AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮನ್ನು ಸಭೆಗೆ ಕರೆದಿರಲಿಲ್ಲ, ಆದರೂ ತಾವು ಬಂದಿದ್ದು ಸಂತೋಷ: ಸಾ.ರಾ. ಮಹೇಶ್​-DC ಸಿಂಧೂರಿ ಟಾಕ್​ ಫೈಟ್​!

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್​ ನಡುವಿನ ಮುಸುಕಿನ ಗುದ್ದಾಟ ಇಂದು ಮುಖಾಮುಖಿಯಾದ ಮೊದಲ ಸಭೆಯಲ್ಲೇ ಬಹಿರಂಗವಾಗಿದೆ. ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ನಿಮ್ಮನ್ನು ಸಭೆಗೆ ಕರೆದಿರಲಿಲ್ಲ, ಆದರೂ ತಾವು ಬಂದಿದ್ದು ಸಂತೋಷ: ಸಾ.ರಾ. ಮಹೇಶ್​-DC ಸಿಂಧೂರಿ ಟಾಕ್​ ಫೈಟ್​!
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ (ಎಡ); ಶಾಸಕ ಸಾ.ರಾ.ಮಹೇಶ್ (ಬಲ)
KUSHAL V
| Edited By: |

Updated on: Jan 12, 2021 | 4:46 PM

Share

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್​ ನಡುವಿನ ಮುಸುಕಿನ ಗುದ್ದಾಟ ಇಂದು ಮುಖಾಮುಖಿಯಾದ ಮೊದಲ ಸಭೆಯಲ್ಲೇ ಬಹಿರಂಗವಾಗಿದೆ. ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆಯಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ವೇದಿಕೆಯಲ್ಲಿ ಆಸನದ ವ್ಯವಸ್ಥೆ ಕಲ್ಪಿಸಲಾಗಿರಲಿಲ್ಲ. ಹಾಗಾಗಿ, ಸಿಂಧೂರಿ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಕೊಳ್ಳಬೇಕಾಯಿತು.

ಈ ವೇಳೆ, ಸಭೆಯಲ್ಲಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದ ಡಿಸಿ ಸಿಂಧೂರಿಗೆ ನಿಮ್ಮ ಮಾತು ಕೇಳುತ್ತಿಲ್ಲ, ಮಾಸ್ಕ್ ತೆಗೆದು ಮಾತನಾಡಿ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು. ಈ ನಡುವೆ, ನಾನು ಮಾಸ್ಕ್ ತೆಗೆಯಲ್ಲ, ಮಾಸ್ಕ್ ತೆಗೆದು ಮಾತಾಡಬಾರದು. ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಡಿಸಿ ರೋಹಿಣಿ ಸಿಂಧೂರಿ ಶಾಸಕರಿಗೆ ಪರೋಕ್ಷವಾಗಿ ಟಾಂಗ್​ ಕೊಟ್ಟರು.

ಜೊತೆಗೆ, ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ. ಹಾಗಾಗಿ ನೀವು ಸಮ್ಮತಿಸಿದರೆ ಸಭೆಯಿಂದ ತೆರಳುವೆ ಎಂದು ಸಹ ಹೇಳಿದರು.

ನಿಮ್ಮನ್ನು ಸಭೆಗೆ ಕರೆದಿರಲಿಲ್ಲ. ಆದರೂ, ತಾವು ಬಂದಿದ್ದು ಸಂತೋಷ. ಜಿಲ್ಲಾಧಿಕಾರಿಗೆ ಸಭೆಯ ಬಗ್ಗೆ ಮಾಹಿತಿ ಕೊಡುವುದು ಕರ್ತವ್ಯ. ಹಾಗಾಗಿ ನಾವು ಮಾಹಿತಿ ಕೊಟ್ಟಿದ್ದೇವೆ ಎಂದು ಸಾ.ರಾ. ಮಹೇಶ್ ಹೇಳಿದರು. ಮೈಸೂರಿಗೆ ಬಂದ ಕಾಗದ ಪತ್ರಗಳ ಸಮಿತಿಯನ್ನೂ ಸ್ವಾಗತಿಸಿಲ್ಲ. ಆದರೂ ಪರವಾಗಿಲ್ಲ ಸಮಯ ಇದ್ದರೆ ಇರಿ ಎಂದು ಸಹ ಶಾಸಕರು ಹೇಳಿದರು.

ಜೊತೆಗೆ, ನಿಮಗೆ ಬೇರೆ ಕೆಲಸ ಇದ್ದರೆ ಹೋಗಿ ಎಂದು ಹೇಳಿದರು. ಸಾ.ರಾ.ಮಹೇಶ್ ಹೀಗೆ ಹೇಳುತ್ತಿದ್ದಂತೆ ಸಭೆಯಿಂದ ತೆರಳಿದ ಡಿಸಿ ಸಿಂಧೂರಿ ಅವರು ತಮ್ಮ ಕಾರು ಹತ್ತಿ ಬೇಸರದಿಂದ ತೆರಳಿದರು.

ಅನ್ನದಾತನೊಂದಿಗೆ ನಾವು: ಉಳುಮೆಯ ನೆಲದಿಂದ ಕಟ್ಟುವ ನಾಡಿನವರೆಗೂ…