AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು ಇಲ್ಲ ಅನ್ನೋ ಜಾತಿಯಲ್ಲಿ ನಾನು ಹುಟ್ಟಿಲ್ಲ..ದೈವ ನಿರ್ಣಯಕ್ಕೆ ತಲೆಬಾಗುತ್ತೇನೆ ಎಂದ ಮುನಿರತ್ನ

ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲಿ 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಪಕ್ಷದಲ್ಲಿ ಅವರನ್ನು ವಲಸಿಗ ಎಂದೇ ಪರಿಗಣಿಸಿದ್ದಾರೆ. ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ಸಿನಲ್ಲಿ ಒಪ್ಪಿಕೊಳ್ಳುತ್ತಿಲ್ಲ ಎಂದು ಮುನಿರತ್ನ ಟಾಂಗ್​ ನೀಡಿದ್ದಾರೆ.

ದೇವರು ಇಲ್ಲ ಅನ್ನೋ ಜಾತಿಯಲ್ಲಿ ನಾನು ಹುಟ್ಟಿಲ್ಲ..ದೈವ ನಿರ್ಣಯಕ್ಕೆ ತಲೆಬಾಗುತ್ತೇನೆ ಎಂದ ಮುನಿರತ್ನ
ಮುನಿರತ್ನ, ಸಿದ್ದರಾಮಯ್ಯ
Skanda
| Edited By: |

Updated on:Jan 14, 2021 | 3:38 PM

Share

ಬೆಂಗಳೂರು: ಮಂತ್ರಿ ಸ್ಥಾನ ಸಿಗಬೇಕು ಎಂದು ನನ್ನ ಹಣೆಯಲ್ಲಿ ಬರೆದಿದ್ದರೆ ಮಂತ್ರಿ ಆಗುತ್ತೇನೆ. ಒಂದು ವೇಳೆ ಅದು ಕೈಗೂಡಿಲ್ಲ ಎಂದರೆ ದೈವ ನಿರ್ಣಯ ಎಂದು ತಲೆಬಾಗುತ್ತೇನೆ. ನನಗೆ ದೇವರ ಮೇಲೆ ಅಪಾರ ನಂಬಿಕೆ ಇದೆ. ದೇವರು ಇಲ್ಲ ಅನ್ನೋ ಜಾತಿಯಲ್ಲಿ ನಾನು ಹುಟ್ಟಿಲ್ಲ ಎಂದು ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದಾರೆ.

ನನಗೆ ಮಂತ್ರಿ ಸ್ಥಾನ ಸಿಗಬೇಕೋ, ಬೇಡವೋ ಎಂಬುದು ದೈವೇಚ್ಛೆ. ಆ ನಿರ್ಣಯವನ್ನು ಗೌರವಿಸಿ ತಲೆಬಾಗುತ್ತೇನೆ. ಮಂತ್ರಿ ಸ್ಥಾನ ಸಿಗದಿದ್ದರೂ ಜನಸೇವೆ ಮಾಡ್ತೀನಿ. ಇನ್ನು 2 ಜನ್ಮ ಎತ್ತಿ ಬಂದರೂ ಮತದಾರರ ಋಣ ತೀರಿಸೋಕೆ ಅಸಾಧ್ಯ. ಆದ್ದರಿಂದ ಅವರ ಸೇವೆಯಲ್ಲಿ ನಿರತನಾಗುತ್ತೇನೆ. ನನಗೆ ಏನೇ ಕಷ್ಟ ಎದುರಾದರೂ ದೇವರ ಕೈ ಮುಗಿಯುವುದು ಅಭ್ಯಾಸ. ದೈವ ಕೃಪೆ ಇದ್ದರೆ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ವಲಸಿಗ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಕಾಂಗ್ರೆಸ್ಸಿನಲ್ಲಿ 5 ವರ್ಷ ಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಪಕ್ಷದಲ್ಲಿ ಅವರನ್ನು ವಲಸಿಗ ಎಂದೇ ಪರಿಗಣಿಸಿದ್ದಾರೆ. ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ಸಿನಲ್ಲಿ ಒಪ್ಪಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ಅರುಣ್​ಸಿಂಗ್​ರಿಂದ ಮುನಿರತ್ನಗೆ ಸಿಕ್ಕಿದೆ ಭರವಸೆ; ಇನ್ನು ಎರಡು ತಿಂಗಳಷ್ಟೇ !

Published On - 3:36 pm, Thu, 14 January 21

ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!