AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಉಮೇಶ್ ಕತ್ತಿ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, ಅಕ್ರಮ ಬಯಲು ಮಾಡಿದ ಶಾಸಕ

ಬಾಗೇಪಲ್ಲಿ ಪಟ್ಟಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಗೋಡೌನ್ ಮೇಲೆ ಶಾಸಕ, ತಹಶೀಲ್ದಾರ್, ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಬಾಗೇಪಲ್ಲಿ ತಹಶೀಲ್ದಾರ್ ಡಿ.ಎ.ದಿವಾಕರ್ ತಂಡ ಕೆ.ಎಫ್.ಸಿ.ಎಸ್.ಸಿ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ ಗೋಡೌನ್ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಅಕ್ಕಿ, ಗೋದಿ, ರಾಗಿ ವಿತರಣೆಯಲ್ಲಿ ಗೋಲ್ ಮಾಲ್ ನಡೆದಿರುವುದು ಗೊತ್ತಾಗಿದೆ.

ಸಚಿವ ಉಮೇಶ್ ಕತ್ತಿ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, ಅಕ್ರಮ ಬಯಲು ಮಾಡಿದ ಶಾಸಕ
ಸಚಿವ ಉಮೇಶ್ ಕತ್ತಿ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, ಅಕ್ರಮ ಬಯಲು ಮಾಡಿದ ಶಾಸಕ
TV9 Web
| Edited By: ಆಯೇಷಾ ಬಾನು|

Updated on: Jun 13, 2021 | 9:35 AM

Share

ಚಿಕ್ಕಬಳ್ಳಾಫುರ: ಉಮೇಶ್ ಕತ್ತಿ ಸಚಿವರಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಭಾರಿ ಗೋಲ್ಮಾಲ್ ನಡೆಯುತ್ತಿದೆ. ಸ್ವತಃ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಇಲಾಖೆ ಅಧಿಕಾರಿಗಳ ಗೋಲ್ ಮಾಲ್ ಪತ್ತೆ ಹಚ್ಚಿದ್ದಾರೆ.

ಬಾಗೇಪಲ್ಲಿ ಪಟ್ಟಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಗೋಡೌನ್ ಮೇಲೆ ಶಾಸಕ, ತಹಶೀಲ್ದಾರ್, ಅಧಿಕಾರಿಗಳ ತಂಡದಿಂದ ದಾಳಿ ನಡೆಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಬಾಗೇಪಲ್ಲಿ ತಹಶೀಲ್ದಾರ್ ಡಿ.ಎ.ದಿವಾಕರ್ ತಂಡ ಕೆ.ಎಫ್.ಸಿ.ಎಸ್.ಸಿ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ ಗೋಡೌನ್ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಅಕ್ಕಿ, ಗೋದಿ, ರಾಗಿ ವಿತರಣೆಯಲ್ಲಿ ಗೋಲ್ ಮಾಲ್ ನಡೆದಿರುವುದು ಗೊತ್ತಾಗಿದೆ. ತಲಾ ನ್ಯಾಯಬೆಲೆ ಅಂಗಡಿಗಳಿಗೆ ಎರಡು ಕ್ವಿಂಟಲ್ ರಾಗಿ ಕಡಿತ ಮಾಡಿ ಅಧಿಕಾರಿಗಳು 3,500 ಕ್ವಿಂಟಾಲ್ ರಾಗಿ ಖರೀದಿ ಮಾಡದೆ ಮದ್ಯವರ್ತಿಗಳಿಗೆ ಹಣ ನೀಡಿದ್ದಾರೆ.

ಪರಿಶೀಲನೆ ವೇಳೆ 100 ಕ್ವಿಂಟಲ್ ಅಕ್ಕಿ, 150 ಕ್ವಿಂಟಲ್ ಗೋಧಿಯನ್ನು ನ್ಯಾಯಬೆಲೆ ಅಂಗಡಿಗಳಿಗೆ ವಿತರಿಸದೆ ಗೋಲ್ ಮಾಲ್ ಮಾಡಿದ್ದಾರೆ. ಅಧಿಕಾರಿಗಳು ವಿತರಿಸದೆ ಇಟ್ಟುಕೊಂಡಿದ್ದ ಅಕ್ಕಿ, ಗೋದಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ಮಾಡಿಕೊಳ್ಳುತ್ತಿದ್ದರು. ಪ್ರಕರಣ ದೊಡ್ಡದು ಮಾಡದಂತೆ ಶಾಸಕರ ಮೇಲೆ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ. ಗೋಲ್ ಮಾಲ್ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಾಗೇಪಲ್ಲಿ ಪೊಲೀಸರಿಗೆ ದೂರು ನೀಡಲಾಗಿದ್ದು ಕೆ.ಎಫ್.ಸಿ.ಎಸ್.ಸಿ ಗೋಡೌನ್ ಓರ್ವ ಸಿಬ್ಬಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

MLA Reveals golmal in minister umesh katti department

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

MLA Reveals golmal in minister umesh katti department

ಇದನ್ನೂ ಓದಿ: ‘ಕಪ್ಪಗಿದ್ದೀಯ, ಆಂಟಿ ಥರ ಕಾಣ್ತೀಯ, ಡುಮ್ಮಿ ಆಗಿದೀಯ ಅಂದ್ರು’; ಬೇಸರದ ಸಂಗತಿ ಹೊರಹಾಕಿದ ಪ್ರಿಯಾಮಣಿ

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?