AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ. ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ […]

ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ: ಶಾಸಕ ಜಮೀರ್ ಗಪ್ ಚುಪ್! ಎಲ್ಲಿದ್ದೀರಾ ಜಮೀರ್ ಖಾನ್?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 20, 2020 | 9:14 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಸಂಘಟಿತ ಗೂಂಡಾಗಿರಿ ನಡೆದಿರುವಾಗ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಎಲ್ಲಿ ಅವಿತಿಟ್ಟುಕೊಂಡಿದ್ದಾರೆ? ಏನು ಮಾಡುತ್ತಿದ್ದಾರೆ? ಪೊಲೀಸರ ಮೇಲೆ ಅಕ್ಷಮ್ಯ ಗೂಂಡಾಗಿರಿ ನಡೆಸಿರುವ ಜನರ ವಿರುದ್ಧ ಒಂದೇ ಒಂದು ಹೇಳಿಕೆಯನ್ನೂ ನೀಡದೆ, ಆ ದುರ್ಬುದ್ಧಿಯ ಜನರಿಗೆ ಬುದ್ಧಿವಾದ ಹೇಳದಷ್ಷು ಅಸಹಾಯಕರಾದರೆ ಜಮೀರ್? ಎಂದು ಬೆಂಗಳೂರಿನ ಜನ ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.

ಖಬರಸ್ತಾನದಲ್ಲಿ ಜಮೀರ್ ಪ್ರತ್ಯಕ್ಷ: ವಾಸ್ತವಾಗಿ ನಿನ್ನೆ ರಾತ್ರಿ ಇದೇ ಜಮೀರ್ ಅಹಮದ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಪಾದರಾಯನಪುರದಲ್ಲಿ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಮೀರ್ ಈ ಕುರಿತು ಒಂದಲ್ಲ ಹತ್ತು ವಿಡಿಯೋ ಚಿತ್ರಗಳನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ, ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಅದಾದ ಮೇಲೆ ಶಾಸಕ ಜಮೀರ್ ಗಪ್ ಚುಪ್ ಆಗುತ್ತಾರೆ. ಅದೇ ವೇಳೆ ಪಾದರಾಯನಪುರದಲ್ಲಿ ನೂರಾರು ಮಂದಿ ಪೊಲೀಸರ ಮೇಲೆ ಗೂಂಡಾಗಿರಿಗೆ ಇಳಿಯುತ್ತಾರೆ. ಆದರೆ ಇದುವರೆಗೂ ಶಾಸಕ ಜಮೀರ್ ಮಾತ್ರ ಇನ್ನೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇಷ್ಟೆಲ್ಲಾ ಅನಾಹುತಗಳು ನಡೆದಿದ್ದರೂ ಅವರ ಫೇಸ್ ಬುಕ್ ಸಹ ಸೈಲೆಂಟಾಗಿದೆ! ಬೆಂಗಳೂರಿನ ಜನತೆಯಲ್ಲಿ ಶಾಸಕ ಜಮೀರರ ಈ ನಡುವಳಿಕೆಯು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ