AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗಿಂತಲೂ 10 ಪಟ್ಟು ಪ್ರಬಲ ಹುಲಿಗಳು ನನ್ನ ಕುಟುಂಬದಲ್ಲಿದ್ದಾರೆ: ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನ

ರಮೇಶ್ ಜಾರಕಿಹೊಳಿಯನ್ನು ಮೂಲೆಗುಂಪು ಮಾಡಿದರೆ ಮುಗೀತು ಎಂದು ಅಂದುಕೊಂಡಿದ್ದರು. ಆದರೆ ಹಾಗೆ ಅಂದುಕೊಂಡಿದ್ದರೆ ಅದರ ನಮ್ಮಲ್ಲಿ ಹತ್ತು ಪಟ್ಟು ಹುಲಿಗಳಿದ್ದೇವೆ, ನಾವು ರೆಡಿ ಇದ್ದೇವೆ: ಶಾಸಕ ರಮೇಶ್ ಜಾರಕಿಹೊಳಿ

ನನಗಿಂತಲೂ 10 ಪಟ್ಟು ಪ್ರಬಲ ಹುಲಿಗಳು ನನ್ನ ಕುಟುಂಬದಲ್ಲಿದ್ದಾರೆ: ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನ
ರಮೇಶ್​ ಜಾರಕಿಹೊಳಿ
TV9 Web
| Edited By: |

Updated on:Jun 25, 2021 | 7:56 PM

Share

ಬೆಳಗಾವಿ: ನನಗಿಂತ 10 ಪಟ್ಟು ಹುಲಿಗಳು ನಮ್ಮ ಕುಟುಂಬದಲ್ಲಿದ್ದಾರೆ. ಶಾಸಕ ಸ್ಥಾನಕ್ಕೆ ನನ್ನ ಸಹೋದರರು ಇದ್ದಾರೆ. ಮಕ್ಕಳಿದ್ದಾರೆ. ಇನ್ನೂ ಬಹಳಷ್ಟು ಹುಲಿಗಳಿದ್ದಾರೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವ್ಯಾಖ್ಯಾನಿಸಿಕೊಂಡಿದ್ದಾರೆ. ನಾನು ಮುಂಬೈಗೆ ಹೋಗಿದ್ದು, ರಾಜೀನಾಮೆ ಕೊಡುವುದು ನಿಜ. ಆದರೆ ಯಾವಾಗ ರಾಜೀನಾಮೆ ಕೊಡುತ್ತೇನೆಂದು ಹೇಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ರಮೇಶ್ ಜಾರಕಿಹೊಳಿಯನ್ನು ಮೂಲೆಗುಂಪು ಮಾಡಿದರೆ ಮುಗೀತು ಎಂದು ಅಂದುಕೊಂಡಿದ್ದರು. ಆದರೆ ಹಾಗೆ ಅಂದುಕೊಂಡಿದ್ದರೆ ಅದರ ನಮ್ಮಲ್ಲಿ ಹತ್ತು ಪಟ್ಟು ಹುಲಿಗಳಿದ್ದೇವೆ, ನಾವು ರೆಡಿ ಇದ್ದೇವೆ. ಅಸಮಾಧಾನ ಕೆಲವೊಂದು ಬಹಿರಂಗಪಡಿಸಲು ಬರುವುದಿಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆ, ಕಾನೂನು ತೊಡಕುಗಳಿವೆ. ಕೆಲವು ದಿವಸ ಟೈಮ್ ಕೊಡಿ ಮಾತಾಡುತ್ತೇನೆ ಎಂದು ವಿವರಿಸಿದರು. ದೇವರು ನನಗೆ ಸರ್ಕಾರ ತೆಗೆದು, ಸರ್ಕಾರ ರಚಿಸುವ ಶಕ್ತಿ ನೀಡಿದ್ದಾನೆ. ನಾನು ಸಚಿವ ಸ್ಥಾನಕ್ಕಾಗಿ ರಾಜಕೀಯ ಮಾಡುವಷ್ಟು ಸಣ್ಣವನಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಇನ್ನು 8 ರಿಂದ 10 ದಿನ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ. ಅಲ್ಲಿಯವರೆಗೂ ನಾನು ಏನನ್ನೂ ಮಾತನಾಡುವುದಿಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಂದಾನುವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅನಿಸಿದಲ್ಲಿ ಈ ಬಗ್ಗೆ ಮುಂಬೈನಲ್ಲಿ ತೀರ್ಮಾನಿಸುತ್ತೇನೆ. ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡುತ್ತೇನೆ‌. ಆದರೆ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ? ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ದೇವರು ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿಯನ್ನೇ ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ಎಂದು ಪ್ರಶ್ನಿಸಿದ ಅವರು, ನನಗೆ ಇನ್ನೂ ಹೀಗೆ ಲಾಬಿ ಮಾಡುವ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನು ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರಾಘವೇಂದ್ರ ಕೇಂದ್ರ ಸಚಿವ, ವಿಜಯೇಂದ್ರ ಹಾನಗಲ್ ಕ್ಷೇತ್ರದಿಂದ ಸ್ಪರ್ಧೆ? ಯಡಿಯೂರಪ್ಪ ಕುಟುಂಬದಲ್ಲಿ ಹೀಗೊಂದು ಲೆಕ್ಕಾಚಾರ

Rekha Kadiresh: ರೇಖಾ ಕದಿರೇಶ್ ಹಾಡಹಗಲು ಹತ್ಯೆಯಾಗಿದ್ದು ಹೇಗೆ? ಸಂಚಲನ ಮೂಡಿಸಿದೆ ವಿಡಿಯೋ

(MLA Ramesh Jarkiholi say his family has 10 times more powerful tigers than him)

Published On - 7:23 pm, Fri, 25 June 21

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ