Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯ, ಈಶ್ವರಪ್ಪ ಮಧ್ಯೆ ಮಾತಿನ ಸಮರ; ಹುಲಿವೇಷ ಎಂದವರು ಆತ್ಮಾವಲೋಕನ ಮಾಡಿಕೊಳ್ಳಲಿ: ರೇಣುಕಾಚಾರ್ಯ ತಿರುಗೇಟು

MP Renukacharya: ರಾಜ್ಯ ಬಿಜೆಪಿ ನಾಯಕರ ನಡುವಿನ ಮುನಿಸು ಹೆಚ್ಚಾಗುತ್ತಲೇ ಇದೆ. ಸಿಎಂ ರಾಜೀನಾಮೆ ವಿಚಾರವನ್ನೇ ಬೀದಿಗೆ ಎಳೆದು ತಂದು ರಂಪಾಟ ಮಾಡುತ್ತಿದ್ದಾರೆ. ಈ ನಡುವೆ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ ಯುದ್ದವೇ ನಡೆದಿದೆ.

ರೇಣುಕಾಚಾರ್ಯ, ಈಶ್ವರಪ್ಪ ಮಧ್ಯೆ ಮಾತಿನ ಸಮರ; ಹುಲಿವೇಷ ಎಂದವರು ಆತ್ಮಾವಲೋಕನ ಮಾಡಿಕೊಳ್ಳಲಿ: ರೇಣುಕಾಚಾರ್ಯ ತಿರುಗೇಟು
ಶಾಸಕ ಎಂ.ಪಿ.ರೇಣುಕಾಚಾರ್ಯ
Follow us
TV9 Web
| Updated By: Digi Tech Desk

Updated on:Jun 10, 2021 | 10:13 AM

ಬೆಂಗಳೂರು: ಮಾತಿನಲ್ಲೇ ಏಟು.. ಮಾತಿನಲ್ಲೇ ಎದಿರೇಟು.. ಕೆಣಕಿದವರಿಗೆ ಹಳೇ ವಿಚಾರಗಳನ್ನ ಕೆದಕಿ ಗುನ್ನಾ. ನಿಜಕ್ಕೂ ರಾಜ್ಯ ಬಿಜೆಪಿ ನಾಯಕರ ನಡುವಿನ ಮುನಿಸು ಹೆಚ್ಚಾಗುತ್ತಲೇ ಇದೆ. ಸಿಎಂ ರಾಜೀನಾಮೆ ವಿಚಾರವನ್ನೇ ಬೀದಿಗೆ ಎಳೆದು ತಂದು ರಂಪಾಟ ಮಾಡುತ್ತಿದ್ದಾರೆ. ಈ ನಡುವೆ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ ಯುದ್ದವೇ ನಡೆದಿದೆ.

ರೇಣುಕಾಚಾರ್ಯ, ಈಶ್ವರಪ್ಪ ಮಧ್ಯೆ ಹುಲಿವೇಷ ಸಮರ ಸಿಎಂ ಬಿಎಸ್ ಯಡಿಯೂರಪ್ಪನವರ ಬದಲಾವಣೆ ಅನ್ನೋ ವಿಷ್ಯ ದೊಡ್ಡ ಬಾಂಬ್ನಂತೆ ಸ್ಫೋಟವಾಗಿದ್ದೇ ತಡ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯೇ ಎದ್ದಂತೆ ಆಗಿತ್ತು. ಅದ್ರಲ್ಲೂ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲವಾಗಿತ್ತು. ಇದ್ರ ಬೆನ್ನಲ್ಲೇ ಸ್ವತಃ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಡ್ತೀನಿ ಅಂತ ಖಡಕ್ ಆಗಿ ಹೇಳಿಬಿಟ್ಟಿದ್ರು. ಇದ್ರಿಂದ ಮತ್ತಷ್ಟು ಆತಂಕಗೊಂಡ ಕಮಲ ನಾಯಕರು ಅಲರ್ಟ್ ಆಗಿದ್ರು. ಈ ನಡುವೆ ಮೊನ್ನೆ ರಾಯಚೂರಿನಲ್ಲಿ ಈಶ್ವರಪ್ಪ ಸಿಎಂ ರಾಜೀನಾಮೆ ಬಗ್ಗೆ ಯಾರು ಮಾತನಾಡುವ ಹಾಗಿಲ್ಲ ಅಂದ್ರು. ಆದ್ರೆ, ಇದೇ ವೇಳೆ ರೇಣುಕಾಚಾರ್ಯ ಹುಲಿವೇಷದ ಆಟ ಬಿಜೆಪಿಯಲ್ಲಿ ನಡೆಯಲ್ಲ ಅಂತ ವ್ಯಂಗ್ಯ ಮಾಡಿದ್ರು. ಈಗ ರೇಣುಕಾಚಾರ್ಯ ಕೂಡ ಈಶ್ವರಪ್ಪ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

‘ಹುಲಿವೇಷ ಎಂದವರು ಆತ್ಮಾವಲೋಕನ ಮಾಡಿಕೊಳ್ಳಲಿ’ ಈಶ್ವರಪ್ಪ ಬಿಜೆಪಿ ಶಿಸ್ತಿನ ಪಕ್ಷ ಅಂತ ರೇಣುಕಾಚಾರ್ಯ ಅವರ ಹುಲಿವೇಷದ ಬಗ್ಗೆ ಮಾತನಾಡಿದ್ರೋ ರೇಣುಕಾಚಾರ್ಯ ಫುಲ್ ಕೆಂಡಮಂಡಲರಾಗಿದ್ದಾರೆ. ನಿನ್ನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ ಈಶ್ವರಪ್ಪ ವಿರುದ್ಧ ಗುಡುಗಿದ್ದಾರೆ. ಹಳೇ ವಿಚಾರಗಳನ್ನ ಕೆದಕಿ ಕೆದಕಿ ಗುಮ್ಮಿದ್ದಾರೆ. ನಾನು ಯಾವುದೇ ವೇಷದಾರಿಯಲ್ಲಾ. ನನಗೆ ಹಿರಿಯರ ಬಗ್ಗೆ ಗೌರವವಿದೆ. ನನಗೆ ಬಣ್ಣ ಹಚ್ಚೋದು, ವೇಷ ಹಾಕೋದು ಗೊತ್ತಿಲ್ಲಾ. ನನ್ನ ಬಗ್ಗೆ ಹುಲಿವೇಷ ಎಂದು ಹೇಳಿದವರು ಆತ್ಮವಾಲೋಕನ ಮಾಡಿಕೊಳ್ಳಲಿ. ಬಿಎಸ್ ಯಡಿಯೂರಪ್ಪ ರಾಜ್ಯಾದ್ಯಕ್ಷರನ್ನಾಗಿ ಮಾಡಿದಾಗ ನೀವು ಯಾವ ವೇಷ ಹಾಕಿಕೊಂಡಿದ್ರಿ. ರಾಜ್ಯಪಾಲರಿಗೆ ಪತ್ರ ಬರೆದು ಆ ಮೇಲೆ ತಿರುಗಿ ಉಲ್ಟಾ ಹೊಡೆದ್ರಿ ಎಂದು ಎಂದು ಪ್ರಶ್ನೆ ಮಾಡಿದ್ದಾರೆ.

‘ನನ್ನ ಬಗ್ಗೆ ಹಗುರವಾಗಿ ಮಾತನಾಡುವುದನ್ನ ಬಿಡಬೇಕು’ ಈಶ್ವರಪ್ಪ ಅವರಿಗೆ ಟಾಂಗ್ ಕೊಟ್ಟ ರೇಣುಕಾಚಾರ್ಯ ಇಲ್ಲಿಗೆ ಸುಮ್ಮನಾಗಲಿಲ್ಲ. ಶಾಸಕ ಅರವಿಂದ್ ಬೆಲ್ಲದ್ ಅವರಿಗೂ ತಮ್ಮದೆ ಆದ ಸ್ಟೈಲ್ನಲ್ಲಿ ಉತ್ತರ ಕೊಟ್ಟಿದ್ದಾರೆ. ನನ್ನ ಬಳಿ ಹಳೇ ಪತ್ರ ಅಲ್ಲ ಇರೋದು. ಪತ್ರ ಬೇಕಾ ಹೇಳಿ ಕಳಿಸಿ ಕೊಡುವೆ. ಆದ್ರೆ, ರಾಜ್ಯಾಧ್ಯಕ್ಷರು ಪತ್ರ ಕೊಡುವುದು ಬೇಡ ಅಂದಿದ್ದಾರೆ ಅಂತ ತಿರುಗೇಟು ಕೊಟ್ಟಿದ್ದಾರೆ. ಒಟ್ನಲ್ಲಿ, ಬಿಜೆಪಿ ನಾಯಕರ ನಡುವಿನ ಸಮರ ತಾರಕಕ್ಕೇರುತ್ತಿದೆ. ಸಿಎಂ ರಾಜೀನಾಮೆ ವಿಚಾರವನ್ನೇ ಮುಂದೆ ಇಟ್ಕೊಂಡು ಒಬ್ಬರ ಕಾಲು ಒಬ್ಬರು ಎಳೀತಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧ ಒಬ್ಬ ಸಚಿವ ದೂರು ನೀಡಿದ್ದು ಇದೇ ಮೊದಲು.. ರಾಜ್ಯಪಾಲರಿಗೆ ದೂರು ನೀಡಿದ್ದು ಎಷ್ಟರ ಮಟ್ಟಿಗೆ ಸರಿ? ಎಂ.ಪಿ. ರೇಣುಕಾಚಾರ್ಯ ಪ್ರಶ್ನೆ

Published On - 9:05 am, Thu, 10 June 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ