AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯ; ಅಂತಿಮ ತನಿಖಾ ವರದಿ ಸಿದ್ಧ

Ramesh Jarkiholi CD Case: ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.

Big News: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯ; ಅಂತಿಮ ತನಿಖಾ ವರದಿ ಸಿದ್ಧ
ರಮೇಶ್​ ಜಾರಕಿಹೊಳಿ
TV9 Web
| Edited By: |

Updated on:Jul 05, 2021 | 4:29 PM

Share

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ  ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್​ಗೆ ಎಜಿ ಪ್ರಭುಲಿಂಗ್ ನಾವದಗಿ ತಿಳಿಸಿದ್ದಾರೆ.  ಈ ಪ್ರಕರಣಕ್ಕೆ ಸಂಬಂಧಿಸಿದ ಎಸ್ಐಟಿಯಿಂದ ಹೈಕೋರ್ಟ್​ಗೆ ಮೆಮೋ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಜುಲೈ 14ರವರೆಗೆ ಅಂತಿಮ ವರದಿ ಸಲ್ಲಿಸದಂತೆ ಎಸ್ಐಟಿ ಪೊಲೀಸರಿಗೆ ಸೂಚನೆ ನೀಡಿದೆ.

ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆ ವೇಳೆ ಸಚಿವರಾದ ಮಾಧುಸ್ವಾಮಿ ಮತ್ತು ಸುಧಾಕರ್ ಅವರುಗಳ ಹೇಳಿಕೆ ಪ್ರಸ್ತಾಪಗೊಂಡಿದೆ. ಇದು ಲೈಂಗಿಕ ದೌರ್ಜನ್ಯ ಕೇಸ್ ಅಲ್ಲವೆಂದು ಈ ಸಚಿವರರುಗಳು ಈಗಾಗಲೇ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳು ತನಿಖೆಯಲ್ಲಿ ಹಸ್ತಕ್ಷೇಪದ ಯತ್ನವೆಂದು ಪಿಐಎಲ್ ಅರ್ಜಿದಾರರ ವಕೀಲ ಜಿ.ಆರ್.ಮೋಹನ್ ಆರೋಪಿಸಿದ್ದಾರೆ. ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸುತ್ತಿದೆ. ತನಿಖೆ ಬಗ್ಗೆ ಉತ್ತರಿಸಲು ಸರ್ಕಾರ ಹೈಕೋರ್ಟ್ ಮುಂದಿದೆ ಎಂದ ಹೈಕೋರ್ಟ್ ಸಿಜೆ ಅಭಯ್ ಶ್ರೀನಿವಾಸ್ ಒಕಾ ವಿಚಾರಣೆಯನ್ನು ಜುಲೈ14ಕ್ಕೆ ಮುಂದೂಡಿದ್ದಾರೆ.

ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಸ್ವಪಕ್ಷೀಯರ ವಿರುದ್ಧವೇ ತಿರುಗಿಬಿದ್ದಿದ್ದರು. ಸಿಡಿ ಪ್ರಕರಣದಿಂದ ಹೊರಬರದಂತೆ ಚಕ್ರವ್ಯೂಹ ರಚಿಸಿದ್ದಾರೆ. ವಿಪಕ್ಷಗಳ ಜತೆಗೆ ಸ್ವಪಕ್ಷೀಯರೂ ಖೆಡ್ಡಾ ತೋಡಿದ್ದಾರೆ. ನನ್ನ ರಾಜಕೀಯ ಜೀವನ ಅಂತ್ಯಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಶಾಸಕ ರಮೇಶ್ ಜಾರಕಿಹೊಳಿ ದೇವೇಂದ್ರ ಫಡ್ನವಿಸ್​ಗೆ ದೂರು ಹೇಳಿದ್ದರು. ಸಿಡಿ ಪ್ರಕರಣ 15 ದಿನದಲ್ಲಿ ಮುಕ್ತಾಯ ಆಗುತ್ತೆಂದು ಹೇಳಿದ್ದರು. ನಾನು ಮತ್ತೆ ಸಚಿವನಾಗುತ್ತೇನೆ ಎಂದು ಭರವಸೆ ನೀಡಿದ್ದರು. ಸಿಡಿ ಪ್ರಕರಣದ ತನಿಖೆಯನ್ನು ಬೇಗ ಮುಗಿಸದೆ ವಿಳಂಬ ಮಾಡುತ್ತಿದ್ದಾರೆ. ವಿಪಕ್ಷಗಳ ಜತೆ ನಮ್ಮವರು ಸೇರಿಕೊಂಡು ಸಂಚು ರೂಪಿಸುತ್ತಿದ್ದಾರೆ ಎಂದು ದೇವೇಂದ್ರ ಫಡ್ನವಿಸ್ ಭೇಟಿ ವೇಳೆ ರಮೇಶ್ ಜಾರಕಿಹೊಳಿ ದೂರಿದ್ದರು.

ಇದನ್ನೂ ಓದಿ: 

2nd PU Repeaters Exam 2021: ದ್ವಿತೀಯ ಪಿಯುಸಿ ರಿಪೀಟರ್ಸ್ ಪರೀಕ್ಷೆ ಇಲ್ಲದೇ ಪಾಸ್; ಹೈಕೋರ್ಟ್​ಗೆ ತಿಳಿಸಿದ ಸರ್ಕಾರ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ತನಿಖೆ ಬಹುತೇಕ ಮುಕ್ತಾಯ: ಬಿ ರಿಪೋರ್ಟ್ ಯಾರ ಪರವಾಗಿ?

(MLA Ramesh Jarkiholi CD case investigation is over says SIT to Karnataka High Court)

Published On - 4:16 pm, Mon, 5 July 21

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK