AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ; ‘ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬೆಡ್ ಬ್ಲಾಕಿಂಗ್​ ಹಗರಣದಲ್ಲಿ ತರಲಾಗಿದೆ’

Bengaluru Bed allotment Scam: ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸಿಸಿಬಿಯವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ; ‘ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬೆಡ್ ಬ್ಲಾಕಿಂಗ್​ ಹಗರಣದಲ್ಲಿ ತರಲಾಗಿದೆ’
ಶಾಸಕ ಸತೀಶ್ ರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ
guruganesh bhat
|

Updated on:May 06, 2021 | 3:29 PM

Share

ಬೆಂಗಳೂರು: ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ಹಗರಣದ ಆರೋಪ ತಮಗೇ ತಿರುಗುಬಾಣವಾಗುತ್ತಿರುವ ಕುರಿತು ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಏಜೆನ್ಸಿಗಳನ್ನು ನೇಮಿಸಿದ್ದ ಓರ್ವ ಐಎಎಸ್ ಅಧಿಕಾರಿ ನನ್ನ ಬಗ್ಗೆ ಸುದ್ದಿ ಹಬ್ಬಿಸುತ್ತಿದ್ದಾರೆ. ಈಗ ಬೆಡ್ ಬ್ಲಾಕಿಂಗ್ ಹಗರಣದಲ್ಲಿ ತನ್ನ ಹೆಸರು ಬಯಲಾಗುತ್ತದೆ ಎಂದು ನನ್ನ ಹೆಸರನ್ನು ಈ ಪ್ರಕರಣದಲ್ಲಿ ತರುವ ಕುತಂತ್ರ ಮಾಡುತ್ತಿದ್ದಾರೆ. ತಾವು ಸಿಕ್ಕಿಬೀಳಬಾರದು ಎಂದು ನನ್ನ ಹೆಸರು ಹೇಳಿದ್ದಾರೆ. ಈ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಆಪಾದಿಸಿದರು.

ಬೆಡ್ ಬ್ಲಾಕಿಂಗ್ ಹಗರಣದ ಎಲ್ಲಾ ದಾಖಲೆಗಳನ್ನು ಕಮೀಷನರ್ ಹಾಗೂ ಮುಖ್ಯಮಂತ್ರಿಗಳಿಗೆ ನೀಡಿದ್ದೇವೆ. ನಾನು ಬೆಡ್ ಬ್ಲಾಕಿಂಗ್ ಮಾಡಿರುವುದಕ್ಕೆ ದಾಖಲೆಗಳಿದ್ದಲ್ಲಿ ಬಹಿರಂಗಪಡಿಸಿ ಸಾಬೀತು ಮಾಡಲಿ ಎಂದು ಸವಾಲು ಹಾಕಿದರು. ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಶಾಸಕ ಸತೀಶ್ ರೆಡ್ಡಿ, ಬೆಡ್ ಬ್ಲಾಕಿಂಗ್ ದಂದೆಯನ್ನು ಬೆಳಕಿಗೆ ತಂದಾಗ ಕೆಪಿಸಿಸಿ ಅಧ್ಯಕ್ಷರು ಸೇರಿ ಹಲವು ನಾಯಕರು ಅಭಿನಂದನೆ ಮಾಡಿದ್ದರು. ನಾವು ಆಗಲೂ ಯಾರ ಬಗ್ಗೆಯೂ ಸಹ ಮಾತನಾಡಿಲ್ಲ. ಈಗಲೂ ಅಷ್ಟೇ ಯಾರ ಬಗ್ಗೆಯೂ ನಾವು ಮಾತನಾಡುವುದಿಲ್ಲ. ವಿರೋಧ ಪಕ್ಷದ ಕೆಲಸ ನಾವೇ ಮಾಡ್ತಾ ಇದ್ದೀವಿ ಅಂತ ಅವರಿಗೆ ಅನಿಸಿದೆ. ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸಿಸಿಬಿಯವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕಾಗಿ ಮೇ 8ರಿಂದ 16ರವರೆಗೆ ಕೇರಳದಲ್ಲಿ ಸಂಪೂರ್ಣ ಲಾಕ್​ಡೌನ್

Published On - 3:26 pm, Thu, 6 May 21

ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?