದ ನನಗೆ ಮಾಹಿತಿಯೇ ಬಂದಿಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನ ಹೆಚ್.ಡಿ ಕುಮಾರಸ್ವಾಮಿ ಅವರೇ ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ನನಗೆ ಹುಣಸೂರು ಕ್ಷೇತ್ರದ ಪರಿಚಯವಿರುವ ಕಾರಣ ಉಸ್ತುವಾರಿ ವಹಿಸಿರಬಹುದು ಎನ್ನುವ ಮೂಲಕ ಗ್ರಾ.ಪಂ ಚುನಾವಣೆಯಿಂದ ದೂರವಿರುವುದಾಗಿ ತಿಳಿಸಿದರು.

ಇನ್ಮುಂದೆ ಪ್ರತಿ ಗ್ರಾ.ಪಂ.ಗೆ ₹ 1.5 ಕೋಟಿ ಅನುದಾನ ನೇರ ಬಿಡುಗಡೆ: ಡಿಸಿಎಂ ಅಶ್ವತ್ಥನಾರಾಯಣ್​ ಘೋಷಣೆ

Published On - 2:37 pm, Sun, 13 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ