AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಚಾರ್ಜ್, ನನ್ನ ವೈರಿಗಳಿಗೂ ಕೊರೊನಾ ಬರೋದು ಬೇಡ ಎಂದ ಶಾಸಕಿ

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ, ಇಬ್ಬರು ಸಹೋದರಿಯರು, ಅಡುಗೆ ಭಟ್ಟ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಕುಟುಂಬಸ್ಥರು ಆಸ್ಪತ್ರೆಯಿಂದ ಡಿಸ್ಚಾರ್ಜ್, ನನ್ನ ವೈರಿಗಳಿಗೂ ಕೊರೊನಾ ಬರೋದು ಬೇಡ ಎಂದ ಶಾಸಕಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಆಯೇಷಾ ಬಾನು
|

Updated on: Apr 26, 2021 | 11:49 AM

Share

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಐವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಏಪ್ರಿಲ್ 15ರಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ, ಇಬ್ಬರು ಸಹೋದರಿಯರು, ಅಡುಗೆ ಭಟ್ಟನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಏಪ್ರಿಲ್ 18ರಂದು ತೀವ್ರ ಉಸಿರಾಟದ ಸಮಸ್ಯೆಯಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಶಾಸಕಿ ಸೇರಿ ಐವರು ಡಿಸ್ಚಾರ್ಜ್ ಆಗಿದ್ದಾರೆ. ಒಂದು ವಾರ ಹೋಮ್ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆದ ಬಳಿಕ ಶಾಸಕಿ ಹೆಬ್ಬಾಳ್ಕರ್ ಮಾತನಾಡಿದ್ದು ನಮ್ಮ ಮನೆಯಲ್ಲಿ ಹದಿನೆಂಟು ಜನ ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಇವತ್ತು ದೇವರ ದಯೆಯಿಂದ ಎಲ್ಲರೂ ಗುಣಮುಖರಾಗಿದ್ದೇವೆ. ಕೊರೊನಾ ಬಗ್ಗೆ ನಾವು ನಿರ್ಲಕ್ಷ್ಯ ಮಾಡಿದ್ವಿ. ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು. ಕೊವಿಡ್ ವಾರಿಯರ್ಸ್‌ ದೇವರಾಗಿ ನಮ್ಮ ಕಣ್ಣಿಗೆ ಕಾಣಿಸುತ್ತಿದ್ದಾರೆ‌. ಎರಡನೇ ಅಲೆ ಬೇಗ ಸ್ಪ್ರೇಡ್ ಆಗ್ತಿರುವ ಕಾರಣ ನಮ್ಮ ಕಂಟ್ರೋಲ್ಗೆ ಸಿಗ್ತಿಲ್ಲ. ನಾವೆಲ್ಲರೂ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ. ನಮ್ಮ ರಾಜ್ಯ, ದೇಶ ನಮ್ಮ, ಜಿಲೆಯನ್ನ ಕೊರೊನಾದಿಂದ ಕಾಪಾಡಬೇಕಿದೆ. ಈಗ ಅನಿವಾರ್ಯ ಪರಿಸ್ಥಿತಿ ಇದೆ ಕರ್ಪ್ಯೂ ಜಾರಿ ಮಾಡದಿದ್ರೇ ಕಷ್ಟ ಆಗುತ್ತೆ.

ಜನತಾ ಕರ್ಪ್ಯೂ ಮಾದರಿಯಲ್ಲಿ ಮಾಡಿದ್ರೇ ನಮ್ಮ ಜನರಿಗೆ ತಿಳುವಳಿಕೆ ಬರ್ತಿಲ್ಲ. ಒಂದು ವಾರ ಹತ್ತು ದಿನ ಲಾಕ್ ಡೌನ್ ಮಾಡಿದ್ರೇ ಒಳ್ಳೆಯದು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ನಾನು ನಿರ್ಲಕ್ಷ್ಯ ಮಾಡಿದಾಗ ಕೊವಿಡ್ ಬಗ್ಗೆ ಇಷ್ಟೊಂದು ತೀವ್ರತೆ ಇದೆ ಅಂತಾ ಗೊತ್ತಿರಲಿಲ್ಲ. ಖಂಡಿತವಾಗಿ ಇದು ಬಹಳ ಕೆಟ್ಟ ರೋಗ ಅನುಭವಿಸಿದವರಿಗೆ ಗೊತ್ತು. ನನ್ನ ವೈರಿಗಳಿಗೂ ಭಗವಂತ ಕೊಡಬೇಡಾ ಅಂತಾ ಕೇಳಿಕೊಳ್ಳುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಆಯತಪ್ಪಿ ಗುಂಡಿಗೆ ಬಿದ್ದ ಆಹಾರ ಅರಸಿ ಹೋದ ಕರು; ಮಾನವೀಯತೆ ಮೆರೆದ ತಾಯಿ ಹಸುವಿನ ರೋಧನೆ ಕಂಡ ಚಿತ್ರದುರ್ಗ ಜನ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್