AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ. ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ […]

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?
ಸಾಧು ಶ್ರೀನಾಥ್​
|

Updated on: Apr 20, 2020 | 9:14 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.

ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಮೀರ್ ಈ ಕುರಿತು ಒಂದಲ್ಲ ಹತ್ತು ವಿಡಿಯೋ ಚಿತ್ರಗಳನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ, ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಅದಾದ ಮೇಲೆ ಶಾಸಕ ಜಮೀರ್ ಗಪ್ ಚುಪ್ ಆಗುತ್ತಾರೆ. ಅದೇ ವೇಳೆ ಪಾದರಾಯನಪುರದಲ್ಲಿ ನೂರಾರು ಮಂದಿ ಪೊಲೀಸರ ಮೇಲೆ ಗೂಂಡಾಗಿರಿಗೆ ಇಳಿಯುತ್ತಾರೆ. ಆದರೆ ಇದುವರೆಗೂ ಶಾಸಕ ಜಮೀರ್ ಮಾತ್ರ ಇನ್ನೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇಷ್ಟೆಲ್ಲಾ ಅನಾಹುತಗಳು ನಡೆದಿದ್ದರೂ ಅವರ ಫೇಸ್ ಬುಕ್ ಸಹ ಸೈಲೆಂಟಾಗಿದೆ! ಬೆಂಗಳೂರಿನ ಜನತೆಯಲ್ಲಿ ಶಾಸಕ ಜಮೀರರ ಈ ನಡುವಳಿಕೆಯು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ