AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ವಿರುದ್ಧ ಹೆಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ, ಇಂತಹ ಆರೋಪ ಮಾಡಿದರೆ ನಾನು ಸುಮ್ಮನಿರಲ್ಲ -ಹರತಾಳು ಹಾಲಪ್ಪ ತಿರುಗೇಟು

ಎಂಎಲ್ಸಿ ಹೆಚ್.ವಿಶ್ವನಾಥ್ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವೇಳೆ ಬಿಜೆಪಿ ಶಾಸಕ ಹರತಾಳು ಹಾಲಪ್ಪನವರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹರತಾಳು ಹಾಲಪ್ಪ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿದ್ದ. ಅಲ್ಲಿ ಸ್ನೇಹಿತನ ಪತ್ನಿ ಮೇಲೆಯೇ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಹಾಲಪ್ಪ ವಿಶ್ವನಾಥ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ನನ್ನ ವಿರುದ್ಧ ಹೆಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ, ಇಂತಹ ಆರೋಪ ಮಾಡಿದರೆ ನಾನು ಸುಮ್ಮನಿರಲ್ಲ -ಹರತಾಳು ಹಾಲಪ್ಪ ತಿರುಗೇಟು
ಹರತಾಳು ಹಾಲಪ್ಪ
TV9 Web
| Edited By: ಆಯೇಷಾ ಬಾನು|

Updated on: Jun 18, 2021 | 2:33 PM

Share

ಬೆಂಗಳೂರು: ನನ್ನ ವಿರುದ್ಧ ಹೆಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ. ಇದೇ ರೀತಿ ಮಾತನಾಡಿದರೆ ಕೋರ್ಟ್ ಮೂಲಕ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಬಿಜೆಪಿ ಶಾಸಕ ಹರತಾಳು ಹಾಲಪ್ಪ ಹೆಚ್.ವಿಶ್ವನಾಥ್ಗೆ ತಿರುಗೇಟು ನೀಡಿದ್ದಾರೆ.

ಎಂಎಲ್ಸಿ ಹೆಚ್.ವಿಶ್ವನಾಥ್ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವೇಳೆ ಬಿಜೆಪಿ ಶಾಸಕ ಹರತಾಳು ಹಾಲಪ್ಪನವರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹರತಾಳು ಹಾಲಪ್ಪ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿದ್ದ. ಅಲ್ಲಿ ಸ್ನೇಹಿತನ ಪತ್ನಿ ಮೇಲೆಯೇ ಅತ್ಯಾಚಾರ ಮಾಡಿದ್ದ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಹಾಲಪ್ಪ ವಿಶ್ವನಾಥ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ನನ್ನ ವಿರುದ್ಧ ಹೆಚ್.ವಿಶ್ವನಾಥ್ ಮಾತನಾಡಿದ್ದು ಸರಿಯಲ್ಲ. ಇದೇ ರೀತಿ ಮಾತನಾಡಿದರೆ ಕೋರ್ಟ್ ಮೂಲಕ ಅವರಿಗೆ ನೋಟಿಸ್ ನೀಡಲಾಗುವುದು. ಕೋರ್ಟ್, ದೇಗುಲ, ಜನತಾ ನ್ಯಾಯಾಲಯದಲ್ಲಿ ಮೂರೂ ಕಡೆ ಗೆದ್ದು ಬಂದ ನನ್ನ ವಿರುದ್ಧ ಆರೋಪಿಸಿದ್ದಾರೆ. ನನ್ನ ವಿರುದ್ಧ ಆರೋಪ ಮಾಡಿದರೆ ನಾನು ಸುಮ್ಮನಿರಲ್ಲ. BSY ವಯಸ್ಸಿನ ಬಗ್ಗೆ ಹೆಚ್.ವಿಶ್ವನಾಥ್ ಮಾತಾಡುತ್ತಿದ್ದಾರೆ. ಇವರಿಗೇನು ವಯಸ್ಸಾಗಿಲ್ಲವಾ ಎಂದು ಹಾಲಪ್ಪ ಪ್ರಶ್ನೆ ಮಾಡಿದ್ದಾರೆ. ನನಗೆ ಯಾವುದೇ ವಿಡಿಯೋ, ಆಡಿಯೋ ಬಗ್ಗೆ ಗೊತ್ತಿಲ್ಲ ಎಂದು ಟಿವಿ9ಗೆ ಬಿಜೆಪಿ ಶಾಸಕ ಹರತಾಳು ಹಾಲಪ್ಪ ತಿಳಿಸಿದ್ರು.

ಬಿಜೆಪಿ ವಿರುದ್ಧ ಶಾಸಕ ಎಸ್.ರಾಮಪ್ಪ ವಾಗ್ದಾಳಿ ಬಿಜೆಪಿಯಲ್ಲಿ ಈಗ ದುಡ್ಡು ಹೊಡೆಯುವುದು, ನಾಯಕತ್ವ ಬದಲಾವಣೆ ಮಾತಾಡುವುದು ಮಾತ್ರ ನಡೆದಿದೆ. ಕೊರೊನಾ ಸಂದರ್ಭದಲ್ಲಿ ಜನರಿಗೆ ಸ್ಪಂದಿಸುವ ಸೌಜನ್ಯವಿಲ್ಲ ಎಂದು ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ವಾಗ್ದಾಳಿ ನಡೆಸಿದ್ದಾರೆ. ಅವರು ಹಾಳಾಗಿ ಹೋಗಲಿ, ನಮ್ಮ ಕ್ಷೇತ್ರದ ಕೆಲಸವೂ ಆಗ್ತಿಲ್ಲ. ಕೆಲವು ರಸ್ತೆ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಈಗ ಅರುಣ್ ಸಿಂಗ್ ಬಂದು ಯಡಿಯೂರಪ್ಪ ಅವರನ್ನೆ ಮುಂದೂವರೆಸಿ ಎನ್ನುತ್ತಿದ್ದಾರೆ. ಆದ್ರು ಭಿನ್ನಮತ ಮುಗಿಯುವಂತೆ ಕಾಣುತ್ತಿಲ್ಲ. ಕೊರೊನಾದಿಂದ ಜನ ಸಾವನ್ನಪ್ಪುತ್ತಿದ್ದಾರೆ. ಅದರ ಬಗ್ಗೆ ಗಮನ ಹರಿಸಿ ಎಂದು ಎಸ್ ರಾಮಪ್ಪ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: International Picnic Day: ಕೊವಿಡ್​ ಸಮಯದಲ್ಲಿ ಪಿಕ್​ನಿಕ್​ ಹೋಗಲು ಸಾಧ್ಯವಾಗುತ್ತಿಲ್ಲವೆಂದು ಬೇಸರಬೇಡ!​ ಮನೆಯವರೊಂದಿಗೆ ಸಮಯ ಕಳೆಯಲು ಇಲ್ಲಿದೆ ಕೆಲವು ಸಲಹೆಗಳು

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ