AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ತಾಯಿಯನ್ನು ಕಳೆದುಕೊಂಡ ಶಾಸಕ ಪಿ. ರಾಜೀವ್, ಫೇಸ್​ಬುಕ್​ನಲ್ಲಿ ಮನ ಮಿಡಿಯುವ ಸಂದೇಶ

ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ.

ಕೊರೊನಾಗೆ ತಾಯಿಯನ್ನು ಕಳೆದುಕೊಂಡ ಶಾಸಕ ಪಿ. ರಾಜೀವ್, ಫೇಸ್​ಬುಕ್​ನಲ್ಲಿ ಮನ ಮಿಡಿಯುವ ಸಂದೇಶ
ಕುಡಚ್ಚಿ ಶಾಸಕ ಪಿ.ರಾಜೀವ್ ತನ್ನ ತಾಯಿ ಜೊತೆಗಿನ ಕೊನೆ ಕ್ಷಣ
ಆಯೇಷಾ ಬಾನು
|

Updated on: May 20, 2021 | 12:16 PM

Share

ಬೆಳಗಾವಿ: ಕೊರೊನಾ ಮಹಾಮಾರಿ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸದೆ ಜನರ ದೇಹ ಸೇರಿ ಹಿಂಸಿಸಿ ಬಲಿ ಪಡೆಯುತ್ತಿದೆ. ಇದೇ ಸೋಂಕಿಗೆ ಕುಡಚಿ ಬಿಜೆಪಿ ಶಾಸಕ ಪಿ. ರಾಜೀವ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ರಾಜೀವ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದು ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಸಾಂತ್ವನಕ್ಕೆ ಯಾರೂ ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಶಾಸಕ ಪಿ. ರಾಜೀವ್  ಫೇಸ್​ಬುಕ್ ಸಂದೇಶ ಹೀಗಿದೆ: ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕೊರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ.

ತಲೆಯ ಮೇಲೆ ಕೈಹೊತ್ತು ಕುಳಿತ ರಾಜೀವ ನಾನು, ನನ್ನ ಹೆಂಡತಿ, ಎರಡು ಮಕ್ಕಳು, ಇಬ್ಬರು ಆಪ್ತ ಸಹಾಯಕರು ಕರೊನಾದಿಂದ ಚೇತರಿಸಿಕೊಳ್ಳುವಷ್ಟರಲ್ಲಿ ತಾಯಿಯವರು ಸೋಂಕಿಗೆ ಒಳಗಾಗಿದ್ದರಿಂದ ಅವರ ಆರೈಕೆಯಲ್ಲಿ ನಾನೇ ತೊಡಗಿದ್ದರಿಂದ ಮತ್ತು ನನ್ನಕ್ಕ ಹಾಗೂ ಅಕ್ಕನ ಮಗ ಚಿಕಿತ್ಸೆಯನ್ನು ಮನೆಯಲ್ಲಿಯೇ ಪಡೆಯುತ್ತಿರುವುದರಿಂದ ಯಾರಿಗೂ ತಿಳಿಸದೆ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರವನ್ನು ನೆರವೇರಿಸಿರುತ್ತೇನೆ. ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಯಾರೂ ಸಹ ಸಾಂತ್ವನ ಹೇಳುವುದಕ್ಕಾಗಿ ಆಗಮಿಸ ಬಾರದೆಂದು ವಿನಂತಿಸುತ್ತೇನೆ.

ಆದಷ್ಟು ಬೇಗ ನನ್ನ ನನ್ನ ಸಾಮಾಜಿಕ ಕರ್ತವ್ಯಕ್ಕೆ ಹಾಜರಾಗುತ್ತೇನೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ಪಿ.ರಾಜೀವ್.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ