AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ ಸೋಂಕಿತರಿಗೆ ಬೆಡ್ ಮೀಸಲು ವಿಚಾರ; ಸಂಕಷ್ಟದ ಸಮಯದಲ್ಲಿ ಈ ಕ್ರಮ ಅಮಾನವೀಯ: ಕೃಷ್ಣ ಭೈರೇಗೌಡ

ಕೆಲವರಿಗೆ ಮಾತ್ರ ಈ ರೀತಿ ವೈದ್ಯಕೀಯ ಸೌಲಭ್ಯ ನೀಡೋದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ವೈದ್ಯಕೀಯ ಸೌಲಭ್ಯ ಎಲ್ಲರಿಗೂ ಸಿಗಬೇಕು. ಹಾಗೆಂದು ಆದೇಶಿಸಲು ಪತ್ರದಲ್ಲಿ ಮನವಿ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಸೋಂಕಿತರಿಗೆ ಬೆಡ್ ಮೀಸಲು ವಿಚಾರ; ಸಂಕಷ್ಟದ ಸಮಯದಲ್ಲಿ ಈ ಕ್ರಮ ಅಮಾನವೀಯ: ಕೃಷ್ಣ ಭೈರೇಗೌಡ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 23, 2021 | 12:33 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಸೋಂಕಿತರಿಗೆ ಬೆಡ್ ಮೀಸಲು ವಿಚಾರಕ್ಕೆ ಸಂಬಂಧಿಸಿ ಶಾಸಕ ಕೃಷ್ಣ ಭೈರೇಗೌಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಂಕಷ್ಟದ ಸಮಯದಲ್ಲಿ ಬೆಡ್ ಮೀಸಲಿಟ್ಟಿದ್ದು ಅಮಾನವೀಯ. ಇದು ಕಾನೂನುಬಾಹಿರ ಆದೇಶ ಎಂದು ಯಡಿಯೂರಪ್ಪಗೆ ಪತ್ರದ ಮೂಲಕ ತಿಳಿಸಿದ್ಧಾರೆ.

ಕೆಲವರಿಗೆ ಮಾತ್ರ ಈ ರೀತಿ ವೈದ್ಯಕೀಯ ಸೌಲಭ್ಯ ನೀಡೋದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ವೈದ್ಯಕೀಯ ಸೌಲಭ್ಯ ಎಲ್ಲರಿಗೂ ಸಿಗಬೇಕು. ಹಾಗೆಂದು ಆದೇಶಿಸಲು ಪತ್ರದಲ್ಲಿ ಮನವಿ ಮಾಡಲಾಗಿದೆ. ಯಡಿಯೂರಪ್ಪಗೆ ಬರೆದ ಪತ್ರದಲ್ಲಿ ಕೃಷ್ಣ ಭೈರೇಗೌಡ ಮನವಿ ಮಾಡಿದ್ದಾರೆ. ದುರಂತದ ಸಮಯದಲ್ಲಿ ಒಂದೇ ಜಿಲ್ಲೆ ಹಾಸಿಗೆ ಮೀಸಲಿಡುವುದು ಅಮಾನವೀಯ ಮಾತ್ರವಲ್ಲ ಇದು ಕಾನೂನು ಬಾಹಿತ ಆದೇಶ ಎಂದು ಅವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ಸೋಂಕಿತರಿಗೆ ಬೆಂಗಳೂರಿನ 3 ಆಸ್ಪತ್ರೆಗಳಲ್ಲಿ ಶೇ 15ರಷ್ಟು ಬೆಡ್​ಗಳನ್ನು ಮೀಸಲಿರಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ಆದೇಶಕ್ಕೆ ಬೆಂಗಳೂರಿನ ಇತರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ವಿಚಾರ ಬಿಬಿಎಂಪಿಯ ಹೊಣೆ. ಆದರೆ ಆರೋಗ್ಯ ಇಲಾಖೆ ಆದೇಶ ನೀಡಲು ಅವಕಾಶ ಕೊಟ್ಟಿದ್ದೇಕೆ? ಆರೋಗ್ಯ ಸಚಿವ ಸುಧಾಕರ್‌ ಜಿಲ್ಲೆಗೆ ಬೇರೆ ಕಾನೂನು, ಇತರರಿಗೆ ಒಂದು ಕಾನೂನೇ? ಎಂದು ಕೆಲವು ಸಚಿವರು ಪ್ರಶ್ನಿಸಿದ್ದರು.

ಬೆಂಗಳೂರಿನ ಬಳ್ಳಾರಿ ರಸ್ತೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆ, ಸಹಕಾರನಗರದ ಆಸ್ಟರ್, ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗಳಲ್ಲಿ ಚಿಕ್ಕಬಳ್ಳಾಪುರದ ಸರ್ಕಾರಿ ಕೋಟಾದಡಿಯಲ್ಲಿ ಶಿಫಾರಸಾಗುವ ಸೋಂಕಿತರಿಗೆ ಹಾಸಿಗೆ ಕಾಯ್ದಿರಿಸಲು ಆರೋಗ್ಯ ಇಲಾಖೆ ಆದೇಶಿಸಿದೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ಬೆಂಗಳೂರಿನ ಇತರ ಸಚಿವರು ಬಿಬಿಎಂಪಿ ಮುಖ್ಯ ಆಯುಕ್ತರನ್ನು ಈ ಕುರಿತು ಪ್ರಶ್ನಿಸಿದ್ದರು. ಸಚಿವ ಡಾ.ಸುಧಾಕರ್ ಸೂಚನೆ ಮೇರೆಗೆ ಬೆಡ್​ಗಳು ಮೀಸಲು ಇರಿಸಲಾಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: Union Health Secretary PC: ಕಳೆದ 12 ದಿನಗಳಿಂದ ದೇಶದಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ: ಲವ್ ಅಗರ್ವಾಲ್

ಈ ಪ್ರದೇಶದಲ್ಲಿ ಇಷ್ಟು ದಿನಗಳಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕು ದಾಖಲು; ಅಧಿಕಾರಿಗಳಲ್ಲಿ ಆತಂಕ

Published On - 6:14 pm, Sat, 15 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು