Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವ ಗ್ರಾಮಕ್ಕೆ ತೆರಳಿ ಸ್ಯಾನಿಟೈಸರ್ ಸಿಂಪಡಿಸಿದ ರೇಣುಕಾಚಾರ್ಯ

ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಭೇಟಿ ನೀಡಲು ಬಂದ ಶಾಸಕ ಎಂ.ಪಿ.ರೇಣುಕಾಚಾರ್ಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ನಂತರ ತಾವೇ ಸ್ವತಃ ಸ್ಯಾನಿಟೈಸ್ ಸಿಂಪಡಣೆಗೆ ಮುಂದಾಗಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವ ಗ್ರಾಮಕ್ಕೆ ತೆರಳಿ ಸ್ಯಾನಿಟೈಸರ್ ಸಿಂಪಡಿಸಿದ ರೇಣುಕಾಚಾರ್ಯ
ರಸ್ತೆಗಳಲ್ಲಿ ನಡೆದುಕೊಂಡೇ ತೆರಳಿ ಸ್ಯಾನಿಟೈಸ್ ಸಿಂಪಡಣೆ
Follow us
Skanda
|

Updated on: May 20, 2021 | 10:13 AM

ದಾವಣಗೆರೆ: ಕೊರೊನಾ ಸಂದರ್ಭದಲ್ಲಿ ಹಗಲಿರುಳೆನ್ನದೆ ಜನರ ಸಹಾಯಕ್ಕೆ ಧಾವಿಸುವ ಮೂಲಕ ಭಾರೀ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿರುವ ರೇಣುಕಾಚಾರ್ಯ, ಇದೀಗ ಕೊವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಿರುವ ಗ್ರಾಮವೊಂದಕ್ಕೆ ತೆರಳಿ ಸ್ಯಾಮಿಟೈಸರ್ ಸಿಂಪಡಿಸುವ ಮೂಲಕ ಮತ್ತೆ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಕಾರಣ ಅಲ್ಲಿಗೆ ತೆರಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ, ಇಡೀ ಗ್ರಾಮವನ್ನು ಸ್ಯಾನಿಟೈಸ್ ಮಾಡಿದ್ದು ಗ್ರಾಮಸ್ಥರ ಮೆಚ್ಚುಗೆಗೆ ಕಾರಣವಾಗಿದೆ.

ಸುರಹೊನ್ನೆ ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದ್ದು, ಇಡೀ ಗ್ರಾಮವೇ ಹಾಟ್​ಸ್ಪಾಟ್​ ಆದಂತಾಗಿದೆ. 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ನಾಲ್ವರು ಸೋಂಕಿತರು ಸಾವಿಗೀಡಾಗಿದ್ದಾರೆ. ಯಾವುದೇ ಟೆಸ್ಟ ಮಾಡಿಸಿಕೊಳ್ಳದೇ ಇದ್ದ ಹತ್ತಕ್ಕೂ ಹೆಚ್ಚು ಜನರೂ ಕೊನೆಯುಸಿರೆಳೆದಿದ್ದಾರೆ. ಇದು ಸುತ್ತಮುತ್ತಲಿನ ಗ್ರಾಮಸ್ಥರಿಗೂ ಭಯ ಮೂಡಿಸಿದೆ. ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಭೇಟಿ ನೀಡಲು ಬಂದ ಶಾಸಕ ಎಂ.ಪಿ.ರೇಣುಕಾಚಾರ್ಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ನಂತರ ತಾವೇ ಸ್ವತಃ ಸ್ಯಾನಿಟೈಸ್ ಸಿಂಪಡಣೆಗೆ ಮುಂದಾಗಿದ್ದಾರೆ.

MP RENUKACHARYA

ಗ್ರಾಮವಿಡೀ ಸುತ್ತಾಡಿ ಸ್ಯಾನಿಟೈಸರ್ ಸಿಂಪಡಿಸಿದ ಶಾಸಕ ರೇಣುಕಾಚಾರ್ಯ

ಸದ್ಯ ಪಾಸಿಟಿವ್ ವರದಿ ಬಂದವರನ್ನು ನ್ಯಾಮತಿ ತಾಲೂಕಿನ ಮಾದನಬಾವಿ ಕೊವಿಡ್ ಕೇರ್ ಸೆಂಟರ್​ಗೆ ಕಳುಹಿಸಲಾಗುತ್ತಿದೆ. ಪ್ರಸ್ತುತ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿರುವ ಕಾರಣ, ಗ್ರಾಮಸ್ಥರೆಲ್ಲರಿಗೂ ಮೆಡಿಕಲ್ ಕಿಟ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಮತ್ತು ಕೊವಿಡ್ ಗುಣ ಲಕ್ಷಣ ಇರುವ ಪ್ರತಿಯೊಬ್ಬರಿಗೂ ಪರೀಕ್ಷೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ

ಇಂದಿನಿಂದ ದಾವಣಗೆರೆ ಜಿಲ್ಲೆಯಲ್ಲಿ ಮೆಡಿಕಲ್ ಕಿಟ್ ವಿತರಣೆ ಇಂದಿನಿಂದ (ಮೇ 20) ದಾವಣಗೆರೆ ಜಿಲ್ಲೆಯ 194 ಗ್ರಾಪಂ‌ಗಳ ವ್ಯಾಪ್ತಿಯಲ್ಲಿ ಮೆಡಿಕಲ್ ಕಿಟ್ ವಿತರಣೆ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಸೋಂಕಿನ ಗುಣಲಕ್ಷಣ ಇರುವ ಪ್ರತಿಯೊಬ್ಬರಿಗೂ ಕೊರೊನಾ ಟೆಸ್ಟ್ ನಡೆಸಲು ವೈದ್ಯರು, ನರ್ಸ್​ ಹಾಗೂ ಆಶಾ ಕಾರ್ಯಕರ್ತೆಯರು ಇರುವ 194 ತಂಡಗಳನ್ನು ರಚಿಸಿರುವ ಜಿಲ್ಲಾಡಳಿತ ಸೋಂಕು ತಡೆಗೆ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಈಗ ದಾವಣಗೆರೆ ಜಿಲ್ಲೆಯ ಬರುತ್ತಿರುವ ಪಾಸಿಟಿವ್ ಪ್ರಕರಣಗಳಲ್ಲಿ ಶೇಕಡಾ 60ರಷ್ಟು ಗ್ರಾಮೀಣ ಪ್ರದೇಶದ ಪ್ರಕರಣವಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಜಿಲ್ಲಾಡಳಿತ ಮುಂದಾಗಿದೆ.

MP RENUKACHARYA

ಸ್ಯಾನಿಟೈಸರ್​ ಸಿಂಪಡಿಸಿದ ರೇಣುಕಾಚಾರ್ಯ

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾದವರಿಗೆ ಸಿಹಿ ಹಂಚಿ, ಪುಷ್ಪವೃಷ್ಟಿ ಮಾಡಿದ ಶಾಸಕ ರೇಣುಕಾಚಾರ್ಯ 

ಮತ್ತೆ ಸಮಯಪ್ರಜ್ಞೆ ಮೆರೆದ ರೇಣುಕಾಚಾರ್ಯ; ರಾತ್ರೋರಾತ್ರಿ 25 ಆಕ್ಸಿಜನ್ ಸಿಲಿಂಡರ್​ ತಂದುಕೊಟ್ಟು 45 ಜನರನ್ನು ಉಳಿಸಿದ ಶಾಸಕ

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ