AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ.

SP ರಿಷ್ಯಂತ್​ಗೆ ಅವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕ ರೇಣುಕಾಚಾರ್ಯ, ಹೇಳಿದ್ದೇನು ಗೊತ್ತಾ?
ಶಾಸಕ ರೇಣುಕಾಚಾರ್ಯ
TV9 Web
| Edited By: |

Updated on: Jun 15, 2021 | 11:51 AM

Share

ದಾವಣಗೆರೆ: ಎಸ್ಪಿಗೆ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹೇಳಿಕೆ ಬಗ್ಗೆ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ. ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ರೇಣುಕಾಚಾರ್ಯ ವರ್ತನೆ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದರು. ಸದ್ಯ ಈಗ ರೇಣುಕಾಚಾರ್ಯ ಉಲ್ಟಾ ಹೊಡೆದಿದ್ದಾರೆ.

ಪೊಲೀಸರಿಗೆ ಆವಾಜ್ ಎಂಬ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ದಾವಣಗೆರೆ SP ರಿಷ್ಯಂತ್‌ಗೆ ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ವರದಿ ಸತ್ಯಕ್ಕೆ ದೂರದ ವಿಚಾರ ಎಂದು ಜಾರಿಕೊಂಡಿದ್ದಾರೆ.

ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ಮಾಡಿಸಿದ್ದಕ್ಕಾಗಿ ದಾವಣಗೆರೆ SP ರಿಷ್ಯಂತ್‌ ವಿರುದ್ಧ ಶಾಸಕ ರೇಣುಕಾಚಾರ್ಯ ಅವಾಜ್ ಹಾಕಿದ್ದರು. ಸಿಪಿಐ ದೇವರಾಜ್ಗೆ ಕರೆ ಮಾಡಿ ಅಸಮಾಧಾನ ಹೊರ ಹಾಕಿದ್ದರು. ದಾಳಿ ಮಾಡಿದ್ದೀರಾ, ದೊಡ್ಡ ಹೀರೋ ಏನ್ರಿ, ಮಟ್ಕಾ ಆಡೋರನ್ನ ಜೂಜಾಡೋರನ್ನು ಹಿಡೀರಿ, ಇಲ್ಲಿ ಸ್ಟಂಟ್ ಮಾಡೋಕೆ ಬಂದ್ರೆ ನಡೆಯಲ್ಲ. ಮರಳು ಗಣಿಗಾರಿಕೆ ಮಾಡೋರು ಅತ್ಯಾಚಾರ ಕೊಲೆ ಮಾಡಿದ್ದಾರಾ? ಹೊಟ್ಟೆ ಪಾಡಿಗೆ ಮರಳು ಗಣಿಗಾರಿಕೆ ಮಾಡುತ್ತಿದ್ದಾರೆ. ಅವರ ತಂಟೆಗೆ ಬಂದ್ರೆ ನಾನು ಸುಮ್ಮನಿರಲ್ಲ. ನಿಮಗೆ ತಾಕತ್ತಿದ್ದರೆ ಬಂದು ಸೀಜ್ ಮಾಡಿ ನೋಡೋಣ. ತಾಕತ್ತಿದ್ದರೆ ಬಂದು ಮುಟ್ಟಿ ನೋಡಲಿ ಎಂದು ಎಸ್‌ಪಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದರು. ಆದರೆ ವಿಡಿಯೋ ವೈರಲ್ ಬಳಿಕ ಉಲ್ಟಾ ಹೊಡೆದಿದ್ದಾರೆ.

ಇದನ್ನೂ ಓದಿ: ನನ್ನ ಮೇಲೆ ಎಷ್ಟು ಕೇಸ್ ಹಾಕಿಸುತ್ತೀರಿ ಹಾಕಿ, ನಿಮಗೆ ತಾಕತ್ ಇದ್ರೆ ಪ್ರಕರಣ ದಾಖಲಿಸಿ: ಶಾಸಕ ರೇಣುಕಾಚಾರ್ಯ ಸವಾಲು

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?