Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ; ‘ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬೆಡ್ ಬ್ಲಾಕಿಂಗ್​ ಹಗರಣದಲ್ಲಿ ತರಲಾಗಿದೆ’

Bengaluru Bed allotment Scam: ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸಿಸಿಬಿಯವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ; ‘ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬೆಡ್ ಬ್ಲಾಕಿಂಗ್​ ಹಗರಣದಲ್ಲಿ ತರಲಾಗಿದೆ’
ಶಾಸಕ ಸತೀಶ್ ರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ
Follow us
guruganesh bhat
|

Updated on:May 06, 2021 | 3:29 PM

ಬೆಂಗಳೂರು: ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ಹಗರಣದ ಆರೋಪ ತಮಗೇ ತಿರುಗುಬಾಣವಾಗುತ್ತಿರುವ ಕುರಿತು ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಏಜೆನ್ಸಿಗಳನ್ನು ನೇಮಿಸಿದ್ದ ಓರ್ವ ಐಎಎಸ್ ಅಧಿಕಾರಿ ನನ್ನ ಬಗ್ಗೆ ಸುದ್ದಿ ಹಬ್ಬಿಸುತ್ತಿದ್ದಾರೆ. ಈಗ ಬೆಡ್ ಬ್ಲಾಕಿಂಗ್ ಹಗರಣದಲ್ಲಿ ತನ್ನ ಹೆಸರು ಬಯಲಾಗುತ್ತದೆ ಎಂದು ನನ್ನ ಹೆಸರನ್ನು ಈ ಪ್ರಕರಣದಲ್ಲಿ ತರುವ ಕುತಂತ್ರ ಮಾಡುತ್ತಿದ್ದಾರೆ. ತಾವು ಸಿಕ್ಕಿಬೀಳಬಾರದು ಎಂದು ನನ್ನ ಹೆಸರು ಹೇಳಿದ್ದಾರೆ. ಈ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಆಪಾದಿಸಿದರು.

ಬೆಡ್ ಬ್ಲಾಕಿಂಗ್ ಹಗರಣದ ಎಲ್ಲಾ ದಾಖಲೆಗಳನ್ನು ಕಮೀಷನರ್ ಹಾಗೂ ಮುಖ್ಯಮಂತ್ರಿಗಳಿಗೆ ನೀಡಿದ್ದೇವೆ. ನಾನು ಬೆಡ್ ಬ್ಲಾಕಿಂಗ್ ಮಾಡಿರುವುದಕ್ಕೆ ದಾಖಲೆಗಳಿದ್ದಲ್ಲಿ ಬಹಿರಂಗಪಡಿಸಿ ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಶಾಸಕ ಸತೀಶ್ ರೆಡ್ಡಿ, ಬೆಡ್ ಬ್ಲಾಕಿಂಗ್ ದಂದೆಯನ್ನು ಬೆಳಕಿಗೆ ತಂದಾಗ ಕೆಪಿಸಿಸಿ ಅಧ್ಯಕ್ಷರು ಸೇರಿ ಹಲವು ನಾಯಕರು ಅಭಿನಂದನೆ ಮಾಡಿದ್ದರು. ನಾವು ಆಗಲೂ ಯಾರ ಬಗ್ಗೆಯೂ ಸಹ ಮಾತನಾಡಿಲ್ಲ. ಈಗಲೂ ಅಷ್ಟೇ ಯಾರ ಬಗ್ಗೆಯೂ ನಾವು ಮಾತನಾಡುವುದಿಲ್ಲ. ವಿರೋಧ ಪಕ್ಷದ ಕೆಲಸ ನಾವೇ ಮಾಡ್ತಾ ಇದ್ದೀವಿ ಅಂತ ಅವರಿಗೆ ಅನಿಸಿದೆ. ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸಿಸಿಬಿಯವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕಾಗಿ ಮೇ 8ರಿಂದ 16ರವರೆಗೆ ಕೇರಳದಲ್ಲಿ ಸಂಪೂರ್ಣ ಲಾಕ್​ಡೌನ್

Published On - 3:26 pm, Thu, 6 May 21

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ