AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಿಂಗಪುರ ಪುರಸಭೆ ಸದಸ್ಯೆಯರ ಘರ್ಷಣೆ: ಶಾಸಕ ಸಿದ್ದು ಸವದಿಗೆ ಕಂಟಕ?

ಮಹಾಲಿಂಗಪುರದಲ್ಲಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ವೇಳೆ ಗಲಾಟೆ ನಡೆದಿತ್ತು. ವೋಟ್ ಮಾಡಲು ಪುರಸಭೆ ಒಳಬಾರದಂತೆ ಹೊರಗಡೆ ಕಳಿಸಲು ಸದಸ್ಯರು ಮುಂದಾದಾಗ ಘರ್ಷಣೆ ನಡೆದಿತ್ತು.

ಮಹಾಲಿಂಗಪುರ ಪುರಸಭೆ ಸದಸ್ಯೆಯರ ಘರ್ಷಣೆ: ಶಾಸಕ ಸಿದ್ದು ಸವದಿಗೆ ಕಂಟಕ?
ಮಹಾಲಿಂಗಪುರದಲ್ಲಿ ನಡೆದ ಪುರಸಭೆ ಸದಸ್ಯೆಯರ ನೂಕಾಟ, ತಳ್ಳಾಟ ಸಂದರ್ಭದ ಚಿತ್ರ
sandhya thejappa
| Edited By: |

Updated on: Jan 05, 2021 | 8:24 PM

Share

ಬಾಗಲಕೋಟೆ: ಮಹಾಲಿಂಗಪುರದಲ್ಲಿ 2020ರ ನವೆಂಬರ್ 9 ರಂದು ನಡೆದ ಪುರಸಭೆ ಸದಸ್ಯೆಯರ ನೂಕಾಟ, ತಳ್ಳಾಟಕ್ಕೆ ಸಂಬಂಧಿಸಿ ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ ಸೇರಿದಂತೆ ಸುಮಾರು 31 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಾಗಲಕೋಟೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಬಗ್ಗೆ ಕೇಸ್ ವಿಚಾರಣೆ ನಡೆಯಲಿದೆ.

ಮಹಾಲಿಂಗಪುರದಲ್ಲಿ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ವೇಳೆ ಗಲಾಟೆ ನಡೆದಿತ್ತು. ವೋಟ್ ಮಾಡಲು ಪುರಸಭೆ ಒಳಬಾರದಂತೆ ಹೊರಗಡೆ ಕಳಿಸಲು ಸದಸ್ಯರು ಮುಂದಾದಾಗ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಚಾಂದಿನಿ ನಾಯಕ್, ಸವಿತಾ ಹುರಕಡ್ಲಿ ಮತ್ತು ಗೋದಾವರಿ ಬಾಟ್​ರವರನ್ನು ತಳ್ಳಿದ್ದರು. ಇದರ ಪರಿಣಾಮ ಮೂರು ತಿಂಗಳ ಗರ್ಭಿಣಿಯಾಗಿದ್ದ ಚಾಂದಿನಿ ನಾಯಕ್​ ಅವರಿಗೆ ಗರ್ಭಪಾತವಾಗಿತ್ತು.

ಈ ಸಂಬಂಧ ಚಾಂದಿನಿ ನಾಯಕ್ ತೇರದಾಳ ಶಾಸಕ ಸಿದ್ದು ಸವದಿ ಸೇರಿದಂತೆ ಒಟ್ಟು 31 ಜನರ ವಿರುದ್ಧ ದೂರು ನೀಡಿದ್ದರು. ಶಾಸಕರು ಮತ್ತು ಸದಸ್ಯರ ವಿರುದ್ಧ ಮಹಿಳೆಯ ಘನತೆಗೆ ಧಕ್ಕೆ, ಕಿಡ್ನಾಪ್, ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ದಾಖಲು ಮಾಡಲಾಗಿತ್ತು. ಕೋರ್ಟ್ ನಿರ್ದೇಶನದ ಮೇರೆಗೆ ಮಹಾಲಿಂಗಪುರ ಠಾಣೆಯಲ್ಲಿ ಡಿಸೆಂಬರ್ 31ರಂದು ಎಫ್ಐಆರ್ ಕೂಡಾ ದಾಖಲಾಗಿತ್ತು. ಜಮಖಂಡಿ ಉಪವಿಭಾಗದ ಪೊಲೀಸರು ದೂರುದಾರೆ ಚಾಂದಿನಿ ನಾಯಕ್​ಗೂ ನೋಟಿಸ್ ನೀಡಿದ್ದರು.

ಘಟನೆಗೆ ಸಂಬಂಧಿಸಿದಂತೆ ಮಹಜರು ಮಾಡಲು ಸ್ಥಳಕ್ಕೆ ಬಂದ ಸಿಬ್ಬಂದಿಗೆ ಸಹಕರಿಸುವಂತೆ ಚಾಂದಿನಿ ನಾಯಕ್​ಗೆ ನೋಟಿಸ್ ನೀಡಿದ್ದು, ನಿನ್ನೆ (ಡಿಸೆಂಬರ್ 5) ಸ್ಥಳ ಮಹಜರು ನಡೆಯಿತು. ಘಟನೆ ಬಗ್ಗೆ ಚಾಂದಿನಿ ನಾಯಕ್​ರವರಿಂದ ಮಹಲಿಂಗಪುರ ಠಾಣೆ ಪೊಲೀಸರು ವಿವರಣೆ ಪಡೆದರು. ಅಲ್ಲದೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದಲೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಹಾಲಿಂಗಪುರ ಪುರಸಭೆ ನೂಕಾಟ ಪ್ರಕರಣ: BJP ಸದಸ್ಯೆ ಚಾಂದಿನಿ ನಾಯಕ್​ಗೆ ಗರ್ಭಪಾತ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!