AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ರಾಜಕುಮಾರ್ ಪ್ರತಿಮೆ ವಿವಾದ: ಕ್ಷಮೆ ಕೇಳಿದ ಶಾಸಕ ಎನ್.ಎ. ಹ್ಯಾರಿಸ್

ರಾಜ್​ಕುಮಾರ್​ ಪ್ರತಿಮೆ ಬರುವುದಕ್ಕೆ ನಾನು ಕಾರಣನೇ. ಅಣ್ಣಾವ್ರ ಬಗ್ಗೆ ನಾನು ಸಾಕಷ್ಟು ಗೌರವ ಹೊಂದಿದ್ದೇನೆ. ನನ್ನ ಮಾತಿನಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಡಾ. ರಾಜಕುಮಾರ್ ಪ್ರತಿಮೆ ವಿವಾದ: ಕ್ಷಮೆ ಕೇಳಿದ ಶಾಸಕ ಎನ್.ಎ. ಹ್ಯಾರಿಸ್
ಹ್ಯಾರಿಸ್-ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on:Feb 17, 2021 | 5:53 PM

Share

ಬೆಂಗಳೂರು: ವರನಟ ಡಾ.ರಾಜ್​ಕುಮಾರ್​ ಅವರ ಪ್ರತಿಮೆ ವಿಚಾರದಲ್ಲಿ ಮಾತನಾಡಿದ್ದ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಈಗ ಯೂಟರ್ನ್​ ತೆಗೆದುಕೊಂಡಿದ್ದಾರೆ. ನಾನು ಹಾಗೆ ಮಾತನಾಡೇ ಇಲ್ಲ. ಯಾರೋ ವಿಡಿಯೋವನ್ನು ಎಡಿಟ್​ ಮಾಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೂಡ ಕೇಳುತ್ತೇನೆ ಎಂದಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ಹ್ಯಾರಿಸ್​, ರಾಜಕುಮಾರ್ ಬಗ್ಗೆ ನನಗೆ ಗೌರವ, ಅಭಿಮಾನ ಇದೆ. ಆದರೆ, ಯಾರೋ ಉದ್ದೇಶ ಪೂರ್ವಕವಾಗಿ ವಿಡಿಯೋವನ್ನು ಕಟ್ ಕಾಪಿ ಪೇಸ್ಟ್ ಮಾಡಿ ಅರ್ಥ ಬದಲಿಸಿದ್ದಾರೆ. ದೊಮ್ಮಲೂರು ಭಾಗದಲ್ಲಿ ಪ್ರತಿಮೆ ಕೆಲಸ ನಡೆಯುತಿತ್ತು. ಅದರ ವೀಕ್ಷಣೆಗೆ ಹೋಗಿದ್ದೆ. ಡಾ.ರಾಜಕುಮಾರ್ ಜತೆ ಡಾ. ಅಂಬೇಡ್ಕರ್ ಪ್ರತಿಮೆ ಕೂಡ ಇದೆ. ನಾವು ಅಲ್ಲಿ ಸ್ಟ್ಯಾಚ್ಯೂ ಕಾರ್ಯ ವೀಕ್ಷಣೆ ಮಾತ್ರ ಮಾಡಿ ಬಂದಿದ್ದೆವು ಎಂದಿದ್ದಾರೆ.

ರಾಜಕುಮಾರ್ ಅವರನ್ನು ಜೀವಂತವಾಗಿ ನೋಡಿ ಪ್ರೀತಿ ಹಂಚಿಕೊಳ್ಳುತ್ತಿದ್ದೆವು. ಅಣ್ಣಾವ್ರು ಇಡೀ ಮಾನವ ಕುಲಕ್ಕೆ ಸಂದೇಶ ಕೊಟ್ಟಿದ್ದಾರೆ. ಇವರ ಬಗ್ಗೆ ಯಾರಾದರೂ ಮಾತನಾಡಲು ಆಗುತ್ತದೆಯೇ? ಯಾರಾದರೂ ಇಂಟರ್ ನ್ಯಾಷನಲ್ ಅಣ್ಣಾವ್ರು ಅಂತ ಇದ್ದರೆ ಅದು ರಾಜಕುಮಾರ್ ಅವರೇ. ನಾನು ಅವಕಾಶ ಸಿಕ್ಕಾಗೆಲ್ಲ ವೇದಿಕೆ ಮೇಲೆ ಹುಟ್ಡಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಎನ್ನುವ ಹಾಡು ಹೇಳುತ್ತೇನೆ ಎಂದು ರಾಜ್​ಕುಮಾರ್ ಬಗ್ಗೆ ತಮಗೆ ಇರುವ ಗೌರವವನ್ನು ವ್ಯಕ್ತಪಡಿಸಿದರು.

ರಾಜ್​ಕುಮಾರ್​ ಪ್ರತಿಮೆ ಬರುವುದಕ್ಕೆ ನಾನೂ ಸಹ ಕಾರಣವೇ. ಅಣ್ಣಾವ್ರ ಬಗ್ಗೆ ನಾನು ಸಾಕಷ್ಟು ಗೌರವ ಹೊಂದಿದ್ದೇನೆ. ನನ್ನ ಮಾತಿನಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್​ ಅಭಿಮಾನಿಗಳು ತಲೆ ಮಾಂಸ, ಕುರಿ ಕೇಳುತ್ತಾರೆ ಎಂಬ ವಿವಾದ ತಣ್ಣಗಾಗಿಸಲು ಜಗ್ಗೇಶ್ ಟ್ವೀಟ್

ಹ್ಯಾರಿಸ್​ ಹೇಳಿದ್ದೇನು? ಹ್ಯಾರಿಸ್ ರಾಜ್​​ಕುಮಾರ್​ ಪ್ರತಿಮೆ ನೋಡಲು ಹೋಗಿದ್ದರು. ಈ ವೇಳೆ ಮಾತನಾಡಿದ್ದ ಹ್ಯಾರಿಸ್, ಸ್ಟ್ಯಾಚ್ಯು ಇಡುವುದೇ ದೊಡ್ಡ ಕತೆ. ಅದರಲ್ಲಿ ಆಫೀಸ್ ಬೇರೆ ಮಾಡಿಕೊಡುವುದಕ್ಕೆ ಆಗುತ್ತಾ? ಈ ಪ್ರತಿಮೆಗೆ ಕವರ್​ ಏನು ಬೇಕಾಗುವುದಿಲ್ಲ. ಓಪನ್ ಆಗಿ ಇಡಿ. ಸ್ಟ್ಯಾಚ್ಯುಗೆಲ್ಲಾ ಕವರ್ ಯಾಕ್ ಬೇಕು? ಪ್ರೊಟೆಕ್ಷನ್ ಬೇಕಿದ್ದರೆ ಮನೆಯಲ್ಲೇ ಇಟ್ಟಿದ್ದರೆ ಆಗಿರುತ್ತಿತ್ತು. ರೋಡಲ್ಲಿ ಯಾಕೆ ಇಡುತ್ತಾರೆ? ಬುದ್ಧಿ ಇಲ್ಲ, ಏನ್ ಮಾಡೋದು? ಏನಾದರೂ ಹೇಳಿದರೆ ಅದನ್ನು ಬೇರೆ ರೀತಿಯಲ್ಲೇ ತೆಗೆದುಕೊಳ್ಳುತ್ತಾರೆ ಎಂದಿದ್ದರು.

Published On - 5:50 pm, Wed, 17 February 21

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ