AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Jarkiholi: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಬಿಟ್ಟಿದ್ದೇನೆ; ಕಾಂಗ್ರೆಸ್​ಗೂ ವಾಪಸ್ಸಾಗಲ್ಲ: ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟನೆ

ಒಂದುವೇಳೆ ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡುತ್ತೇನೆ‌. ಆದರೆ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ? ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

Ramesh Jarkiholi: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಕೈಬಿಟ್ಟಿದ್ದೇನೆ; ಕಾಂಗ್ರೆಸ್​ಗೂ ವಾಪಸ್ಸಾಗಲ್ಲ: ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟನೆ
ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಟ್ಟ ಸುತ್ತೂರು ಶಾಖಾ ಮಠ: ಬೆಳಗಾವಿಯಿಂದ ಮೈಸೂರಿಗೆ ರಮೇಶ್ ಜಾರಕಿಹೊಳಿ ಪ್ರಯಾಣ
TV9 Web
| Updated By: guruganesh bhat|

Updated on:Jun 25, 2021 | 2:44 PM

Share

ಮೈಸೂರು: ರಾಜೀನಾಮೆ ನಿರ್ಧಾರದಿಂದ ಶಾಸಕ ರಮೇಶ್ ಜಾರಕಿಹೊಳಿ ಹಿಂದೆ ಸರಿದಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ ಎಂದು ಅವರು ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇನ್ನು 8 ರಿಂದ 10 ದಿನ ನನ್ನನ್ನು ನನ್ನ ಪಾಡಿಗೆ ಬಿಟ್ಟುಬಿಡಿ. ಅಲ್ಲಿಯವರೆಗೂ ನಾನು ಏನನ್ನೂ ಮಾತನಾಡುವುದಿಲ್ಲ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಒಂದಾನುವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅನಿಸಿದಲ್ಲಿ ಈ ಬಗ್ಗೆ ಮುಂಬೈನಲ್ಲಿ ತೀರ್ಮಾನಿಸುತ್ತೇನೆ. ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡುತ್ತೇನೆ‌. ಆದರೆ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ? ಎಂದು ಪ್ರಶ್ನಿಸಿರುವ ಅವರು, ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡುವುದಿಲ್ಲ ಎಂದು ಮನದಾಳವನ್ನು ಬಿಚ್ಚಿಟ್ಟಿದ್ದಾರೆ.

ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ದೇವರು ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿಯನ್ನೇ ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಬಿ ಮಾಡುತ್ತೇನಾ? ಎಂದು ಪ್ರಶ್ನಿಸಿದ ಅವರು, ನನಗೆ ಇನ್ನೂ ಹೀಗೆ ಲಾಬಿ ಮಾಡುವ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನು ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ನಮ್ಮ ನಾಯಕ; ಸಚಿವ ಸ್ಥಾನ ಸಿಗದಿದ್ರೆ ರಾಜಕೀಯ ನಿವೃತ್ತಿ ಕೈಗೊಳ್ತೀನಿ‌: ಆಪ್ತರ ಬಳಿ ರಮೇಶ್ ಜಾರಕಿಹೊಳಿ‌ ಅಳಲು

ರಾಜಕೀಯ ಶಕ್ತಿ ಕೇಂದ್ರವಾದ ಸುತ್ತೂರು ಮಠ: ಬೆಳಗಾವಿಯಿಂದ ಮೈಸೂರಿಗೆ ರಮೇಶ್ ಜಾರಕಿಹೊಳಿ ಪ್ರಯಾಣ

(MLA Ramesh Jarkiholi says he quite the decision to resign as a legislator and will not return to Congress)

Published On - 2:25 pm, Fri, 25 June 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ