AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಷತ್ ಚುನಾವಣೆ: ಬಂಡಾಯವಾಗಿ ಸ್ಪರ್ಧಿಸಿರುವ ಐವರು ಕಾಂಗ್ರೆಸ್​ನಿಂದ ಉಚ್ಚಾಟನೆ

ಮೂರು ಶಿಕ್ಷಕರ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಇದೇ ಜೂನ್ 3ರಂದು ಚುನಾವಣೆ ನಡೆಯಲಿದ್ದು, ಕಾಂಗ್ರಸ್​ನ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿರುವ ಐವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿದೆ, ಹಾಗಾದ್ರೆ, ಉಚ್ಛಾಟನೆಗೊಂಡ ಐವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ಯಾರ್ಯಾರು? ಎನ್ನುವ ವಿವರ ಇಲ್ಲಿದೆ.

ಪರಿಷತ್ ಚುನಾವಣೆ: ಬಂಡಾಯವಾಗಿ ಸ್ಪರ್ಧಿಸಿರುವ ಐವರು ಕಾಂಗ್ರೆಸ್​ನಿಂದ ಉಚ್ಚಾಟನೆ
ಪ್ರಸನ್ನ ಗಾಂವ್ಕರ್​
| Edited By: |

Updated on: May 23, 2024 | 6:36 PM

Share

ಬೆಂಗಳೂರು, (ಮೇ 23): ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಈಗ ವಿಧಾನ ಪರಿಷತ್ ಚುನಾವಣೆ ಫೈಟ್ ಜೋರಾಗಿದೆ. ಕಾಂಗ್ರೆಸ್-ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ತಂತ್ರಗಾರಿಕೆ ನಡೆಯುತ್ತಿದೆ. ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ. ಇದಕ್ಕೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ, ಆದರೂ ಕೈ ಟಿಕೆಟ್ ತಪ್ಪಿರುವುದರಿಂದ ಕೆಲ ನಾಯಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರಿಂದ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿದೆ. ​ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಒಟ್ಟು ಐವರು ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

ಉಚ್ಚಾಟಿನೆಗೊಂಡವರು

  • ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ -ಎಸ್.ಪಿ.ದಿನೇಶ್
  • ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ- ಫರ್ಡಿನಾಂಡ್ ಲಾರೆನ್ಸ್
  • ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ ಅಭ್ಯರ್ಥಿ -ಬಿ.ಆರ್‌.ನಂಜೇಶ್‌
  • ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ್ ತಾಳಿಕಟ್ಟೆ ಮತ್ತು ವಿನೋದ್ ಶಿವರಾಜ್

ಇದನ್ನೂ ಓದಿ: Karnataka MLC Election 2024: ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

  • ನೈಋತ್ಯ ಶಿಕ್ಷಕರ ಕ್ಷೇತ್ರ – ಕೆ.ಕೆ. ಮಂಜುನಾಥ್
  • ದಕ್ಷಿಣ ಶಿಕ್ಷಕರ ಕ್ಷೇತ್ರ – ಮರತಿಬ್ಬೇಗೌಡ
  • ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ಟಿ.ಶ್ರೀನಿವಾಸ್
  • ಈಶಾನ್ಯ ಪದವೀಧರ ಕ್ಷೇತ್ರ – ಡಾ.ಚಂದ್ರಶೇಖರ ಪಾಟೀಲ
  • ನೈಋತ್ಯ ಪದವೀಧರ ಕ್ಷೇತ್ರ – ಆಯನೂರು ಮಂಜುನಾಥ್
  • ಬೆಂಗಳೂರು ಪದವೀಧರ ಕ್ಷೇತ್ರ – ರಾಮೋಜಿ

ಇನ್ನು ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಪ್ರಕಟಿಸಿದೆ. ವಿಧಾನ ಪರಿಷತ್​ನ 6 ಕ್ಷೇತ್ರಗಳ ಪೈಕಿ 2 ಕ್ಷೇತ್ರವನ್ನು ಮಿತ್ರ ಪಕ್ಷ ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ.

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ ವೇಳಾಪಟ್ಟಿ

  • ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16, 2024
  • ನಾಮಪತ್ರ ಪರಿಶೀಲನೆ: ಮೇ 17, 2024
  • ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಮೇ 20, 2024
  • ಮತದಾನ: ಜೂನ್‌ 03, 2024
  • ಫಲಿತಾಂಶ: ಜೂನ್‌ 06, 2024

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ