AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವ ಗ್ರಾಮಕ್ಕೆ ತೆರಳಿ ಸ್ಯಾನಿಟೈಸರ್ ಸಿಂಪಡಿಸಿದ ರೇಣುಕಾಚಾರ್ಯ

ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಭೇಟಿ ನೀಡಲು ಬಂದ ಶಾಸಕ ಎಂ.ಪಿ.ರೇಣುಕಾಚಾರ್ಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ನಂತರ ತಾವೇ ಸ್ವತಃ ಸ್ಯಾನಿಟೈಸ್ ಸಿಂಪಡಣೆಗೆ ಮುಂದಾಗಿದ್ದಾರೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವ ಗ್ರಾಮಕ್ಕೆ ತೆರಳಿ ಸ್ಯಾನಿಟೈಸರ್ ಸಿಂಪಡಿಸಿದ ರೇಣುಕಾಚಾರ್ಯ
ರಸ್ತೆಗಳಲ್ಲಿ ನಡೆದುಕೊಂಡೇ ತೆರಳಿ ಸ್ಯಾನಿಟೈಸ್ ಸಿಂಪಡಣೆ
Skanda
|

Updated on: May 20, 2021 | 10:13 AM

Share

ದಾವಣಗೆರೆ: ಕೊರೊನಾ ಸಂದರ್ಭದಲ್ಲಿ ಹಗಲಿರುಳೆನ್ನದೆ ಜನರ ಸಹಾಯಕ್ಕೆ ಧಾವಿಸುವ ಮೂಲಕ ಭಾರೀ ಮೆಚ್ಚುಗೆ ಗಿಟ್ಟಿಸಿಕೊಳ್ಳುತ್ತಿರುವ ರೇಣುಕಾಚಾರ್ಯ, ಇದೀಗ ಕೊವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚಿರುವ ಗ್ರಾಮವೊಂದಕ್ಕೆ ತೆರಳಿ ಸ್ಯಾಮಿಟೈಸರ್ ಸಿಂಪಡಿಸುವ ಮೂಲಕ ಮತ್ತೆ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಕಾರಣ ಅಲ್ಲಿಗೆ ತೆರಳಿದ ಶಾಸಕ ಎಂ.ಪಿ.ರೇಣುಕಾಚಾರ್ಯ, ಇಡೀ ಗ್ರಾಮವನ್ನು ಸ್ಯಾನಿಟೈಸ್ ಮಾಡಿದ್ದು ಗ್ರಾಮಸ್ಥರ ಮೆಚ್ಚುಗೆಗೆ ಕಾರಣವಾಗಿದೆ.

ಸುರಹೊನ್ನೆ ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದ್ದು, ಇಡೀ ಗ್ರಾಮವೇ ಹಾಟ್​ಸ್ಪಾಟ್​ ಆದಂತಾಗಿದೆ. 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ನಾಲ್ವರು ಸೋಂಕಿತರು ಸಾವಿಗೀಡಾಗಿದ್ದಾರೆ. ಯಾವುದೇ ಟೆಸ್ಟ ಮಾಡಿಸಿಕೊಳ್ಳದೇ ಇದ್ದ ಹತ್ತಕ್ಕೂ ಹೆಚ್ಚು ಜನರೂ ಕೊನೆಯುಸಿರೆಳೆದಿದ್ದಾರೆ. ಇದು ಸುತ್ತಮುತ್ತಲಿನ ಗ್ರಾಮಸ್ಥರಿಗೂ ಭಯ ಮೂಡಿಸಿದೆ. ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಭೇಟಿ ನೀಡಲು ಬಂದ ಶಾಸಕ ಎಂ.ಪಿ.ರೇಣುಕಾಚಾರ್ಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿ ನಂತರ ತಾವೇ ಸ್ವತಃ ಸ್ಯಾನಿಟೈಸ್ ಸಿಂಪಡಣೆಗೆ ಮುಂದಾಗಿದ್ದಾರೆ.

MP RENUKACHARYA

ಗ್ರಾಮವಿಡೀ ಸುತ್ತಾಡಿ ಸ್ಯಾನಿಟೈಸರ್ ಸಿಂಪಡಿಸಿದ ಶಾಸಕ ರೇಣುಕಾಚಾರ್ಯ

ಸದ್ಯ ಪಾಸಿಟಿವ್ ವರದಿ ಬಂದವರನ್ನು ನ್ಯಾಮತಿ ತಾಲೂಕಿನ ಮಾದನಬಾವಿ ಕೊವಿಡ್ ಕೇರ್ ಸೆಂಟರ್​ಗೆ ಕಳುಹಿಸಲಾಗುತ್ತಿದೆ. ಪ್ರಸ್ತುತ ಗ್ರಾಮದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿರುವ ಕಾರಣ, ಗ್ರಾಮಸ್ಥರೆಲ್ಲರಿಗೂ ಮೆಡಿಕಲ್ ಕಿಟ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಮತ್ತು ಕೊವಿಡ್ ಗುಣ ಲಕ್ಷಣ ಇರುವ ಪ್ರತಿಯೊಬ್ಬರಿಗೂ ಪರೀಕ್ಷೆ ನಡೆಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ

ಇಂದಿನಿಂದ ದಾವಣಗೆರೆ ಜಿಲ್ಲೆಯಲ್ಲಿ ಮೆಡಿಕಲ್ ಕಿಟ್ ವಿತರಣೆ ಇಂದಿನಿಂದ (ಮೇ 20) ದಾವಣಗೆರೆ ಜಿಲ್ಲೆಯ 194 ಗ್ರಾಪಂ‌ಗಳ ವ್ಯಾಪ್ತಿಯಲ್ಲಿ ಮೆಡಿಕಲ್ ಕಿಟ್ ವಿತರಣೆ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಸೋಂಕಿನ ಗುಣಲಕ್ಷಣ ಇರುವ ಪ್ರತಿಯೊಬ್ಬರಿಗೂ ಕೊರೊನಾ ಟೆಸ್ಟ್ ನಡೆಸಲು ವೈದ್ಯರು, ನರ್ಸ್​ ಹಾಗೂ ಆಶಾ ಕಾರ್ಯಕರ್ತೆಯರು ಇರುವ 194 ತಂಡಗಳನ್ನು ರಚಿಸಿರುವ ಜಿಲ್ಲಾಡಳಿತ ಸೋಂಕು ತಡೆಗೆ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಈಗ ದಾವಣಗೆರೆ ಜಿಲ್ಲೆಯ ಬರುತ್ತಿರುವ ಪಾಸಿಟಿವ್ ಪ್ರಕರಣಗಳಲ್ಲಿ ಶೇಕಡಾ 60ರಷ್ಟು ಗ್ರಾಮೀಣ ಪ್ರದೇಶದ ಪ್ರಕರಣವಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಜಿಲ್ಲಾಡಳಿತ ಮುಂದಾಗಿದೆ.

MP RENUKACHARYA

ಸ್ಯಾನಿಟೈಸರ್​ ಸಿಂಪಡಿಸಿದ ರೇಣುಕಾಚಾರ್ಯ

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾದವರಿಗೆ ಸಿಹಿ ಹಂಚಿ, ಪುಷ್ಪವೃಷ್ಟಿ ಮಾಡಿದ ಶಾಸಕ ರೇಣುಕಾಚಾರ್ಯ 

ಮತ್ತೆ ಸಮಯಪ್ರಜ್ಞೆ ಮೆರೆದ ರೇಣುಕಾಚಾರ್ಯ; ರಾತ್ರೋರಾತ್ರಿ 25 ಆಕ್ಸಿಜನ್ ಸಿಲಿಂಡರ್​ ತಂದುಕೊಟ್ಟು 45 ಜನರನ್ನು ಉಳಿಸಿದ ಶಾಸಕ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!