AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ತಾಯಿಯನ್ನು ಕಳೆದುಕೊಂಡ ಶಾಸಕ ಪಿ. ರಾಜೀವ್, ಫೇಸ್​ಬುಕ್​ನಲ್ಲಿ ಮನ ಮಿಡಿಯುವ ಸಂದೇಶ

ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ.

ಕೊರೊನಾಗೆ ತಾಯಿಯನ್ನು ಕಳೆದುಕೊಂಡ ಶಾಸಕ ಪಿ. ರಾಜೀವ್, ಫೇಸ್​ಬುಕ್​ನಲ್ಲಿ ಮನ ಮಿಡಿಯುವ ಸಂದೇಶ
ಕುಡಚ್ಚಿ ಶಾಸಕ ಪಿ.ರಾಜೀವ್ ತನ್ನ ತಾಯಿ ಜೊತೆಗಿನ ಕೊನೆ ಕ್ಷಣ
ಆಯೇಷಾ ಬಾನು
|

Updated on: May 20, 2021 | 12:16 PM

Share

ಬೆಳಗಾವಿ: ಕೊರೊನಾ ಮಹಾಮಾರಿ ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸದೆ ಜನರ ದೇಹ ಸೇರಿ ಹಿಂಸಿಸಿ ಬಲಿ ಪಡೆಯುತ್ತಿದೆ. ಇದೇ ಸೋಂಕಿಗೆ ಕುಡಚಿ ಬಿಜೆಪಿ ಶಾಸಕ ಪಿ. ರಾಜೀವ್ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ರಾಜೀವ್ ತಮ್ಮ ಫೇಸ್​ಬುಕ್ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದು ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಸಾಂತ್ವನಕ್ಕೆ ಯಾರೂ ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ಶಾಸಕ ಪಿ. ರಾಜೀವ್  ಫೇಸ್​ಬುಕ್ ಸಂದೇಶ ಹೀಗಿದೆ: ಜನ್ಮನೀಡಿ, ಎದೆ ಹಾಲುಣಿಸಿ, ಕೈತುತ್ತು ನೀಡಿ, ಸೆರಗಿನಿಂದ ಮೈ ಒರೆಸಿ, ಅಕ್ಕರೆಯಿಂದ ಬದುಕಿನ ಮೌಲ್ಯಗಳನ್ನು ತಿಳಿಸಿ ಬೆಳೆಸಿದ ನನ್ನವ್ವ ಕೊರೊನಾಗೆ ಬಲಿಯಾಗಿ ಇಂದು ನನ್ನನ್ನು ಅನಾಥವಾಗಿಸಿದಳು. ಆಕೆಯ ಅಗಲಿಕೆ ನನ್ನ ಹೃದಯವನ್ನು ಅಲುಗಾಡಿಸಿದೆ.

ತಲೆಯ ಮೇಲೆ ಕೈಹೊತ್ತು ಕುಳಿತ ರಾಜೀವ ನಾನು, ನನ್ನ ಹೆಂಡತಿ, ಎರಡು ಮಕ್ಕಳು, ಇಬ್ಬರು ಆಪ್ತ ಸಹಾಯಕರು ಕರೊನಾದಿಂದ ಚೇತರಿಸಿಕೊಳ್ಳುವಷ್ಟರಲ್ಲಿ ತಾಯಿಯವರು ಸೋಂಕಿಗೆ ಒಳಗಾಗಿದ್ದರಿಂದ ಅವರ ಆರೈಕೆಯಲ್ಲಿ ನಾನೇ ತೊಡಗಿದ್ದರಿಂದ ಮತ್ತು ನನ್ನಕ್ಕ ಹಾಗೂ ಅಕ್ಕನ ಮಗ ಚಿಕಿತ್ಸೆಯನ್ನು ಮನೆಯಲ್ಲಿಯೇ ಪಡೆಯುತ್ತಿರುವುದರಿಂದ ಯಾರಿಗೂ ತಿಳಿಸದೆ ಮಾರ್ಗಸೂಚಿಯನ್ವಯ ಅಂತ್ಯಸಂಸ್ಕಾರವನ್ನು ನೆರವೇರಿಸಿರುತ್ತೇನೆ. ನನ್ನ ಮನೆಯ ವಾತಾವರಣ ಸದ್ಯಕ್ಕೆ ಹೆಚ್ಚು ಸೋಂಕುಪೀಡಿತವಾಗಿರುವುದರಿಂದ ಯಾರೂ ಸಹ ಸಾಂತ್ವನ ಹೇಳುವುದಕ್ಕಾಗಿ ಆಗಮಿಸ ಬಾರದೆಂದು ವಿನಂತಿಸುತ್ತೇನೆ.

ಆದಷ್ಟು ಬೇಗ ನನ್ನ ನನ್ನ ಸಾಮಾಜಿಕ ಕರ್ತವ್ಯಕ್ಕೆ ಹಾಜರಾಗುತ್ತೇನೆಂದು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ಪಿ.ರಾಜೀವ್.

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?